Homeರಾಷ್ಟ್ರೀಯ‘ಬಿಹಾರದ ಲಾಠಿವೀರ’: ಹೆಲ್ಮೆಟ್‌ ಧರಿಸದ ಕಾರಣಕ್ಕೆ ಬೈಕ್‌ ಸವಾರರಿಗೆ ಥಳಿಸಿದ ಜಿಲ್ಲಾಧಿಕಾರಿ

‘ಬಿಹಾರದ ಲಾಠಿವೀರ’: ಹೆಲ್ಮೆಟ್‌ ಧರಿಸದ ಕಾರಣಕ್ಕೆ ಬೈಕ್‌ ಸವಾರರಿಗೆ ಥಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ಬಿಹಾರದ ಸರನ್‌ ಜಿಲ್ಲೆಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಯೋಗೇಂದ್ರ ಕುಮಾರ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹೆಲ್ಮೆಟ್‌ ಧರಿಸಿಲ್ಲ ಎಂಬ ಕಾರಣಕ್ಕೆ ಲಾಠಿ ಪ್ರಹಾರ ನಡೆಸಿದ್ದು, ಸಾಮಾಜಿಕ ಮಾಧ್ಯಮಗಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಯನ್ನು ಜನರು, “ಬಿಹಾರದ ಲಾಠಿವೀರ ಎಸ್.ಡಿ.ಎಂ” ಎಂದು ಕರೆದಿದ್ದಾರೆ.

ಎಸ್‌ಡಿಎಂ ಮಾತ್ರವಲ್ಲದೆ, ಅವರ ಜೊತೆಯಲ್ಲಿದ್ದ ಹಲವು ಪೊಲೀಸರು ಕೂಡಾ ಬೈಕ್ ಸವಾರನನ್ನು ತಡೆದು ದೊಣ್ಣೆಯಿಂದ ಥಳಿಸಲು ಆರಂಭಿಸಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳು ವರದಿ ಮಾಡಿರುವಂತೆ, ಜೂನ್ 20ರಂದು ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅಗ್ನಿಪಥ್‌ ವಿರುದ್ಧ ಪ್ರತಿಭಟನೆ ನಡೆಸಲು ಬಿಹಾರ ಬಂದ್‌ಗಾಗಿ ಹಲವು ಸಂಘಟನೆಗಳು ಬೀದಿಗಿಳಿದ್ದವು. ಈ ಬಂದ್‌ಗೆ ಸಾರ್ವಜನಿಕರ ಬೆಂಬಲವೂ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ನಗರದಲ್ಲಿ ಸೆಕ್ಷನ್ 144 ವಿಧಿಸಿದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ವೈರಲ್ ವೀಡಿಯೊದಲ್ಲಿ, ಕೆಲವು ಪೊಲೀಸರೊಂದಿಗೆ ವ್ಯಕ್ತಿಯೊಬ್ಬರು ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ ಕೈಯಲ್ಲಿ ಕೋಲು ಹಿಡಿದಿರುವುದನ್ನು ಕಾಣುತ್ತದೆ. ಅವರು ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರರನ್ನು ತಡೆದು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಸರನ್‌ ಜಿಲ್ಲೆಯ ಛಾಪ್ರಾದ ತಾರೈಯಾ ಪ್ರದೇಶದಲ್ಲಿ ಮರ್ಹೌರಾದ ಎಸ್‌ಡಿಎಂ ಯೋಗೇಂದ್ರ ಕುಮಾರ್ ಕೂಡಾ ಬೀದಿಗೆ ಇಳಿದಿದ್ದರು.

ಕೆಲವು ಪೊಲೀಸರು ಬೈಕ್ ಸವಾರನನ್ನು ನಿಲ್ಲಿಸಿ ನಂತರ ಏನನ್ನೋ ಕೇಳುತ್ತಿರುತ್ತಾರೆ. ಆಗ ಎಸ್‌ಡಿಎಂ ಯೋಗೇಂದ್ರ ಕುಮಾರ್‌ ಅವರು ಲಾಠಿ ಹಿಡಿದುಕೊಂಡು ಎಲ್ಲಿಗೆ ಹೋಗುತ್ತಿದ್ದೀರಿ, ಹೆಲ್ಮೆಟ್‌ಗಳು ಎಲ್ಲಿವೆ ಎಂದು ಕೇಳುತ್ತಾ ಲಾಠಿಯಲ್ಲಿ ಇಬ್ಬರಿಗೂ ಥಳಿಸುತ್ತಾರೆ. ಘಟನೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಎಸ್‌ಡಿಎಂ ಯೋಗೇಂದ್ರ ಕುಮಾರ್ ಯಾವ ಪ್ರತಿಕ್ರಿಯೆಯೂ ನೀಡಿಲ್ಲ ಎಂದು ವರದಿ ಮಾಡಿವೆ.

ಇದನ್ನೂ ಓದಿ: ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ಇತ್ತೀಚಿನ ದಿನಗಳಲ್ಲಿ ಬಿಹಾರ ರಾಜ್ಯದ ಅಧಿಕಾರಿಗಳಿಂದ ಸಾಮಾನ್ಯ ನಾಗರಿಕರ ಮೇಲೆ ನಡೆಸುತ್ತಿರುವ ಕಿರುಕುಳದ ಪ್ರಕರಣಗಳು ಮುನ್ನೆಲೆಗೆ ಬರುತ್ತಿವೆ.

ಕೆಲವು ದಿನಗಳ ಮುಂಚೆ ರಾಜ್ಯದ ಗೋಪಾಲ್‌ಗಂಜ್‌ನಲ್ಲಿ ವಾಹನ ತಪಾಸಣೆ ವೇಳೆ ಡಿಎಸ್‌ಪಿ ಹೆಡ್‌ಕ್ವಾರ್ಟರ್‌ ಜ್ಯೋತಿ ಕುಮಾರಿ ಅವರು ಬೈಕ್‌ ಸವಾರನಿಗೆ ಕಪಾಳಮೋಕ್ಷ ಮಾಡಿ, ಲಾಠಿ ಪ್ರಹಾರ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...