Homeರಾಷ್ಟ್ರೀಯ‘ಬಿಹಾರದ ಲಾಠಿವೀರ’: ಹೆಲ್ಮೆಟ್‌ ಧರಿಸದ ಕಾರಣಕ್ಕೆ ಬೈಕ್‌ ಸವಾರರಿಗೆ ಥಳಿಸಿದ ಜಿಲ್ಲಾಧಿಕಾರಿ

‘ಬಿಹಾರದ ಲಾಠಿವೀರ’: ಹೆಲ್ಮೆಟ್‌ ಧರಿಸದ ಕಾರಣಕ್ಕೆ ಬೈಕ್‌ ಸವಾರರಿಗೆ ಥಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ಬಿಹಾರದ ಸರನ್‌ ಜಿಲ್ಲೆಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಯೋಗೇಂದ್ರ ಕುಮಾರ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹೆಲ್ಮೆಟ್‌ ಧರಿಸಿಲ್ಲ ಎಂಬ ಕಾರಣಕ್ಕೆ ಲಾಠಿ ಪ್ರಹಾರ ನಡೆಸಿದ್ದು, ಸಾಮಾಜಿಕ ಮಾಧ್ಯಮಗಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಯನ್ನು ಜನರು, “ಬಿಹಾರದ ಲಾಠಿವೀರ ಎಸ್.ಡಿ.ಎಂ” ಎಂದು ಕರೆದಿದ್ದಾರೆ.

ಎಸ್‌ಡಿಎಂ ಮಾತ್ರವಲ್ಲದೆ, ಅವರ ಜೊತೆಯಲ್ಲಿದ್ದ ಹಲವು ಪೊಲೀಸರು ಕೂಡಾ ಬೈಕ್ ಸವಾರನನ್ನು ತಡೆದು ದೊಣ್ಣೆಯಿಂದ ಥಳಿಸಲು ಆರಂಭಿಸಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳು ವರದಿ ಮಾಡಿರುವಂತೆ, ಜೂನ್ 20ರಂದು ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅಗ್ನಿಪಥ್‌ ವಿರುದ್ಧ ಪ್ರತಿಭಟನೆ ನಡೆಸಲು ಬಿಹಾರ ಬಂದ್‌ಗಾಗಿ ಹಲವು ಸಂಘಟನೆಗಳು ಬೀದಿಗಿಳಿದ್ದವು. ಈ ಬಂದ್‌ಗೆ ಸಾರ್ವಜನಿಕರ ಬೆಂಬಲವೂ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ನಗರದಲ್ಲಿ ಸೆಕ್ಷನ್ 144 ವಿಧಿಸಿದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ವೈರಲ್ ವೀಡಿಯೊದಲ್ಲಿ, ಕೆಲವು ಪೊಲೀಸರೊಂದಿಗೆ ವ್ಯಕ್ತಿಯೊಬ್ಬರು ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ ಕೈಯಲ್ಲಿ ಕೋಲು ಹಿಡಿದಿರುವುದನ್ನು ಕಾಣುತ್ತದೆ. ಅವರು ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರರನ್ನು ತಡೆದು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಸರನ್‌ ಜಿಲ್ಲೆಯ ಛಾಪ್ರಾದ ತಾರೈಯಾ ಪ್ರದೇಶದಲ್ಲಿ ಮರ್ಹೌರಾದ ಎಸ್‌ಡಿಎಂ ಯೋಗೇಂದ್ರ ಕುಮಾರ್ ಕೂಡಾ ಬೀದಿಗೆ ಇಳಿದಿದ್ದರು.

ಕೆಲವು ಪೊಲೀಸರು ಬೈಕ್ ಸವಾರನನ್ನು ನಿಲ್ಲಿಸಿ ನಂತರ ಏನನ್ನೋ ಕೇಳುತ್ತಿರುತ್ತಾರೆ. ಆಗ ಎಸ್‌ಡಿಎಂ ಯೋಗೇಂದ್ರ ಕುಮಾರ್‌ ಅವರು ಲಾಠಿ ಹಿಡಿದುಕೊಂಡು ಎಲ್ಲಿಗೆ ಹೋಗುತ್ತಿದ್ದೀರಿ, ಹೆಲ್ಮೆಟ್‌ಗಳು ಎಲ್ಲಿವೆ ಎಂದು ಕೇಳುತ್ತಾ ಲಾಠಿಯಲ್ಲಿ ಇಬ್ಬರಿಗೂ ಥಳಿಸುತ್ತಾರೆ. ಘಟನೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಎಸ್‌ಡಿಎಂ ಯೋಗೇಂದ್ರ ಕುಮಾರ್ ಯಾವ ಪ್ರತಿಕ್ರಿಯೆಯೂ ನೀಡಿಲ್ಲ ಎಂದು ವರದಿ ಮಾಡಿವೆ.

ಇದನ್ನೂ ಓದಿ: ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ಇತ್ತೀಚಿನ ದಿನಗಳಲ್ಲಿ ಬಿಹಾರ ರಾಜ್ಯದ ಅಧಿಕಾರಿಗಳಿಂದ ಸಾಮಾನ್ಯ ನಾಗರಿಕರ ಮೇಲೆ ನಡೆಸುತ್ತಿರುವ ಕಿರುಕುಳದ ಪ್ರಕರಣಗಳು ಮುನ್ನೆಲೆಗೆ ಬರುತ್ತಿವೆ.

ಕೆಲವು ದಿನಗಳ ಮುಂಚೆ ರಾಜ್ಯದ ಗೋಪಾಲ್‌ಗಂಜ್‌ನಲ್ಲಿ ವಾಹನ ತಪಾಸಣೆ ವೇಳೆ ಡಿಎಸ್‌ಪಿ ಹೆಡ್‌ಕ್ವಾರ್ಟರ್‌ ಜ್ಯೋತಿ ಕುಮಾರಿ ಅವರು ಬೈಕ್‌ ಸವಾರನಿಗೆ ಕಪಾಳಮೋಕ್ಷ ಮಾಡಿ, ಲಾಠಿ ಪ್ರಹಾರ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...