Homeರಾಷ್ಟ್ರೀಯಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

- Advertisement -
- Advertisement -

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ, ಹಿಂಸಾಚಾರದಲ್ಲಿ ಹತರಾದ ಕಾಂಗ್ರೆಸ್ ಸಂಸದರೊಬ್ಬರ ಪತ್ನಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ‘ಅರ್ಹವಲ್ಲ’ ಎಂದು ಹೇಳಿದೆ.

ವಿಶೇಷ ತನಿಖಾ ತಂಡವು ರಾಜ್ಯದ ಮುಖ್ಯಮಂತ್ರಿಗೆ ನೀಡಿದ್ದ ಕ್ಲೀನ್‌ಚಿಟ್‌ ಅನ್ನ ಎತ್ತಿಹಿಡಿದ ಸುಪ್ರೀಂ ಕೋರ್ಟ್, ಗುಲ್ಬರ್ಗ್ ಸಮಾಜದ ಹತ್ಯಾಕಾಂಡ ಎಂದು ಕರೆಯಲ್ಪಡುವ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ 68 ಜನರಲ್ಲಿ ಒಬ್ಬರಾದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಹತ್ಯಾಕಾಂಡವು ರಾಜಕಾರಣಿಗಳು ಮತ್ತು ಪೊಲೀಸರನ್ನು ಒಳಗೊಂಡ ದೊಡ್ಡ ಪಿತೂರಿಯಿಂದಾಗಿ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಗುಜರಾತ್: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರು ಕಳೆದ ಡಿಸೆಂಬರ್‌ನಲ್ಲಿ ತೀರ್ಪನ್ನು ಕಾಯ್ದಿರಿಸಿದ್ದರು.

ಹೆಚ್ಚಾಗಿ ಮುಸ್ಲಿಮರೇ ವಾಸಿಸುತ್ತಿದ್ದ 29 ಬಂಗಲೆಗಳು ಮತ್ತು 10 ಅಪಾರ್ಟ್‌ಮೆಂಟ್ ಕಟ್ಟಡಗಳ ಸಮೂಹವಾದ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡ ಸೇರಿದಂತೆ 10 ಪ್ರಮುಖ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತಂಡವು ಮರು ತನಿಖೆ ನಡೆಸಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ 68 ಮಂದಿಯನ್ನು ಗಲಭೆಕೋರರು ಎಳೆದೊಯ್ದು, ಕತ್ತರಿಸಿ ಸುಟ್ಟು ಹಾಕಿದ್ದಾರೆ. ಸಹಾಯಕ್ಕಾಗಿ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ರಾಜಕಾರಣಿಗಳಿಗೆ ಫೋನ್ ಮಾಡಿದ್ದರೂ ಅವರಿಗೆ ಉತ್ತರಿಸಿರಲಿಲ್ಲ ಎಂದು ಜಾಕಿಯಾ ಜಾಫ್ರಿ ಆರೋಪಿಸಿದ್ದಾರೆ.

ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಗಲಭೆಗಳ ಒಂದು ದಶಕದ ನಂತರ 2012 ರ ಫೆಬ್ರವರಿಯಲ್ಲಿ ‘ಯಾವುದೇ ಪ್ರಾಸಿಕ್ಯೂಟ್ ಮಾಡಬಹುದಾದ ಪುರಾವೆಗಳಿಲ್ಲ’ ಎಂದು ಉಲ್ಲೇಖಿಸಿ ತನ್ನ ‘ಮುಕ್ತಾಯದ ವರದಿ’ಯನ್ನು ಸಲ್ಲಿಸಿ ಪ್ರಧಾನಿ ಮೋದಿ ಮತ್ತು ಇತರ 63 ಜನರನ್ನು ದೋಷಮುಕ್ತಗೊಳಿಸಿತ್ತು.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

2016 ರಲ್ಲಿ ಅಹಮದಾಬಾದ್‌ನ ವಿಶೇಷ ನ್ಯಾಯಾಲಯವು ಹತ್ಯಾಕಾಂಡಕ್ಕಾಗಿ 24 ದಾಳಿಕೋರರನ್ನು ದೋಷಿ ಎಂದು ತೀರ್ಪು ನೀಡಿತ್ತು. ಹತ್ಯಾಕಾಂಡವನ್ನು ನ್ಯಾಯಾಲಯವು ‘ನಾಗರಿಕ ಸಮಾಜದ ಇತಿಹಾಸದಲ್ಲಿ ಕರಾಳ ದಿನ’ ಎಂದು ಬಣ್ಣಿಸಿತ್ತು. ಆದರೆ ಈ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಸೇರಿದಂತೆ 36 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ, ದೊಡ್ಡ ಪಿತೂರಿ ಇಲ್ಲ ಎಂದು ಒತ್ತಿ ಹೇಳಿತ್ತು.

2002ರಲ್ಲಿ ಮೂರು ದಿನಗಳ ಕಾಲ ಗುಜರಾತ್‌ನಲ್ಲಿ ನಡೆದ ಹಿಂಸಾಚಾರದಿಂದಾಗಿ 1,000 ಕ್ಕೂ ಹೆಚ್ಚು ಜನರು, ಅದರಲ್ಲೂ ಹೆಚ್ಚಾಗಿ ಮುಸ್ಲಿಮರು ಕೊಲ್ಲಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...