Homeರಾಷ್ಟ್ರೀಯಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

- Advertisement -
- Advertisement -

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ, ಹಿಂಸಾಚಾರದಲ್ಲಿ ಹತರಾದ ಕಾಂಗ್ರೆಸ್ ಸಂಸದರೊಬ್ಬರ ಪತ್ನಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ‘ಅರ್ಹವಲ್ಲ’ ಎಂದು ಹೇಳಿದೆ.

ವಿಶೇಷ ತನಿಖಾ ತಂಡವು ರಾಜ್ಯದ ಮುಖ್ಯಮಂತ್ರಿಗೆ ನೀಡಿದ್ದ ಕ್ಲೀನ್‌ಚಿಟ್‌ ಅನ್ನ ಎತ್ತಿಹಿಡಿದ ಸುಪ್ರೀಂ ಕೋರ್ಟ್, ಗುಲ್ಬರ್ಗ್ ಸಮಾಜದ ಹತ್ಯಾಕಾಂಡ ಎಂದು ಕರೆಯಲ್ಪಡುವ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ 68 ಜನರಲ್ಲಿ ಒಬ್ಬರಾದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಹತ್ಯಾಕಾಂಡವು ರಾಜಕಾರಣಿಗಳು ಮತ್ತು ಪೊಲೀಸರನ್ನು ಒಳಗೊಂಡ ದೊಡ್ಡ ಪಿತೂರಿಯಿಂದಾಗಿ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಗುಜರಾತ್: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರು ಕಳೆದ ಡಿಸೆಂಬರ್‌ನಲ್ಲಿ ತೀರ್ಪನ್ನು ಕಾಯ್ದಿರಿಸಿದ್ದರು.

ಹೆಚ್ಚಾಗಿ ಮುಸ್ಲಿಮರೇ ವಾಸಿಸುತ್ತಿದ್ದ 29 ಬಂಗಲೆಗಳು ಮತ್ತು 10 ಅಪಾರ್ಟ್‌ಮೆಂಟ್ ಕಟ್ಟಡಗಳ ಸಮೂಹವಾದ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡ ಸೇರಿದಂತೆ 10 ಪ್ರಮುಖ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತಂಡವು ಮರು ತನಿಖೆ ನಡೆಸಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ 68 ಮಂದಿಯನ್ನು ಗಲಭೆಕೋರರು ಎಳೆದೊಯ್ದು, ಕತ್ತರಿಸಿ ಸುಟ್ಟು ಹಾಕಿದ್ದಾರೆ. ಸಹಾಯಕ್ಕಾಗಿ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ರಾಜಕಾರಣಿಗಳಿಗೆ ಫೋನ್ ಮಾಡಿದ್ದರೂ ಅವರಿಗೆ ಉತ್ತರಿಸಿರಲಿಲ್ಲ ಎಂದು ಜಾಕಿಯಾ ಜಾಫ್ರಿ ಆರೋಪಿಸಿದ್ದಾರೆ.

ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಗಲಭೆಗಳ ಒಂದು ದಶಕದ ನಂತರ 2012 ರ ಫೆಬ್ರವರಿಯಲ್ಲಿ ‘ಯಾವುದೇ ಪ್ರಾಸಿಕ್ಯೂಟ್ ಮಾಡಬಹುದಾದ ಪುರಾವೆಗಳಿಲ್ಲ’ ಎಂದು ಉಲ್ಲೇಖಿಸಿ ತನ್ನ ‘ಮುಕ್ತಾಯದ ವರದಿ’ಯನ್ನು ಸಲ್ಲಿಸಿ ಪ್ರಧಾನಿ ಮೋದಿ ಮತ್ತು ಇತರ 63 ಜನರನ್ನು ದೋಷಮುಕ್ತಗೊಳಿಸಿತ್ತು.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

2016 ರಲ್ಲಿ ಅಹಮದಾಬಾದ್‌ನ ವಿಶೇಷ ನ್ಯಾಯಾಲಯವು ಹತ್ಯಾಕಾಂಡಕ್ಕಾಗಿ 24 ದಾಳಿಕೋರರನ್ನು ದೋಷಿ ಎಂದು ತೀರ್ಪು ನೀಡಿತ್ತು. ಹತ್ಯಾಕಾಂಡವನ್ನು ನ್ಯಾಯಾಲಯವು ‘ನಾಗರಿಕ ಸಮಾಜದ ಇತಿಹಾಸದಲ್ಲಿ ಕರಾಳ ದಿನ’ ಎಂದು ಬಣ್ಣಿಸಿತ್ತು. ಆದರೆ ಈ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಸೇರಿದಂತೆ 36 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ, ದೊಡ್ಡ ಪಿತೂರಿ ಇಲ್ಲ ಎಂದು ಒತ್ತಿ ಹೇಳಿತ್ತು.

2002ರಲ್ಲಿ ಮೂರು ದಿನಗಳ ಕಾಲ ಗುಜರಾತ್‌ನಲ್ಲಿ ನಡೆದ ಹಿಂಸಾಚಾರದಿಂದಾಗಿ 1,000 ಕ್ಕೂ ಹೆಚ್ಚು ಜನರು, ಅದರಲ್ಲೂ ಹೆಚ್ಚಾಗಿ ಮುಸ್ಲಿಮರು ಕೊಲ್ಲಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....