Homeಮುಖಪುಟಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯನ್ನು ಬಂಡಾಯ ಶಿವಸೇನಾ ಸಚಿವ ಏಕನಾಥ್ ಶಿಂಧೆ ಹುಟ್ಟುಹಾಕಿದ್ದಾರೆ. ಏಕನಾಥ್ ಶಿಂಧೆ ಅವರು ಪಕ್ಷದ ವಿರುದ್ಧ ಬಂಡಾಯದಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಬಿಜೆಪಿ ಮಹಾರಾಷ್ಟ್ರ ಘಟಕದ ಮುಖ್ಯಸ್ಥರು ತಿಳಿಸಿದ್ದಾರೆ.

ಸಚಿವ ಏಕನಾಥ್ ಶಿಂಧೆ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವಲ್ಲಿ ಬಿಜೆಪಿ ಪಾತ್ರವಿದೆ ಆರೋಪ ಕೇಳಿ ಬಂದಿದೆ. ಇದರ ಹಿನ್ನೆಲೆ, ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಲ್ಲಿ ತಮ್ಮ ಪಕ್ಷವು ಯಾವುದೇ ಪಾತ್ರವನ್ನು ವಹಿಸಿಲ್ಲ ಎಂದು ಬಿಜೆಪಿಯ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಶುಕ್ರವಾರ ಪ್ರತಿಪಾದಿಸಿದ್ದಾರೆ.

ಆದರೂ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ “ಕೆಲವು ಕೆಲಸಕ್ಕಾಗಿ” ಗುರುವಾರ ದೆಹಲಿಗೆ ಭೇಟಿ ನೀಡಿದ್ದರು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್ ರಾವತ್‌‌

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಬಿಜೆಪಿ ಪಾತ್ರ ವಹಿಸಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದ ಹಿನ್ನೆಲೆ ಚಂದ್ರಕಾಂತ್ ಪಾಟೀಲ್ ಅವರ ಹೇಳಿಕೆಗಳು ಬಂದಿವೆ.

ಇತ್ತ ಬಂಡಾಯ ಸೇನೆಯ ನಾಯಕ ಏಕನಾಥ್ ಶಿಂಧೆ, ಗುವಾಹಟಿಯಲ್ಲಿನ ತಮ್ಮ ಬಂಡಾಯ ಶಾಸಕರನ್ನು ಉದ್ದೇಶಿಸಿ ಮಾತನಾಡುತ್ತಾ, “ರಾಷ್ಟ್ರೀಯ ಪಕ್ಷ” ತನ್ನ ಬಂಡಾಯವನ್ನು ಬೆಂಬಲಿಸಿದ್ದು, ಎಲ್ಲಾ ಸಹಾಯವನ್ನು ಭರವಸೆ ನೀಡಿದೆ ಎಂದು ಬಿಜೆಪಿ ಹೆಸರು ಉಲ್ಲೇಖಿಸದೆ ತಿಳಿಸಿದ್ದರು.

ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ್ ಪಾಟೀಲ್, ”ಈಗಿನ ಶಿವಸೇನೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಆಂತರಿಕ ಕಚ್ಚಾಟಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸದ್ಯ 2024ರ ಚುನಾವಣೆಯ ತಯಾರಿಯಲ್ಲಿ ಬಿಜೆಪಿ ನಿರತವಾಗಿದೆ” ಎಂದು ಮಾಹಿತಿ ನೀಡಿದ್ದರು.

“ಪವಾರ್ ಮತ್ತು ಶಿವಸೇನೆಯ ಸಂಜಯ್ ರಾವತ್ ತಮ್ಮ ವಾಕ್ ಸ್ವಾತಂತ್ರ್ಯದ ಹಕ್ಕನ್ನು ವಿಪರೀತವಾಗಿ ಚಲಾಯಿಸುತ್ತಿದ್ದಾರೆಂದು. ನಾನು ದಿನನಿತ್ಯದ ಸುದ್ದಿಗಳನ್ನು ನೋಡುತ್ತಿಲ್ಲ, ಹಾಗಾಗಿ ಶಿವಸೇನೆಯಲ್ಲಿ ನಿಖರವಾಗಿ ಏನಾಗುತ್ತಿದೆ ಎಂದು ತಿಳಿದಿಲ್ಲ ಎಂದಿದ್ದಾರೆ. ಮುಂಬೈ ಮೂಲದ ಬಿಜೆಪಿ ಕಾರ್ಯಾಧ್ಯಕ್ಷ ಮೋಹಿತ್ ಕಾಂಬೋಜ್ ಅವರು ಬಂಡಾಯ ಶಿವಸೇನಾ ನಾಯಕರೊಂದಿಗೆ ಗುವಾಹಟಿಯಲ್ಲಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಿದಾಗ, “ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ, ಅವರು ಯಾರಿಗಾದರೂ ಸಹಾಯ ಮಾಡಲು ಹೋಗಿರಬಹುದು, ಅವರು ಎಲ್ಲಿದ್ದಾರೆ ಎಂಬುದರ ಬಗ್ಗೆ ನನಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.

ಇತ್ತ, ಮಹಾರಾಷ್ಟ್ರ ಮೈತ್ರಿಕೂಟದ ನಾಯಕ ಶರದ್ ಪವಾರ್ ಅವರಿಗೆ ಒಕ್ಕೂಟ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಶಿವಸೇನೆ ಶುಕ್ರವಾರ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮ ಸಚಿವರ ಇಂತಹ ಬೆದರಿಕೆಗಳನ್ನು ಒಪ್ಪುತ್ತಾರೆಯೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...