Homeಕರ್ನಾಟಕಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

ಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

- Advertisement -
- Advertisement -

ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್, ’ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ. ಅನುಮಾನವಿದ್ದರೆ ಎದೆ ಬಗೆದು ನೋಡಿ’ ಎಂದಿದ್ದಾರೆ.

’ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್.ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ.

’ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ..? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ’ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನು, ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

’ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು..? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ ನಡೆಯಲ್ಲ. ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಬಿಜೆಪಿ ನಾಯಕರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ”ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದ್ಯಾ..? ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ..? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ..? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್…!’ ಎಂದಿದ್ದಾರೆ.

 


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...