Homeರಾಜಕೀಯ‘ರಜೆಯಲ್ಲಿ ಅಸ್ಸಾಂಗೆ ಬನ್ನಿ’: ಉದ್ಧವ್‌ ಠಾಕ್ರೆಗೆ ವ್ಯಂಗ್ಯವಾಗಿ ಆಹ್ವಾನಿಸಿದ ಸಿಎಂ ಹಿಮಂತ ಬಿಸ್ವಾ

‘ರಜೆಯಲ್ಲಿ ಅಸ್ಸಾಂಗೆ ಬನ್ನಿ’: ಉದ್ಧವ್‌ ಠಾಕ್ರೆಗೆ ವ್ಯಂಗ್ಯವಾಗಿ ಆಹ್ವಾನಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ಬಂಡಾಯ ಶಿವಸೇನೆ ಶಾಸಕರಿಗೆ ಆತಿಥ್ಯ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ಬಂಡಾಯಕ್ಕೆ ನೆರವು ನೀಡಿದ ಆರೋಪವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ತಳ್ಳಿಹಾಕಿದ್ದು, ರಾಜ್ಯಕ್ಕೆ ಭೇಟಿ ನೀಡುವ ಯಾರನ್ನೂ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಸರ್ಕಾರದ ವಿರುದ್ಧವೇ ಸರ್ಕಾರದ ಭಾಗವಾಗಿರುವ ಶಿವಸೇನೆ ಶಾಸಕರು ಬಂಡಾಯ ಎದ್ದು ಗುಜರಾತ್‌ನ ಸೂರತ್‌ಗೆ ತೆರಳಿದ್ದರು. ಆದರೆ ಶಿವಸೇನೆಯ ಮಧ್ಯವರ್ತಿಗಳು ಗುಜರಾತಿಗೆ ಆಗಮಿಸುತ್ತಿದ್ದಂತೆ, ಅಲ್ಲಿಂದ ಅಸ್ಸಾಂನ ಗುವಾಹಟಿಗೆ ಬಂಡಾಯ ಶಾಸಕರನ್ನು ಸ್ಥಳಾಂತರಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯ ಶಾಸಕರು ಗುವಾಹಟಿಗೆ ಬಂದು ಇಳಿಯುವ ಮೊದಲೇ, ಮುಖ್ಯಮಂತ್ರಿ ಹಿಮಂತ ಅವರು ಪ್ರಸ್ತುತ ಶಾಸಕರು ಉಳಿದಿರುವ ಹೋಟೆಲ್‌‌ನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ, ಬಂಡಾಯ ಶಿವಸೇನೆ ಶಾಸಕರಿಗೆ ಆತಿಥ್ಯ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ಬಂಡಾಯಕ್ಕೆ ನೆರವು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

“ದೇಶದಾದ್ಯಂತ ಇರುವ ಶಾಸಕರನ್ನು ಅಸ್ಸಾಂಗೆ ಭೇಟಿ ನೀಡುವಂತೆ ನಾನು ಆಹ್ವಾನಿಸುತ್ತೇನೆ. ಜನರು ಹೋಟೆಲ್‌ಗೆ ಬರುವುದನ್ನು ತಡೆಯುವುದು ಹೇಗೆ? ದೇಶದಲ್ಲಿ ಫೆಡರಲ್ ರಚನೆ ಇರುವುದರಿಂದ ಅಸ್ಸಾಂನಲ್ಲಿ ಹೋಟೆಲ್‌ಗೆ ಬರಬೇಡಿ ಎಂದು ನಾನು ಹೇಳಲು ಸಾಧ್ಯವಿದೆಯೆ? ಯಾರಾದರೂ ಬಂದಾಗ ನನಗೆ ಸಂತೋಷವಾಗುತ್ತದೆ. ಅಸ್ಸಾಂಗೆ, ಅವರು ಎಲ್ಲಿಯವರೆಗೆ ಬೇಕಾದರೂ ಇರಬಹುದು” ಎಂದು ಹಿಮಂತ ಶರ್ಮಾ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಉದ್ಧವ್‌ ಠಾಕ್ರೆ ಅವರಿಗೆ ನೀವು ಏನು ಹೇಳಲು ಬಯಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ರಜೆಗೆ ಸಮಯದಲ್ಲಿ ನೀವೂ ಅಸ್ಸಾಂಗೆ ಬರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಸಚಿವ ಏಕನಾಥ್ ಶಿಂಧೆ ನೇತೃತ್ವದ ಸುಮಾರು 40 ಶಿವಸೇನೆ ಶಾಸಕರು ಬಿಜೆಪಿ ಆಡಳಿತದ ಅಸ್ಸಾಂನಲ್ಲಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಬಂಡಾಯ ಶಾಸಕರು, ಶಿವಸೇನೆಯು ಮಹಾ ವಿಕಾಸ್ ಅಘಾಡಿ ಸರ್ಕಾರದ ಮೈತ್ರಿಯನ್ನು ತೊರೆದು, ಅದರ ಬದಲಿಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡುವಂತೆ ಕೇಳಿಕೊಂಡಿದ್ದಾರೆ.

ಪ್ರಸ್ತುತ ಎಣಿಕೆಗಳ ಪ್ರಕಾರ, ಶಿಂಧೆ ಅವರ ವಿರುದ್ಧ ಪಕ್ಷಾಂತರ ವಿರೋಧಿ ಕಾನೂನು ಜಾರಿ ಮಾಡಲು ಸಾಧ್ಯವಿಲ್ಲ. ಶಿವಸೇನೆಯ ಐವತ್ತು ಶಾಸಕರಲ್ಲಿ ಅವರಿಗೆ ಅಗತ್ಯವಾದ 37 ಶಾಸಕರ ಬೆಂಬಲ ಇದೆ ಎಂದು ನಂಬಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಪ್ರವಾಹದಲ್ಲಿ ಸಿಲುಕಿರೋರಿಗೆ ಏನಾದ್ರು ವ್ಯವಸ್ಥೆ ಮಾಡಪ್ಪ ಪುಣ್ಯಾತ್ಮ ಆಮೇಲೆ ವ್ಯಂಗ್ಯ ಮಾಡುವಂತೆ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...