Homeಕರ್ನಾಟಕಸಚಿವ ಆರ್‌. ಅಶೋಕ್‌ ಆರೋಪಗಳಿಗೆ ಪ್ರೊ. ಬರಗೂರು ಸ್ಪಷ್ಟನೆ

ಸಚಿವ ಆರ್‌. ಅಶೋಕ್‌ ಆರೋಪಗಳಿಗೆ ಪ್ರೊ. ಬರಗೂರು ಸ್ಪಷ್ಟನೆ

ನಾವು ಕಮ್ಯುನಿಷ್ಠರಾಗಿ ಪಠ್ಯ ಪರಿಷ್ಕರಣೆ ಮಾಡಲಿಲ್ಲ, ಶಿಕ್ಷಣ ನಿಷ್ಠರಾಗಿ ಮಾಡಿದೆವು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಪಠ್ಯಪುಸ್ತಕ ಹಗರಣದ ಬಗ್ಗೆ ಗುರುವಾರ ಮಾತನಾಡಿದ್ದ ಸಚಿವ ಆರ್‌. ಅಶೋಕ್ ಅವರು ಈ ಹಿಂದಿನ ಪಠ್ಯಪುಸ್ತಕದ ಬಗ್ಗೆ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಸಚಿವರ ಈ ಎಲ್ಲಾ ಹೇಳಿಕೆಗೆ ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಸರ್ವಾಧ್ಯಕ್ಷರಾಗಿದ್ದ, ಹಿರಿಯ ಸಾಹಿತಿ ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದು, ನಾವು ಶಿಕ್ಷಣ ನಿಷ್ಠರಾಗಿ ಪಠ್ಯವನ್ನು ಪರಿಷ್ಕರಣೆ ಮಾಡಿದೆವು ಎಂದು ಹೇಳಿದ್ದಾರೆ.

“ಯಾರೇ ಪಠ್ಯಪರಿಷ್ಕರಣೆ ಮಾಡಿದರೂ ಕೆಲವು ಪಾಠಗಳನ್ನು ಬಿಡುವ ಮತ್ತು ಸೇರಿಸುವ ಪ್ರಕ್ರಿಯೆ ನಡೆಯುತ್ತದೆ. ಸಕಾರಣ ಮತ್ತು ಸೂಕ್ತ ಮಾನದಂಡಗಳ ಮೂಲಕ ಈ ಪ್ರಕ್ರಿಯೆ ನಡೆಯಬೇಕು. ನಮ್ಮ ಪರಿಷ್ಕರಣೆಯಲ್ಲಿ ಪ್ರತಿಯೊಂದಕ್ಕೂ ಕಾರಣಗಳನ್ನು ದಾಖಲಿಸಿದ್ದೇವೆ. ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟು ಮತ್ತು ಸಂವಿಧಾನಾತ್ಮಕ ಆಶಯಗಳನ್ನು ಪಾಲಿಸಿದ್ದೇವೆ” ಎಂದು ಬರಗೂರು ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೈಸೂರು ಒಡೆಯರ ಕಾಲದ ವಿವರಗಳನ್ನು ನಾವು ಬಿಟ್ಟಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ವಾಸ್ತವವಾಗಿ 6ನೇ ತರತಿಯ ಸಮಾಜ ವಿಜ್ಞಾನದಲ್ಲಿದ್ದ ಪಾಠವನ್ನು ಹೆಚ್ಚು ವಿವರಗಳ ಸಮೇತ, 7ನೇ ತರಗತಿಯ (ಭಾಗ-1 ಪುಟ 45 ರಿಂದ 58) ಪಠ್ಯಕ್ಕೆ ನಾವು ವರ್ಗಾಯಿಸಿದ್ದೆವು. ಇಡೀ ಅಧ್ಯಾಯವನ್ನು ಮರುಪರಿಷ್ಕರಣೆಯಲ್ಲಿ ತೆಗೆದುಹಾಕಿ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ”

ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ ಭಟ್

“ಹೀಗೆ 7ನೇ ತರಗತಿಯಿಂದ ತೆಗೆದು ಹತ್ತನೇ ತರಗತಿಯಲ್ಲಿ ಮುಕ್ಕಾಲು ಪುಟದಷ್ಟು ಮಾತ್ರ ಮೈಸೂರು ಒಡೆಯರ ವಿವರ ಕೊಟ್ಟು ಅನ್ಯಾಯ ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರು ತಂದ ಮೀಸಲಾತಿ, ಮಹಿಳೆಯರಿಗೆ ಮತದಾನದ ಹಕ್ಕಿನ ಮಹತ್ವದ ವಿವರಗಳೇ ಇಲ್ಲ. ನಮ್ಮ ಪಠ್ಯದಲ್ಲಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯನವರು ಮತ್ತು ಮಿರ್ಜಾ ಇಸ್ಮಾಯಿಲ್ ಅವರ ಪೂರ್ಣ ವಿವರಗಳನ್ನು ಮರುಪರಿಷ್ಕರಣೆಯಲ್ಲಿ ಕೈಬಿಟ್ಟಿದ್ದಾರೆ. ಆದರೆ ನಮ್ಮ ಮೇಲೆ ಮಿಥ್ಯಾರೋಪ ಮಾಡಿದ್ದಾರೆ” ಎಂದು ಪ್ರೊಫೆಸರ್‌ ಬರಗೂರು ಹೇಳಿದ್ದಾರೆ.

“ನಾಡಪ್ರಭು ಕೆಂಪೇಗೌಡರ ಪಾಠ ನಮ್ಮ ಪರಿಷ್ಕರಣೆ ಪಠ್ಯದಲ್ಲಿ ಇರಲಿಲ್ಲ ಎಂಬುದು ಇನ್ನೊಂದು ಮಿಥ್ಯಾರೋಪ. ನಾವು 7ನೇ ತರಗತಿಯ ಸಮಾಜ ವಿಜ್ಞಾನ (ಭಾಗ-1 ಪುಟ 43-44) ರಲ್ಲಿ ಎರಡು ಪುಟಗಳ ವಿವರಗಳನ್ನು ಕೊಟ್ಟಿದ್ದೆವು. ಮರುಪರಿಷ್ಕರಣೆಯಲ್ಲಿ ಒಂದು ಪುಟಕ್ಕೆ ಇಳಿಸಿದ್ದಲ್ಲದೆ, ಕೆಂಪೇಗೌಡರ ಆಡಳಿತಕ್ಕೆ ರಾಮನಗರ, ಕೋಲಾರ ಮತ್ತು ತುಮಕೂರು ಭಾಗಗಳು ಒಳಪಟ್ಟಿದ್ದವೆಂದು ನಾವು ಕೊಟ್ಟಿದ್ದ ವಿವರವನ್ನು ತೆಗೆದು ಕೆಂಪೇಗೌಡರ ಮಹತ್ವವನ್ನು ಇವರೇ ಕುಗ್ಗಿಸಿದ್ದಾರೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪೋರ್ಚುಗೀಸರ ವಿರುದ್ಧ ಹೋರಾಡಿದ ಚೆನ್ನ ಬೈರಾದೇವಿಯವರ ಬಗ್ಗೆ ಹೊಸ ಪಾಠ ಸೇರಿಸಿದ್ದನ್ನು ಸ್ವಾಗತಿಸುತ್ತೇನೆ. ಆದರೆ ನಾವು ಸೇರಿಸಿದ್ದ ಇದೇ ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನವರ ಪಾಠವನ್ನು ತೆಗೆದು ಹಾಕಿದ್ದಾರೆ. ಅಷ್ಟೇ ಅಲ್ಲ ನಾವು 7ನೇ ತರಗತಿಯ ಸಮಾಜ ವಿಜ್ಞಾನದಲ್ಲಿ (ಭಾಗ-2 84 ರಿಂದ 90ನೇ ಪುಟ) ಹೊಸದಾಗಿ ಸೇರಿಸಿದ್ದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ಇಡೀ ಅಧ್ಯಾಯವನ್ನು ಕೈಬಿಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಈ ಅಧ್ಯಾಯದಲ್ಲಿದ್ದ ರಾಣಿ ಅಬ್ಬಕ್ಕ, ಯಶೋಧರಮ್ಮ ದಾಸಪ್ಪ, ಬಳ್ಳಾರಿ ಸಿದ್ದಮ್ಮ, ಕಮಲಾದೇವಿ ಚಟ್ಟೋಪಾಧ್ಯಾಯ, ಉಮಾಬಾಯಿ ಕುಂದಾಪುರ ಅವರ ಎಲ್ಲಾ ವಿವರಗಳನ್ನು ತೆಗೆದಿದ್ದಾರೆ. ಇದು ಕರ್ನಾಟಕದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ” ಎಂದು ಅವರು ಹೇಳಿದ್ದಾರೆ.

“7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಭಕ್ತಿಪಂಥ ಮತ್ತು ಸೂಫಿ ಪರಂಪರೆಯೆಂಬ ಅಧ್ಯಾಯದಲ್ಲಿದ್ದ ಅಕ್ಕಮಹಾದೇವಿ, ಶಿಶುನಾಳ ಶರೀಫರು, ಪುರಂದರದಾಸರು, ಕನಕದಾಸರು-ಇವರ ಎಲ್ಲಾ ವಿವರ ತೆಗೆದು ಉತ್ತರ ಭಾರತದವರನ್ನು ಮಾತ್ರ ಉಳಿಸಿಕೊಂಡಿದ್ದಾರೆ. 9ನೇ ತರಗತಿಯ ಭಾಗ-2ರಲ್ಲಿದ್ದ ಇವರ ವಿವರಗಳನ್ನೂ ತೆಗೆದಿದ್ದಾರೆ. ಇದು ಕರ್ನಾಟಕದ ಅಸ್ಮಿತೆಗೆ ಮಾಡಿದ ಅನ್ಯಾಯ” ಎಂದು ಅವರು ತಿಳಿಸಿದ್ದಾರೆ.

“ಸಮಾಜ ವಿಜ್ಞಾನದ 7ನೇ ತರಗತಿಯ ಭಾಗ-2 ರಲ್ಲಿ ನಾವು ಹೊಸದಾಗಿ ಸೇರಿಸಿದ್ದ ಸಾವಿತ್ರಿ ಬಾಯಿ ಫುಲೆಯಾದಿಯಾಗಿ ಎಲ್ಲ ಮಹಿಳೆಯರ ವಿವರಗಳನ್ನು ತೆಗೆದು ಹಾಕಿದ್ದಾರೆ. ಕನ್ನಡ ಭಾಷಾ ಪಠ್ಯಗಳಲ್ಲಿದ್ದ ಎಲ್ಲಾ ದಲಿತ ಮೂಲದ ಸಾಹಿತಿಗಳು ಮತ್ತು ಬಹುಪಾಲು ಮಹಿಳಾ ಸಾಹಿತಿಗಳ ಬರಹಗಳನ್ನು ಬಿಟ್ಟು ಆ ಜಾಗದಲ್ಲಿ ಬಹಳಷ್ಟು ಒಂದೇ ಸಮುದಾಯದವರ ಬರಹಗಳನ್ನು ಹಾಕಿ ಸಾಮಾಜಿಕ ನ್ಯಾಯ ಮತ್ತು ಲಿಂಗ ಸಮಾನತೆಯಂತಹ ಸಂವಿಧಾನಾತ್ಮಕ ಆಶಯಗಳಿಗೆ ಧಕ್ಕೆ ತಂದಿದ್ದಾರೆ. ಸ್ವತಃ ಪರುಪರಿಷ್ಕರಣೆ ಸಮಿತಿಯ ಅಧ್ಯಕ್ಷರೇ ಸಾಮಾಜಿಕ ನ್ಯಾಯ ಮತ್ತು ಲಿಂಗ ಸಮಾನತೆಯ ವಿರುದ್ಧವಾಗಿ ಪಠ್ಯಪುಸ್ತಕದ ತಮ್ಮ ಮಾತುಗಳಲ್ಲೇ ಬರೆದಿರುವುದನ್ನು ಇಲ್ಲಿ ನೆನೆಯಬಹುದು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

“ಹೀಗೆ ಅನೇಕ ಅಪಚಾರಗಳನ್ನು ಮರೆಮಾಚಲು ಕುವೆಂಪು ಅವರ ಹತ್ತು ಪಾಠ ಹಾಕಿರುವುದನ್ನು ಮುಂದೆ ಮಾಡುತ್ತಿದ್ದಾರೆ. ನಾವು ಕುವೆಂಪು ಅವರು ಪ್ರತಿಪಾದಿಸಿದ ಅಖಂಡ ಕರ್ನಾಟಕತ್ವ ಮತ್ತು ಸರ್ವಜನಾಂಗದ ಶಾಂತಿಯ ತೋಟವೆಂಬ ಆದರ್ಶಕ್ಕೆ ಅನುಗುಣವಾಗಿ ಕರ್ನಾಟಕದ ಎಲ್ಲಾ ಭಾಗಗಳ ಬರಹಗಾರರನ್ನು ಪ್ರಾತಿನಿಧಿಕವಾಗಿ ಸೇರಿಸಿದ್ದೇವೆ. ಕುವೆಂಪು ಅವರ ಆಶಯವನ್ನು ಈಡೇರಿಸಿದ್ದೇವೆ” ಎಂದು ಪ್ರೊಫೆಸರ್‌ ರಾಮಚಂದ್ರಪ್ಪ ಅವರು ಪ್ರತಿಪಾದಿಸಿದ್ದಾರೆ.

“ಕುವೆಂಪು ಅವರ ಹತ್ತು ಪಾಠಗಳ ವಿಷಯವನ್ನು ಮತ್ತೆ ಮತ್ತೆ ಹೇಳುವ ಇವರು ಕರ್ನಾಟಕ ಏಕೀಕರಣದ ವಿಷಯ ತಿಳಿಸುವಾಗ ಹಾಕಿದ್ದ ಕುವೆಂಪು ಭಾವಚಿತ್ರವನ್ನೇ ತೆಗೆದು ಹಾಕಿದ್ದಾರೆ. ಹುಯಿಲಗೋಳ ನಾರಾಯಣರಾಯರ ಭಾವಚಿತ್ರ ತೆಗೆದದ್ದಲ್ಲದೆ, ಕಯ್ಯಾರ ಕಿಞಣ್ಣರೈ ಅವರ ವಿವರ ಬಿಟ್ಟಿದ್ದಾರೆ. ಕರ್ನಾಟಕದಿಂದ ಪ್ರಧಾನಿ ಸ್ಥಾನಕ್ಕೆ ಏರಿದ ದೇವೇಗೌಡರ ಭಾವಚಿತ್ರ ಬಿಟ್ಟಿದ್ದಾರೆ. ದೇವನೂರು ಮಹಾದೇವರ ಭಾವಚಿತ್ರವೂ ಇಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮ ಪಠ್ಯದಲ್ಲಿದ್ದ ಸಿದ್ಧಗಂಗೆ ಮತ್ತು ಆದಿ ಚುಂಚನಗಿರಿ ಮಠಗಳ ವಿವರಗಳನ್ನು ಒಂದೇ ಸಾಲಿಗೆ ಇಳಿಸಿ ಅನ್ಯಾಯ ಮಾಡಿದ್ದಾರೆ. ನಮ್ಮ ಪಠ್ಯದಲ್ಲಿದ್ದ ‘ವೇದಕಾಲದ ಸಂಸ್ಕೃತಿ’ ಎಂಬ ಪಾಠವನ್ನು ತೆಗೆದುಹಾಕಿರುವ ಇವರು ಭಾರತೀಯ ಪರಂಪರೆಯ ಬಗ್ಗೆ ಮಾತಾಡುವುದೇ ಒಂದು ವಿಚಿತ್ರ. ಇಷ್ಟು ಸಾಲದೆಂಬಂತೆ ಡಾ.ಅಂಬೇಡ್ಕರ್ ಅವರ ವಿಚಾರಧಾರೆಗೆ ಸಾಕಷ್ಟು ಕತ್ತರಿ ಪ್ರಯೋಗ ಮಾಡಿದ್ದಾರೆ. ಅಂಬೇಡ್ಕರ್ ಮತ್ತು ಬುದ್ಧ ಗುರು ಕುರಿತ ಪದ್ಯ ತೆಗೆದಿದ್ದಾರೆ. ಇಂಥ ಅನೇಕ ಅಂಶಗಳನ್ನು ಪಟ್ಟಿ ಮಾಡಬಹುದು” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಇನ್ನು ನಮ್ಮ ಪಠ್ಯ ಪರಿಷ್ಕರಣೆಯು ಕಮ್ಯುನಿಸ್ಟ್ ಸಿದ್ಧಾಂತವನ್ನು ಅಳವಡಿಸಿಕೊಂಡಿದೆ ಎಂಬ ಮಿಥ್ಯಾರೋಪಕ್ಕೆ ನಮ್ಮ ಪಠ್ಯಗಳೇ ಉತ್ತರ ಹೇಳುತ್ತವೆ. ನಾವು ಹೊಸದಾಗಿ ಬಸವಣ್ಣ, ಸಂಗೊಳ್ಳಿ ರಾಯಣ್ಣ, ಡಾ.ರಾಜಕುಮಾರ್ ಅವರ ಬಗ್ಗೆ ಪಾಠ ಸೇರಿಸಿದರೆ ಅದು ಕಮ್ಯುನಿಸ್ಟ್ ಪಠ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮಾಸ್ತಿ, ಗೋಪಾಲಕೃಷ್ಣ ಅಡಿಗ, ಗೊರೂರು, ಮೂರ್ತಿರಾಯರು, ಲಂಕೇಶ್, ಶಾಂತರಸ, ಸಾರಾ ಅಬೂಬಕರ್, ಚೆನ್ನಣ್ಣ ವಾಲೀಕಾರ ಮುಂತಾದವರ ಬರಹಗಳನ್ನು ಹೊಸದಾಗಿ ಸೇರಿಸಿ ಸಮತೋಲನ ಸಾಧಿಸಿದರೆ ಅದು ಕಮ್ಯೂನಿಸ್ಟ್ ಸಿದ್ಧಾಂತವೇ? ಕರ್ನಾಟಕದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು, ಭಕ್ತಿಪಂಥದವರು, ದೇಶದ ಮಹಿಳಾ ಸುಧಾರಕರು ಪಠ್ಯದಲ್ಲಿದ್ದರೆ ಅದು ಕಮ್ಯುನಿಸಂ ಎನ್ನುವಿರಾ?” ಎಂದು ಅವರು ಕೇಳಿದ್ದಾರೆ.

“ನಮ್ಮ ಪರಿಷ್ಕರಣೆಯ ಪಠ್ಯಗಳು ಜಾರಿಗೊಂಡು ಐದು ವರ್ಷಗಳ ನಂತರ ಕಮ್ಯುನಿಸ್ಟ್ ಎಂದು ಆರೋಪಿಸುವುದು ತಮ್ಮ ಮೂಲಭೂತವಾದಿ ಸಿದ್ಧಾಂತದ ಪಠ್ಯ ಪರಿಷ್ಕರಣೆಯ ಅನ್ಯಾಯಗಳನ್ನು ಮರೆಮಾಚುವುದಕ್ಕೆ ಎನ್ನುವುದು ಸ್ಪಷ್ಟ” ಎಂದು ಬರಗೂರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ; ಕವಿಶೈಲದ ಜಾಥಾ ಪಡೆಯಬೇಕಿದೆ ಗೋಕಾಕ್ ಚಳವಳಿಯ ತೀವ್ರತೆ

“ನಾವು ಕಮ್ಯುನಿಷ್ಠರಾಗಿ ಪಠ್ಯಪರಿಷ್ಕರಣೆ ಮಾಡಲಿಲ್ಲ. ಶಿಕ್ಷಣ ನಿಷ್ಠರಾಗಿ ಮಾಡಿದೆವು. ಇನ್ನಾದರೂ ಮಿಥ್ಯಾರೋಪಗಳು ನಿಲ್ಲಲಿ ಮತ್ತು ಮಾನ್ಯ ಮುಖ್ಯಮಂತ್ರಿಗಳು ಮರುಪರಿಷ್ಕರಣೆಯನ್ನು ವಿರೋಧಿಸುತ್ತಿರುವ ಸಾಹಿತಿಗಳು ಮತ್ತು ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸಿ ಪ್ರಜಾಸತ್ತಾತ್ಮಕ ನಡೆಗೆ ಮುಂದಾಗಲಿ” ಎಂದು ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಅವರು ಆಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...