Homeಮುಖಪುಟಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

ಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

- Advertisement -
- Advertisement -

ಇತ್ತೀಚೆಗಿನ ದಿನಗಳಲ್ಲಿ ತಮ್ಮ ವೃತ್ತಿ ಕುರಿತಾದ ಅಸಾಧಾರಣ ಬದ್ಧತೆಯ ಮೂಲಕ ಇಡೀ ದೇಶದ ಗಮನ ಸೆಳೆದ ಚಿತ್ರನಟಿ ಸಾಯಿಪಲ್ಲವಿ ಹಾಗೂ ಕರೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದೆಯಾಗಿ ಆಯ್ಕೆಯಾಗಿರುವ ಜ್ಯೋತಿ ಮಣಿ ಎಂಬ ಯುವ ಪ್ರತಿಭೆಗಳು ಇಂದಿನ ಯುವತಲೆಮಾರಿಗೆ ಮಾದರಿಯಾಗುವ ತಮ್ಮ ನಡೆನುಡಿಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಚಿತ್ರ ನಟಿಯಾಗಿರುವ ಸಾಯಿಪಲ್ಲವಿ ತಮಿಳುನಾಡಿನ ಊಟಿ ಬಳಿ ಇರುವ ಕೋಟಗಿರಿ ಎಂಬ ಸ್ಥಳದ ಬಡಗ ಜನಾಂಗ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದ ಹೆಣ್ಣು ಮಗಳು. ಜೊತೆಗೆ ವೈದ್ಯಕೀಯ ಪದವಿಯನ್ನು ಪಡೆದಿರುವ ಪ್ರತಿಭಾವಂತೆ. ಆಕೆಯ ತಂದೆ ಮತ್ತು ತಾಯಿ ಇಬ್ಬರೂ (ಸೆಂತಮಾರೈ ಕಣ್ಣನ್ ಮತ್ತು ರಾಧಾ) ಉದ್ಯೋಗದ ನಿಮಿತ್ತ ಕೊಯಮತ್ತೂರಿನಲ್ಲಿದ್ದವರು. 1992ರಲ್ಲಿ ಜನಸಿದ ಸಾಯಿ ಬಾಲ್ಯದ ಶಿಕ್ಷಣವನ್ನೆಲ್ಲಾ ಕೊಯಮತ್ತೂರು ಕಾನ್ವೆಂಟ್ ಶಾಲೆಯಲ್ಲಿ ಪಡೆದವಳು. ನೃತ್ಯದಲ್ಲಿ ಆಸಕ್ತಿ ಇದ್ದ ಕಾರಣದಿಂದಾಗಿ ಉತ್ತಮ ನೃತ್ಯಗಾತಿಯಾಗಿ ರೂಪುಗೊಂಡಿದ್ದ ಸಾಯಿ ಪಲ್ಲವಿ ಅನಿರೀಕ್ಷಿತವಾಗಿ ಕಲಾವಿದೆಯಾಗಿ ಗುರುತಿಸಿಕೊಂಡವಳು. ಜೊತೆಗೆ ತಮಿಳು, ಮಲೆಯಾಳಂ ಮತ್ತು ತೆಲುಗು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿ ಎಲ್ಲಾ ಪ್ರೇಕ್ಷಕರ ಮನಗೆದ್ದವಳು. ಈಗಾಗಲೇ ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದಾದ ಫಿಲಂಫೇರ್ ಪ್ರಶಸ್ತಿಗೆ ಸಾಯಿಪಲ್ಲವಿ ಪಾತ್ರರಾಗಿದ್ದಾರೆ. ಅಪಾರ ಓದು ಮತ್ತು ವಿದ್ಯಾರ್ಹತೆ ಹಾಗೂ ಈ ಜಗತ್ತನ್ನು ಸೂಕ್ಷ್ಮವಾಗಿ ಗ್ರಹಿಸುವ ಗುಣ ಇವೆಲ್ಲವೂ ಆಕೆಯನ್ನು ಪ್ರಬುದ್ಧ ನಟಿಯನ್ನಾಗಿ ರೂಪಿಸಿವೆ. ಈಗ ಬಿಡುಗಡೆಯಾಗಿರುವ ನಕ್ಸಲ್ ಚಳುವಳಿಯ ಕಥೆಯಾಧಾರಿತ (ವಾರಂಗಲ್‌ನ ಸರಳ ಎಂಬ ತೊಂಬತ್ತರ ದಶಕದ ನಕ್ಸಲ್ ಕಾರ್ಯಕರ್ತೆಯ ಜೀವನಾಧಾರಿತ ಕಥೆ) ’ವಿರಾಟ ಪರ್ವಂ’ ತೆಲುಗು ಸಿನಿಮಾದಲ್ಲಿನ ಸಾಯಿ ಪಲ್ಲವಿಯ ಅಭಿನಯ ಕುರಿತಾಗಿ ಎಲ್ಲರಿಂದ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ.

2015ರಲ್ಲಿ ’ಪ್ರೇಮಂ’ ಎಂಬ ಮಲೆಯಾಳಂ ಸಿನಿಮಾದ ಮಲರ್ ಎಂಬ ಪಾತ್ರದ ಮೂಲಕ ಗಮನ ಸೆಳೆದ ಈಕೆ ಮತ್ತೆ ಹಿಂತಿರುಗಿ ನೋಡಿಲ್ಲ. ಮತ್ತೋರ್ವ ಪ್ರತಿಭಾವಂತೆ ಕೀರ್ತಿ ಸುರೇಶ್ ಎಂಬ ಕಲಾವಿದೆಯ ಜೊತೆಗೆ ಸಾಯಿಪಲ್ಲವಿ ಕುರಿತಾಗಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಇತ್ತೀಚೆಗೆ ’ವಿರಾಟ ಪರ್ವಂ’ ಸಿನಿಮಾ ಪ್ರಚಾರ ಕುರಿತ ಪತ್ರಿಕಾಗೋಷ್ಠಿಯಲ್ಲಿ ತಾನು ನಂಬಿದ ಸಿದ್ಧಾಂತಗಳ ಕುರಿತು ಮಾತನಾಡುತ್ತಾ, ಧರ್ಮಕ್ಕಿಂತ ಮನುಷ್ಯ ಜೀವ ದೊಡ್ಡದು; ಕಾಶ್ಮೀರದಲ್ಲಿ ಹಿಂದೂ ಪಂಡಿತರ ಹತ್ಯೆಯಾಗುವುದು ಅಮಾನುಷ ಕೃತ್ಯ ನಿಜ; ಅದೇ ರೀತಿ ಗೋವುಗಳನ್ನು ಹಿಡಿದುಕೊಂಡು ಹೋಗುತ್ತಿರುವ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿ ಜೈ ಶ್ರೀರಾಂ ಎಂದು ಘೋಷಣೆ ಕೂಗುವುದು ಕೂಡ ಅಮಾನುಷ ಕ್ರಿಯೆ ಎಂದು ಸಾಯಿ ಪ್ರತಿಕ್ರಿಯಿಸಿದ್ದಳು.

ಸಾಯಿಪಲ್ಲವಿಯ ಈ ಪ್ರಬುದ್ಧತೆಯ ಮಾತುಗಳು ಮಾರಿಕೊಂಡ ಮಾಧ್ಯಮಗಳ ಬೃಹಸ್ಪತಿಗಳನ್ನು ಕೆರಳಿಸಿತು. ಈಕೆಯ ಕುರಿತಾಗಿ ಇಲ್ಲಸಲ್ಲದ ಅಪಪ್ರಚಾರ ಮಾಡಿದರು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಎದುರಿಗೆ
ಮೈಕ್ ಮತ್ತು ಕ್ಯಾಮರಾ ಇದ್ದರೆ ಸಾಕು ಹನುಮಂತನ ಪಾತ್ರಧಾರಿಗಳಂತೆ ಕುಣಿಯುವ ಪತ್ರಕರ್ತರೆಂಬ ಮಂಡೂಕಗಳಿಗೆ ನಾವು ಬದುಕುತ್ತಿರುವ ಗ್ರಾಮೀಣ ಜಗತ್ತಿನ ಪರಿಸ್ಥಿತಿಯ ಅರಿವಿಲ್ಲ. ಇಂದಿಗೂ ಕೂಡ ನಮ್ಮ ಕರ್ನಾಟಕ ಸೇರಿದಂತೆ ಭಾರತದ ಹಲವಾರು ರಾಜ್ಯಗಳಲ್ಲಿ ಕೃಷಿಯನ್ನು ಮೂಲ ವೃತ್ತಿಯಾಗಿಸಿಕೊಂಡ ಮುಸ್ಲಿಮರಿದ್ದಾರೆ, ಜೊತೆಗೆ ಪಶು ಸಾಕಾಣಿಕೆಯ ಮೂಲಕ ಹೈನುಗಾರಿಕೆಯಲ್ಲಿ ಬದುಕು ಕಟ್ಟಿಕೊಂಡ ಅನೇಕ ಬಡ ಮುಸ್ಲಿಂ ಕುಟುಂಬಗಳು ಇವೆ. ಆದರೆ, ಈಗಿನ ’ನವ ದೇಶ ಭಕ್ತ’ರು ಮತ್ತು ’ಹಿಂದೂಭಕ್ತ’ರು ಎಂಬ ಅಸಭ್ಯರ ಕಾರಣದಿಂದಾಗಿ ಯಾವೊಬ್ಬ ಮುಸ್ಲಿಂ ವ್ಯಕ್ತಿ ಸಾರ್ವಜನಿಕವಾಗಿ ಹಸುಗಳನ್ನು ಹಿಡಿದುಕೊಂಡು ಪಶು ವೈದ್ಯಕೀಯ ಕೇಂದ್ರಗಳಿಗೆ ಹೋಗುವುದು ಅಥವಾ ಮಾರಾಟಕ್ಕೆ ಇಲ್ಲವೆ ಕೊಳ್ಳುವುದಕ್ಕೆ ಜಾನುವಾರುಗಳ ಸಂತೆಗೆ ಹೋಗಲು ಅಸಾಧ್ಯವಾಗುತ್ತಿದೆ. ತಮ್ಮ ಪರಿಚಯದ ಹಿಂದೂಧರ್ಮದ ಗೆಳೆಯರನ್ನು ಆಶ್ರಯಿಸಿ ಬದುಕಬೇಕಾದ ಸ್ಥಿತಿ ಅವರದು.

ಹಿಂದುಳಿದ ಸಮುದಾಯದಲ್ಲಿ ಜನಿಸಿ ಗ್ರಾಮೀಣ ಭಾರತದ ಅನುಭವಗಳನ್ನು ದಕ್ಕಿಸಿಕೊಂಡಿರುವ ನಟಿ ಸಾಯಿಪಲ್ಲವಿಗೆ ಇರುವ ಇಂತಹ ಸೂಕ್ಷ್ಮತೆಯನ್ನು ನಮ್ಮ ಮಾಧ್ಯಮಗಳ ಅವಿವೇಕಿಗಳು ದಕ್ಕಿಸಿಕೊಂಡಿದ್ದರೆ ಅವರ ಮಾತು ಮತ್ತು ಬರವಣಿಗೆಗೆ ಅರ್ಥ ಬರುತ್ತಿತ್ತು.

ಇನ್ನು ಎರಡನೆಯದಾಗಿ ಜ್ಯೋತಿ ಮಣಿ ಎಂಬ ತಮಿಳು ಭಾಷೆಯ ಯುವ ಕಥೆಗಾರ್ತಿಯೊಬ್ಬಳು ತನ್ನ ಬದ್ಧತೆಯ ಹೋರಾಟದ ಬದುಕಿನ ಮೂಲಕ ಸತತ ಹದಿನೈದು ವರ್ಷಗಳ ಕಾಲ ತಮಿಳುನಾಡು ಯುವ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡ ಸೂಕ್ಷ್ಮ ಮನಸ್ಸಿನ ಹೆಣ್ಣು ಮಗಳು. 2009 ಮತ್ತು 2014ರ ಎರಡು ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರೂ ಎದೆಗುಂದದೆ ಹಾಗೂ ಪಕ್ಷ ನಿಷ್ಟೆಯನ್ನು ಬದಲಾಯಿಸದೆ 2019ರಲ್ಲಿ ಕರೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾಳೆ. ಬೆಂಗಳೂರು-ಮಧುರೈ ಮತ್ತು ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇಲಂ ನಂತರ ಸಿಗುವ ಕರೂರು ಮುಂದುವರಿದ ವಾಣಿಜ್ಯ ಹಾಗೂ ಕೈಗಾರಿಕಾ ಜಿಲ್ಲಾ ಕೇಂದ್ರವಾಗಿದೆ. ಜ್ಯೋತಿ ಮಣಿ ಸಂಸದೆಯಾದ ನಂತರವೂ ತನ್ನ ಹಳ್ಳಿಯ ವಾಸಸ್ಥಳವನ್ನು ಬದಲಾಯಿಸಿಲ್ಲ. ಪೆರಿಯತಿರು ಮಂಗಲಂ ಎಂಬ ಹಳ್ಳಿಯಲ್ಲಿ ಜನಸಾಮಾನ್ಯರ ನಡುವೆ ಸಾಮಾನ್ಯಳಂತೆ ಬದುಕುವ ಜ್ಯೋತಿ ಮಣಿಗೆ ಸಾಹಿತ್ಯದ ಓದು ಮತ್ತು ಬರವಣಿಗೆ ಒಬ್ಬ ಜನಪ್ರತಿನಿಧಿ ಹೇಗಿರಬೇಕು ಎಂಬುದನ್ನು ಕಲಿಸಿಕೊಟ್ಟಿದೆ. ಅಣ್ಣಾ ಮಲೈ ವಿ.ವಿ.ಯ ಪದವೀಧರೆಯಾದ ಈಕೆಯ ’ಒಟ್ಟು ವಾಸನೈ’ ಎಂಬ ಕಥಾ ಸಂಕಲನ, ’ಸಿಥಿರಕ್ ಕೂಡು’ ಎಂಬ ಕಾದಂಬರಿಯ ಜೊತೆಗೆ ’ನಾಯಕತ್ವಕ್ಕೆ ಅಡ್ಡದಾರಿಗಳಿಲ್ಲ’ (ನೀರ್ ಪಿರಕ್ಕು ಮನ್) ಎಂಬ ಅನುಭವ ಕಥನ ಪುಸ್ತಕಗಳು ಜ್ಯೋತಿ ಮಣಿಯನ್ನು ತಮಿಳು ಜನತೆ ಪಕ್ಷ ಭೇದವಿಲ್ಲದೆ ಪ್ರೀತಿಸುವಂತೆ ಮಾಡಿದೆ.

ಕಳೆದ ವಾರ ದೆಹಲಿಯ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಾರಿ ನಿರ್ದೆಶನಾಲಯದ ವಿರುದ್ಧ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ದೆಹಲಿ ಪೊಲೀಸರ ವಿರುದ್ಧ ಜ್ಯೋತಿ ಮಣಿ ಗುಡುಗಿದ ವೈಖರಿಯು ದೇಶಾದ್ಯಂತ ಮಾಧ್ಯಮಗಳ ಗಮನ ಸೆಳೆಯಿತು. ತಾನೋರ್ವ ಸಂಸದೆ ಎಂಬುದನ್ನು ಕಡೆಗಣಿಸಿ ತೊಟ್ಟಿದ ಬಟ್ಟೆಗಳು ಹರಿದು ಹೋಗುವಂತೆ ಎಳೆದಾಡಿದ ಪೊಲೀಸರ ಅಮಾನವೀಯ ವರ್ತನೆಯ ಬಗ್ಗೆ ಮಾತನಾಡುತ್ತ ಯಾವುದೇ ಸಂಕೋಚವಿಲ್ಲದೆ ಧರಿಸಿದ್ದ ಪೈಜಾಮಿನ ಹರಿದ ಭಾಗವನ್ನು ತೋರಿಸಿ, ಅದಕ್ಕೆ ಕಾರಣಕಾದವರನ್ನು ತರಾಟೆಗೆ ತೆಗೆದುಕೊಂಡ ಬಗೆ ನಿಜಕ್ಕೂ ಮೆಚ್ಚುವಂತಹದ್ದು. ಕುಡಿಯಲು ನೀರು ಕೇಳಿದರೂ ಸಹ ನೀಡದೆ ಸತತ ಮೂರು ಗಂಟೆಗಳ ಕಾಲ ಪೊಲೀಸ್ ವಾಹನದಲ್ಲಿ ಕೂಡಿ ಹಾಕಿದ್ದ ಬಗೆಯನ್ನು ಈ ಹೆಣ್ಣುಮಗಳು ಇಂಗ್ಲಿಷ್ ಭಾಷೆಯಲ್ಲಿ ವಿವರಿಸುವುದರ ಮೂಲಕ ದೆಹಲಿ ಪೊಲೀಸರ ಗೂಂಡಾಗಿರಿಯನ್ನು ಜಗತ್ತಿಗೆ ಪರಿಚಯಿಸಿದಳು.

ಅಧಿಕಾರ, ಸ್ಥಾನಮಾನ ಹಾಗೂ ಹಣಕ್ಕಾಗಿ ನಿಷ್ಠೆ ಬದಲಿಸಿ ಪಕ್ಷದಿಂದ ಪಕ್ಷಕ್ಕೆ ಹಾರುವ ಇಂದಿನ ಎಡಬಿಡಂಗಿ ಜಾಯಮಾನದ ಅವಿವೇಕಿಗಳಿಗೆ ಈ ಹೆಣ್ಣುಮಗಳ ರಾಜಕೀಯ ಜೀವನಗಾಥೆ ಪಾಠವಾಗಬೇಕು. ಜೊತೆಗೆ ಯುವಕ/ ಯುವತಿಯರಿಗೆ ಜ್ಯೋತಿ ಮಣಿಯ ಬದ್ಧತೆ ಆದರ್ಶವಾಗಬೇಕು.

ಡಾ.ಎನ್.ಜಗದೀಶ್ ಕೊಪ್ಪ

ಡಾ.ಎನ್.ಜಗದೀಶ್ ಕೊಪ್ಪ
ಹಿರಿಯ ಪತ್ರಕರ್ತರು, ಬರಹಗಾರರು ಮತ್ತು ಸಾಮಾಜಿಕ ಹೋರಾಟಗಾರರು. ಬಿಳಿ ಸಾಹೇಬನ ಭಾರತ, ಮರುಭೂಮಿಯ ಹೂವು, ಪುತ್ರಶೋಕ ಅವರು ರಚಿಸಿದ ಪುಸ್ತಕಗಳಲ್ಲಿ ಕೆಲವು.


ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...