Homeಅಂಕಣಗಳುಹೇಳದೆ ಮಾಡುವ ಉತ್ತಮ ಪ್ರಧಾನಿ ಮೋದಿ!

ಹೇಳದೆ ಮಾಡುವ ಉತ್ತಮ ಪ್ರಧಾನಿ ಮೋದಿ!

- Advertisement -
- Advertisement -

ಹೇಳದೆ ಮಾಡುವವ ರೂಢಿಯೊಳಗುತ್ತಮ. ಹೇಳಿ ಮಾಡುವವ ಮಧ್ಯಮ. ಹೇಳಿಯೂ ಮಾಡದವನು ಅಧಮನಿಗೆ ಸಮವಾಗುತ್ತಾನಂತೆ. ಇದೊಂದು ಕನ್ನಡದ ಜನಪ್ರಿಯ ಗಾದೆ ಮಾತು. ಇದನ್ನು ಚಾಚುತಪ್ಪದೆ ಮಾಡುತ್ತ, ಭಾರತ ಈವರೆಗೆ ಕಂಡರಿಯದ ಉತ್ತಮ ಪ್ರಧಾನಿಯಾಗಿ ಮೋದಿ ಮೆರೆದಾಡುತ್ತಿದ್ದಾರಂತಲ್ಲಾ. ಉದಾಹರಣೆ ಕೊಡುವುದಾದರೆ ರಾತ್ರೋರಾತ್ರಿ ನೋಟ್‌ಬ್ಯಾನ್ ಮಾಡಿಬಿಟ್ಟರು. ಅದರ ಪರಿಣಾಮಗಳು ಅನುಭವಿಸುವವರಿಗೆ ಬಿಟ್ಟದ್ದು. ಹಾಗೆಯೇ ಜಿಎಸ್‌ಟಿ ತಂದುಬಿಟ್ಟರು. ಅದೂ ಕೂಡ ಸಂಬಂಧಪಟ್ಟ ಸಾವಿರಾರು ಸಣ್ಣ ಉದ್ಯಮಗಳು ಮಧ್ಯಮ ಸ್ಥಿತಿಗೆ ಬಂದು ನಂತರ ಅಧಃಪಥನ ಕಂಡವು. ಲಾಕ್‌ಡೌನ್ ಮಾಡಿದರು. ಸಾವಿರಾರು ಜನ ಸತ್ತು ಹೋದರು. ಕೃಷಿ ಕಾಯ್ದೆ ತಂದರು. ಅದರ ವಿರುದ್ಧ ಪ್ರತಿಭಟಿಸುತ್ತಲೇ ಬರೋಬ್ಬರಿ ಏಳುನೂರ ಐವತ್ತು ಜನ ರೈತರು ಮಣ್ಣುಪಾಲಾದರು. ಈಗ ಅಗ್ನಿಪಥ ಜಾರಿಗೆ ತಂದು ಇಡೀ ದೇಶಕ್ಕೆ ಕೊಳ್ಳಿ ಇಟ್ಟು ನಮ್ಮ ರೈಲ್ವೆ ನಿಲ್ದಾಣಗಳು ಉರಿಯುತ್ತಿರಬೇಕಾದರೆ ಮನಃಶಾಂತಿಗಾಗಿ ಮೋದಿ ನಮ್ಮ ಮೈಸೂರಿಗೆ ಬಂದು ಯೋಗ ಧ್ಯಾನದಲ್ಲಿ ಕುಳಿತುಬಿಟ್ಟರಂತಲ್ಲಾ. ಭಾರತದ ಯಾವುದೇ ಸ್ಥಿತಿಗೆ ಮೊದಲು ಉತ್ತರಿಸಬೇಕಾದವರು ಪ್ರಧಾನಿ. ಆದರೆ ದೇಶ ಹಿಂದೆಂದೂ ಕಂಡರಿಯದ ಕ್ಷೋಭೆಗೆ ತುತ್ತಾಗಿರುವ ಈ ಸಮಯದಲ್ಲೂ ಕೂಡ ಮೋದಿಯವರ ಮುಖದಲ್ಲಿ ದೇಶದ ತಲ್ಲಣದ ಗೆರೆಯೇ ಕಾಣುತ್ತಿಲ್ಲವಂತಲ್ಲಾ, ಥೂತ್ತೇರಿ.

****

ಅಗ್ನಿಪಥದ ದೆಸೆಯಿಂದ ದೇಶಬಾಂಧವರಲ್ಲಿ ಹಲವಾರು ಸಂಶಯದ ಅಲೆಗಳು ಎದ್ದು ಜನಸಾಮಾನ್ಯರಲ್ಲಿ ಭೀತಿಹುಟ್ಟಿಸುತ್ತಿವೆಯಂತಲ್ಲಾ. ಆ ಪೈಕಿ ಈ ಬಿಜೆಪಿ ಸರಕಾರ ಅಗ್ನಿಪಥಕ್ಕೆ ಸೇರಿಸಿಕೊಳ್ಳುವ ಹುಡುಗರು ನಾಲ್ಕೆ ವರುಷಕ್ಕೆ ವಾಪಸು ಬರುತ್ತಾರಂತಲ್ಲಾ. ಅವರು ಮುಂದೆ ಮಾಡಬಹುದಾದ ಕೆಲಸಗಳೇನೆಂದು ಈಗಾಗಲೇ ಬಿಜೆಪಿ ನಾಯಕರು ಮಾತನಾಡುವುದನ್ನು ಕೇಳಿಸಿಕೊಂಡರೆ ಬಂದವರು ಬಿಜೆಪಿ ಪಾರ್ಟಿಯ ಅಂಗರಕ್ಷಕ ಪಡೆಯಾಗುವುದರಲ್ಲಿ ಸಂಶಯವಿಲ್ಲಾ. ತರಬೇತಿ ಪಡೆದು ಶತ್ರು ಸೈನ್ಯದ ಎದುರು ಯುದ್ಧ ಮಾಡುವ ಹುಡುಗರು ದೇಶದ ಆಂತರಿಕ ಕ್ಷೋಭೆ ಸಮಯದಲ್ಲಿ ಏನು ಮಾಡಬಲ್ಲರು? ಅವರ ತರಬೇತಿ ಕೌಶಲಗಳು ದೇಶದ ಪ್ರಜೆಗಳ ಮೇಲೆಯೇ ನಡೆದರೆ ಗತಿಯೇನು? ಈಗಾಗಲೇ ಶಿವಮೊಗ್ಗದ ಕಡೆ ಈಶ್ವರಪ್ಪ ಎಂಬ ರಾಜಕಾರಣಿ 144 ಸೆಕ್ಷನ್ ಜಾರಿಯಿದ್ದರೂ ಮೆರವಣಿಗೆ ತೆಗೆದು, ತನ್ನದೇ ಗೂಂಡಾ ಪಡೆಯಿಂದ ಅಲ್ಪಸಂಖ್ಯಾತರು ಮತ್ತು ದಲಿತರ ಮನೆಗಳ ಮೇಲೆ ದಾಳಿ ಮಾಡಿ, ಮನೆಯೊಳಗಿದ್ದ ಪದಾರ್ಥಗಳನ್ನು ಬೀದಿಗೆ ಎಸೆದು ಜಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಮುಂದೆ ಇಂತಹ ಸನ್ನಿವೇಶ ಬಂದಾಗ ಪಾರ್ಟಿ ಜನರ ಜೊತೆಗೆ ಅಗ್ನಿಪಥದಲ್ಲಿ ತರಬೇತಿ ಪಡೆದು ಬಂದವರೂ ಸೇರಿಕೊಳ್ಳುವುದಿಲ್ಲ ಎಂಬುದಕ್ಕೆ ಏನು ಗ್ಯಾರಂಟಿ ಎಂಬ ಅನುಮಾನಗಳು ದೇಶವಾಸಿಗಳಿಗೆ ಕಾಡುತ್ತಿರುವಾಗ, ಭಾರತದ ಪ್ರಧಾನಿ ಬಾಯಿಬಿಡದೆ ಯೋಗದಲ್ಲಿ ನಿರತರಾಗಿದ್ದಾರಂತಲ್ಲಾ, ಥೂತ್ತೇರಿ.

******

ಇದು ಭಾರತವನ್ನಾಳುವ ಮೋದಿಯ ಕಥೆಯಾಯ್ತು. ಇನ್ನ ಕರ್ನಾಟಕವನ್ನಾಳುತ್ತಿರುವ ಬೊಮ್ಮಾಯಿ ಎಂಬ ಬೊಮ್ಮಾಯಿ ಅವರ ಮಗ ಮುಖ್ಯಮಂತ್ರಿಯಾಗಿ ಹೇರಲ್ಪಟ್ಟಾಗ ಚಡ್ಡಿ ವಿರೋಧಿಗಳೂ ಕೂಡ ಸಮಾಧಾನಗೊಂಡಿದ್ದರು. ಏಕೆಂದರೆ ಈ ಬೊಮ್ಮಾಯಿ ಹೆಸರು ಬಸವರಾಜ ಬೊಮ್ಮಾಯಿ. ಬಸವಣ್ಣನ ಹೆಸರು ಹೊತ್ತು ಬಂದವರು. ಜೊತೆಗೆ ಕರ್ನಾಟಕದ ಜೋಡೆತ್ತಿನಂತಿದ್ದ ದೇವೆಗೌಡರು ಮತ್ತು ಎಸ್.ಆರ್ ಬೊಮ್ಮಾಯಿಯವರ ರಾಜಕಾರಣ ಕಂಡವರು. ಅದರಲ್ಲೂ ರಾಜಕಾರಣದ ಯಾವ ಸಿದ್ಧಾಂತವನ್ನು ಮೈಗೂಡಿಸಿಕೊಳ್ಳದ ದೇವೆಗೌಡರು ಒಂದು ಕಡೆಯಾದರೆ ಎಂ.ಎಸ್ ರಾಯ್‌ರವರ ಅನುಯಾಯಿಯಾಗಿದ್ದ ಬೊಮ್ಮಾಯಿವರ ಮಗ ಮುಖ್ಯಮಂತ್ರಿಯಾಗಿದ್ದು ರಾಜಕಾರಣದ ಪಂಡಿತರಿಗೆ ಒಂದು ಭರವಸೆ ಮೂಡಿಸಿತ್ತು. ಅದಕ್ಕೆ ಕಾರಣ ಬೊಮ್ಮಾಯಿ ಆರೆಸ್ಸೆಸ್‌ನಿಂದ ಬಂದವರಲ್ಲ ಎಂಬುದು. ಹೀಗಿರುವಾಗ ದುರಂತವೆಂದರೆ ಆರೆಸ್ಸೆಸ್ ಅಲ್ಲದ ಬೊಮ್ಮಾಯಿ ಆರೆಸ್ಸೆಸಿಗರೂ ಅಂಜಿಕೊಳ್ಳುವಂತಹ ಆಡಳಿತ ನಡೆಸತೊಡಗಿರುವುದು. ಇದಕ್ಕೆ ಸ್ಪಷ್ಟ ಉದಾಹರಣೆರಯೆಂದರೆ ಆರೆಸ್ಸೆಸ್ ಪಡೆ ಕುಳಿತುಕೊಂಡು ತಿದ್ದಿಕೊಟ್ಟ ಪಠ್ಯಪುಸ್ತಕವನ್ನ ನಾಗೇಶನೆಂಬ ಮಂತ್ರಿ ಮತ್ತು ರೋಹಿತ್ ಚಕ್ರತೀರ್ಥ ಎಂಬ ಮೂರ್ಖನಿಗೆ ಒಪ್ಪಿಸಿದ ಹಾಗೆ, ಇದೇ ಬೊಮ್ಮಾಯಿ ಹೆಡ್ಗೇವಾರ್ ಪಾಠವನ್ನು ಕೈ ಬಿಡುವುದಿಲ್ಲ ಮತ್ತು ಪಠ್ಯವನ್ನು ಹಿಂಪಡೆಯುವುದಿಲ್ಲ ಎಂದು ತಂದೆ ಸಮಾನರಾದ ದೇವೆಗೌಡರಿಗೆ ಧಮಕಿ ಹಾಕಿದ್ದಾರಲ್ಲಾ, ಥೂತ್ತೇರಿ.

******

ನಿಜಕ್ಕೂ ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಎಂದೂ ನಡೆಯದ ಹಗರಣವೊಂದು ಈ ಬಿಜೆಪಿ ಸರಕಾರದಲ್ಲಿ ನಡೆದು ಹೋಗಿದೆಯಂತಲ್ಲಾ. ತಮ್ಮ ಪುರೋಹಿತಶಾಹಿ ಅಜೆಂಡಾಗಳನ್ನ ಜಾರಿ ಮಾಡುವ ಸಲುವಾಗಿ ಪಠ್ಯದ ಸಾಲುಗಳನ್ನು ತಿದ್ದಿರುವುದೂ ಅಲ್ಲದೇ ಅದಕ್ಕೆ ಕಾರಣರಾದವರನ್ನ ಹೊಣೆಗಾರರನ್ನಾಗಿ ಮಾಡಬೇಕಿರುವಾಗ, ಜವಾಬ್ದಾರಿಯುತ ಅಧಿಕಾರಿಗಳು ಹಿಂದೆ ಸರಿದಾಗ, ತಿದ್ದಲು ಮುಖ್ಯ ಕಾರಣನಾದ ರೋಹಿತ್ ಚಕ್ರತೀರ್ಥ ಎಂಬವನು ಜನ ಕೇಳುವ ಪ್ರಶ್ನೆಗಳಿಗೆಲ್ಲಾ ಉತ್ತರಿಸಬೇಕೆಂದು ಹೇಳಿ ಜನರು ಮುಗಿಬಿದ್ದಾಗ ಸರಕಾರವೇ ಉತ್ತರಿಸಲು ಮುಂದಾಗಿದೆಯಂತಲ್ಲಾ. ಹೀಗೆ ಒಂದು ತಪ್ಪು ಮುಚ್ಚಲು ಇನ್ನೊಂದು ತಪ್ಪು ಮಾಡುತ್ತ ತಪ್ಪುಗಳ ಸರಣಿಯನ್ನ ಹೆಣಿಯುತ್ತ ಕುಳಿತ ಸರಕಾರ ಎಲ್ಲ ಜನಾಂಗದ ಆಕ್ರೋಶ ಎದುರಿಸಲಾರದೆ ಪಠ್ಯಪರಿಷ್ಕರಣ ಸಮಿತಿಯನ್ನು ರದ್ದು ಮಾಡಿದ್ದೇವೆ ಇನ್ಯಾವ ಸಮಸ್ಯೆಯೂ ಇಲ್ಲವೆಂದು ಭೋಜನಕ್ಕೆ ಕುಳಿತುಕೊಂಡರಂತಲ್ಲಾ. ತಪ್ಪು ಮಾಡಿದ ಮೇಲೆ ಸಮಿತಿ ರದ್ದುಪಡಿಸಿದರೆ ಏನು ಬಂತು, ತಪ್ಪು ತಿದ್ದುವವರು ಯಾರು, ಆಗಿರುವ ನಷ್ಟ ಭರಿಸುವರು ಯಾರು ಎಂದು ಜನ ಆಕ್ರೋಶ ವ್ಯಕ್ತಪಡಿಸಿ ಆ ಕೆಲಸ ಮೊದಲು ಮಾಡಿ ನಂತರ ಭೋಜನ ಆರಂಭಿಸಿ ಎಂದು ಹೇಳಿದ್ದಾರಲಾ, ಥೂತ್ತೇರಿ.

*****

ರೋಹಿತ್ ಚಕ್ರತೀರ್ಥ ಎಂಬುವನು ಕುವೆಂಪುಗೆ ಅವಮಾನ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದ ಕುವೆಂಪು ಸನ್ನಿಧಿಯ ರಾಜಕಾರಣಿ ಕಿಮ್ಮನೆ ರತ್ನಾಕರ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಜಾಥ ತೆಗೆದರು. ಅಲ್ಲಿ
ರಾಜಕಾರಣಿಗಳನ್ನ ಹಿಂದೆಬಿಟ್ಟು, ಸಾಹಿತಿಗಳನ್ನು ಮುಂದೆ ಮಾಡಿ ತೀರ್ಥಹಳ್ಳಿಯಲ್ಲಿ ಬೃಹತ್ ಸಭೆಯನ್ನು ಮಾಡಿದರಲ್ಲಾ. ಅಷ್ಟು ಮಾತ್ರವಲ್ಲ ಕುವೆಂಪು ಜ್ಯೋತಿಯನ್ನು ಕುಪ್ಪಳಿಯಿಂದ ತೆಗೆದುಕೊಂಡು ಹೋಗಿ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ತಲುಪಿಸಿದಾಗ ನಾಡಿನ ಪ್ರಜ್ಞಾವಂತರು ಮತ್ತು ಮಾಜಿ ಪ್ರಧಾನಿ ದೇವೆಗೌಡರ ಉಪಸ್ಥಿತಿ ಎಲ್ಲರಿಗೂ ಸ್ಪೂರ್ತಿದಾಯಕವಾಗಿದ್ದರೆ, ಒಕ್ಕಲಿಗ ಜನಾಂಗದ ಇಂಗ್ಲಿಷ್ ಸ್ವಾಮಿ ನಿರ್ಮಲಾನಂದರು ಗೈರು ಹಾಜರಿ ಎದ್ದು ಕಾಣುತ್ತಿತ್ತಂತಲ್ಲಾ. ಇದರಿಂದ ಸಿಟ್ಟಾದ ಕೆಲವರು ಈತ ಮೈಗೆ ಎಣ್ಣೆ ಹಚ್ಚಿಕೊಂಡಿರುವ ಸ್ವಾಮಿ ಎಂದಾಗ ಹೌದು ಜನಾಂಗದ ಮಠಗಳ ನಿರ್ವಹಣೆ ಮತ್ತು ಬಿಜೆಪಿ ನಡುವೆ ಕುಸ್ತಿಯಾಗಬೇಕಾದರೆ ಮೈಗೆ ಎಣ್ಣೆ ಹಚ್ಚಿಕೊಳ್ಳುವುದು ಅನಿವಾರ್ಯ ಎಂದು ಕೆಲವರು ವಾದಿಸಿದರೆ, ಮತ್ತೆ ಕೆಲವರು ಈತ ಬಾಲಗಂಗಾಧರನಾಥರು ನೇಮಿಸಿ ಹೋದ ಸ್ವಾಮಿಯೇ ಹೊರತು ಜನಾಂಗ ಆರಿಸಿ ಹರಸಿದವರಲ್ಲ ಎಂದರಂತಲ್ಲಾ. ಮತ್ತಷ್ಟು ಜನ ಉತ್ತರಪ್ರದೇಶಕ್ಕೆ ಹೇಗೆ ಆದಿತ್ಯನಾಥನೊ ಹಾಗೆಯೇ ಕರ್ನಾಟಕಕ್ಕೆ ಮುಂದೆ ನಿರ್ಮಲನಾಥ ಎಂದು ಬಿಜೆಪಿಗಳು ಭಾವಿಸಿದ್ದಾರೆ, ಆದುದರಿಂದ ಅಂಥವರ ಮನನೋಯಿಸಲಾಗದ ನಿರ್ಮಲ ಮನಸ್ಸಿನ ನಿರ್ಮಲಾನಂದರು ಕುವೆಂಪುಗೆ ಅವಮಾನವಾದರೂ ಕ್ಯಾರೆ ಅನ್ನಲಿಲ್ಲವೆಂದರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮೋಟಮ್ಮಾ ಕಾಂಗ್ರೆಸಿಗಲ್ಲಾದವಳು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...