Homeಕರ್ನಾಟಕರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

ರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

- Advertisement -
- Advertisement -

ರಂಗ ಸಂಘಟಕ, ಚಿಂತಕ, ನಿವೃತ್ತ ಪ್ರಾಂಶುಪಾಲ ಎಚ್.ವಿ.ವೇಣುಗೋಪಾಲ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ‘ಸಮುದಾಯ’ ಸಾಂಸ್ಕೃತಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಅವರು ‘ಸಮುದಾಯ’ ವಾರ್ತಾಪತ್ರದ ಜವಾಬ್ದಾರಿ ವಹಿಸಿಕೊಂಡು ನಡೆಸಿದ್ದರು.

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಹಳ ಕಾಲ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಮತ್ತು ಪ್ರಾಂಶುಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು. ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಜನಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮಗ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೌರಿಬಿದನೂರಿನಲ್ಲಿ ‘ಸಮುದಾಯ’ ಘಟಕದ ಆರಂಭಕ್ಕೆ ಅವರು ಕಾರಣಕರ್ತರಾಗಿ, ಸಕ್ರಿಯವಾಗಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಸಂಸ್ಕೃತ ಪ್ರಾಧ್ಯಾಪಕರಾಗಿದ್ದ ಅವರು ನಾಟಕಗಳನ್ನು ರಚಿಸಿದ್ದರು. ಪ್ರಾಂಶುಪಾಲರಾಗಿ ನಿವೃತ್ತರಾದ ನಂತರ ತಮ್ಮ ಮನೆಯ ಬೇಸ್ಮೆಂಟಿನಲ್ಲಿ ‘ಉನ್ನತಿ’ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿ, ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

ಇದನ್ನೂ ಓದಿ: ವಿಭಿನ್ನ ಪ್ರಯೋಗಗಳ ನಾಟಕ ತಂಡ ರಂಗಪಯಣಕ್ಕೆ 12ನೇ ವರ್ಷದ ಸಂಭ್ರಮ

‘ಉನ್ನತಿ’ಯಲ್ಲಿ ಪ್ರತಿ ಶನಿವಾರ ಚಲನಚಿತ್ರವನ್ನು ಪ್ರದರ್ಶನವನ್ನು ಏರ್ಪಡಿಸುತ್ತಿದ್ದರು. ಚಿತ್ರ ಪ್ರದರ್ಶನ ಮತ್ತು ಇತರ ಕಾರ್ಯಕ್ರಮಗಳಿಗೆಂದೇ ಅವರು ಸ್ವಂತ ಹಣವನ್ನು ಬಳಸಿ ಸುಸಜ್ಜಿತವಾದ ಸಣ್ಣ ಸಭಾಂಗಣವನ್ನು ಕಟ್ಟಿಸಿದ್ದರು. ಒಳ್ಳೆಯ ಸಿನಿಮಾ ಸಂಸ್ಕೃತಿಯನ್ನು ಬೆಳೆಸಬೇಕೆಂದು ಶ್ರಮಿಸಿದ್ದ ಅವರು, ಈ ನಿಟ್ಟಿನಲ್ಲಿ, ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಸಮಯ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಅವರು, ಅನೇಕ ನಾಟಕಗಳನ್ನು ನಿರ್ದೇಶಿಸಿದ್ದರು. ಪ್ರಸ್ತುತ ಅವರು ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯ ಕಾರ್ಯಕಾರಿ ಸಮಿತಿಯಲ್ಲಿ ಸಹವರ್ತಿಯಾಗಿದ್ದರು. ಅನೇಕ ಸಮಾಜಮುಖಿ, ವೈಚಾರಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು.

ಎಡ ಪ್ರಗತಿಪರ ಚಿಂತನೆಯನ್ನು ಹೊಂದಿದ್ದ ಅವರ ಹಠಾತ್ ನಿಧನಕ್ಕೆ ‘ಸಮುದಾಯ ಕರ್ನಾಟಕ’ ಕಂಬನಿ‌ ಮಿಡಿದಿದೆ. “ಸಮುದಾಯದ ಅತ್ಯಂತ ಪ್ರಾಮಾಣಿಕ ಸದಸ್ಯ, ಸಕ್ರಿಯ ಕಾರ್ಯಕರ್ತರಾಗಿದ್ದ ವೇಣುಗೋಪಾಲ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ಇವರ ನಿಧನ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಸಮುದಾಯ ಬೆಂಗಳೂರು ಸಂತಾಪ ಸೂಚಿಸಿದೆ. ಅಲ್ಲದೆ, ಅನೇಕ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಮೃತರ ಅಂತ್ಯಕ್ರಿಯೆಯು ಶನಿವಾರ ಬೆಳಗ್ಗೆ ಬನಶಂಕರಿ ಚಿತಾಗಾರದಲ್ಲಿ 10 ರಿಂದ 10.30 ರ ಒಳಗೆ ನೆರವೇರಲಿದೆ. ಮೃತದೇಹವು ಬೆಳಗ್ಗೆ 9.30ರ ತನಕ ಅವರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಲಿದೆ ಎಂದು ತಿಳಿದುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...