Homeಚಳವಳಿಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು: ಬಿ.ಟಿ ವೆಂಕಟೇಶ್

ಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು: ಬಿ.ಟಿ ವೆಂಕಟೇಶ್

ಲೈಂಗಿಕ ಕಾರ್ಯಕರ್ತೆಯರಿಗೂ ಕಾರ್ಮಿಕ ಕಾನೂನುಗಳ ಅಡಿ ಸೌಲಭ್ಯ ನೀಡಿ, ಉಚಿತ ವಸತಿ, ಶಿಕ್ಷಣ ಸೌಲಭ್ಯ ಕಲ್ಪಿಸಲು ಸಭೆಯಲ್ಲಿ ಆಗ್ರಹಿಸಲಾಯಿತು.

- Advertisement -
- Advertisement -

ಲೈಂಗಿಕ ಕೆಲಸವು ಸಹ ಒಂದು ಕೆಲಸವಾಗಿದೆ ಮತ್ತು ಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು ಎಂದು ಖ್ಯಾತ ವಕೀಲರು ಮತ್ತು ಮಾಜಿ ರಾಜ್ಯ ಸರಕಾರಿ ಅಭಿಯೋಜಕರಾದ ಬಿ.ಟಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ಲೈಂಗಿಕ ಕಾರ್ಯಕರ್ತೆಯರ ಪ್ರಸ್ತುತ ಸಮಸ್ಯೆಗಳ ಕುರಿತು ಬೆಂಗಳೂರಿನ ಎಸ್‌ಸಿಎಂ ಹೌಸ್‌ನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಲೈಂಗಿಕ ಕಾರ್ಯಕರ್ತರು ತಮ್ಮ ನ್ಯಾಯಬದ್ಧ ಹಕ್ಕುಗಳಿಗಾಗಿ 25 ವರ್ಷಗಳಿಂದ ಹೋರಾಡುತ್ತಿದ್ದಾರೆ. ಈಗ ಅವರ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಜಾರಿಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ” ಎಂದರು.

ಎಲ್ಲ ಅಂಚಿನಲ್ಲಿರುವ ಸಮುದಾಯಗಳಂತೆ ಲೈಂಗಿಕ ಕಾರ್ಯಕರ್ತೆಯರಿಗೂ ವಸತಿ ಸೌಲಭ್ಯ ಕಲ್ಪಿಸುವ ತುರ್ತು ಅಗತ್ಯವಿದ್ದು, ಲೈಂಗಿಕ ಕಾರ್ಯಕರ್ತೆಯರ ಮಕ್ಕಳಿಗೆ ಉಚಿತ ಮನೆ ಮತ್ತು ಶಿಕ್ಷಣ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲು ನಾವು ಸಿದ್ಧರಿದ್ದೇವೆ ಎಂದು ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಎಂ.ಜಿ.ಪಾಲಿ ಹೇಳಿದರು.

ಲೈಂಗಿಕ ಕಾರ್ಯಕರ್ತೆಯರನ್ನು ಅಪರಾಧೀಕರಿಸುವ ಅನೈತಿಕ ಕಳ್ಳಸಾಗಣೆ ತಡೆ ಕಾಯಿದೆ (ITPA) ಅನ್ನು ರದ್ದುಗೊಳಿಸಬೇಕು, ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಲೈಂಗಿಕ ಕೆಲಸವನ್ನು ಗುರುತಿಸಿ ಮತ್ತು ಇತರ ಕಾರ್ಮಿಕರಿಗೆ ಲಭ್ಯವಿರುವ ಎಲ್ಲಾ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಲಾಯಿತು.

ಸ್ವಂತ ಮನೆ ಹೊಂದಿರದ ಲೈಂಗಿಕ ಕಾರ್ಯಕರ್ತರಿಗೆ ವಸತಿ ಒದಗಿಸುವುದು, ನಿವೃತ್ತ ಲೈಂಗಿಕ ಕಾರ್ಯಕರ್ತರಿಗೆ (40 ವರ್ಷಕ್ಕಿಂತ ಮೇಲ್ಪಟ್ಟವರು) ಪಿಂಚಣಿ ಮತ್ತು ಪರ್ಯಾಯ ಜೀವನೋಪಾಯವನ್ನು ಒದಗಿಸುವುದು, ಲೈಂಗಿಕ ಕಾರ್ಯಕರ್ತೆಯರ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯಗಳು, ಮಕ್ಕಳ ಆರೈಕೆ ಕೇಂದ್ರಗಳು ಮತ್ತು ವಿದ್ಯಾರ್ಥಿವೇತನ ಒದಗಿಸಬೇಕೆಂಬ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.

ಇದನ್ನೂ ಓದಿ: ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸಾಲಿಡಾರಿಟಿ ಫೌಂಡೇಶನ್, ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ ಮತ್ತು ಸಂಗಮ ಸಂಘಟನೆಯಳು ಕಾರ್ಯಕ್ರಮ ಆಯೋಜಿಸಿದ್ದವು. 18 ವಿವಿಧ ಎನ್‌ಜಿಒಗಳು, ಸಿಬಿಒಗಳು, ನಾಗರಿಕ ಸಮಾಜ ಸಂಘಟನೆಗಳು, ಪ್ರಗತಿಪರ ಚಳವಳಿಗಳು, ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಸಮಾಜಕಾರ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶುಕ್ರವಾರ ಸಂಜೆ 6 ಗಂಟೆಗೆ ನಗರದ ಫ್ರೀಂಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...