Homeರಾಜಕೀಯಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಉದ್ಧವ್‌ ಠಾಕ್ರೆಗೆ ತೊಂದರೆ ನೀಡಿದ ಎಲ್ಲರೂ ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ, ಯಾರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಿವಸೇನೆ ಶಾಸಕರು ಶನಿವಾರ ಗುವಾಹಟಿಯಲ್ಲಿ ಸಭೆ ನಡೆಸಿ, ಏಕನಾಥ್ ಶಿಂಧೆ ನೇತೃತ್ವದ ತಮ್ಮ ಬಣವನ್ನು ‘ಶಿವಸೇನೆ ಬಾಳಾಸಾಹೇಬ್ ಗ್ರೂಪ್’ ಎಂದು ಹೆಸರಿಸುವುದಾಗಿ ಘೋಷಿಸಿದೆ. ಈ ನಡುವೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿವಸೇನೆ ಶಾಸಕ ತಾನಾಜಿ ಸಾವಂತ್ ಅವರ ಪುಣೆಯ ಕಚೇರಿಗೆ ಶಿವಸೇನೆ ಕಾರ್ಯಕರ್ತರು ಶನಿವಾರ ದಾಳಿ ನಡೆಸಿದ್ದಾರೆ.

ತಾನಾಜಿ ಸಾವಂತ್ ಕಚೇರಿಗೆ ದಾಳಿ ಮಾಡಿರುವುದನ್ನು ಸಮರ್ಥಿಸಿರುವ ಪುಣೆ ಶಿವಸೇನೆ ಮುಖ್ಯಸ್ಥ ಸಂಜಯ್ ಮೋರೆ, “ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದರು. ನಮ್ಮ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ತೊಂದರೆ ನೀಡಿದ ಎಲ್ಲಾ ದೇಶದ್ರೋಹಿಗಳು ಮತ್ತು ಬಂಡಾಯ ಶಾಸಕರು ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ. ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗುವುದು… ಯಾರನ್ನೂ ಬಿಡಲಾಗುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಧ್ಯಕ್ಕೆ ಗುವಾಹಟಿಯಲ್ಲಿರುವ ಬಂಡಾಯ ಶಾಸಕರ ನಾಯಕ ಏಕನಾಥ್‌ ಶಿಂಧೆ ಅವರು, ಬಂಡಾಯವೆದ್ದಿರುವ ಪಕ್ಷದ ಶಾಸಕರ ರಕ್ಷಣೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ರಾಜ್ಯದ ಗೃಹ ಸಚಿವರು ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ 16 ಶಾಸಕರ ಸಹಿ ಇರುವ ಪತ್ರವನ್ನು ಟ್ವೀಟ್ ಮಾಡಿರುವ ಶಿಂಧೆ, ತಮ್ಮ ಕುಟುಂಬ ಸದಸ್ಯರಿಗೆ ಯಾವುದೇ ಹಾನಿ ಉಂಟಾದರೆ ಸಿಎಂ ಠಾಕ್ರೆ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಾಯಕರು ಹೊಣೆಯಾಗುತ್ತಾರೆ ಎಂದು ತಿಳಿಸಿದ್ದಾರೆ. ಠಾಕ್ರೆ ಮತ್ತು ವಾಲ್ಸೆ ಪಾಟೀಲ್ ಅವರ ಆದೇಶದ ಮೇರೆಗೆ 16 ಬಂಡಾಯ ಸೇನಾ ಶಾಸಕರ ಭದ್ರತೆಯನ್ನು ‘ರಾಜಕೀಯ ಸೇಡಿನಿಂದಾಗಿ’  ಹಿಂಪಡೆಯಲಾಗಿದೆ ಎಂದು ಶಿಂಧೆ ತಮ್ಮ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಆದರೆ ಈ ಹೇಳಿಕೆಯನ್ನು ನಿರಾಕರಿಸಿರುವ ರಾಜ್ಯದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, “ರಾಜ್ಯದ ಯಾವುದೇ ಶಾಸಕರ ರಕ್ಷಣೆಗೆ ಮುಖ್ಯಮಂತ್ರಿಯಾಗಲಿ, ಗೃಹ ಇಲಾಖೆಯಾಗಲಿ ಆದೇಶ ನೀಡಿಲ್ಲ. ಈ ನಿಟ್ಟಿನಲ್ಲಿ ಟ್ವಿಟರ್‌ನಲ್ಲಿ ಮಾಡಿರುವ ಆರೋಪಗಳು ಸಂಪೂರ್ಣ ತಪ್ಪು ಮತ್ತು ದಾರಿತಪ್ಪಿಸುವಂತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ನಾವು ಬೆಂಬಲಿಸುತ್ತೇವೆ: ಕೇಂದ್ರ ಸಚಿವ ಅಠವಳೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಸರ್ಕಾರ ರಚಿಸುವ ಬಗ್ಗೆ ಇನ್ನೂ ಯೋಚಿಸಿಲ್ಲ ಎಂದು ಒಕ್ಕೂಟ ಸರ್ಕಾರದ ಸಚಿವ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠವಳೆ ಶುಕ್ರವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, “ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅವರನ್ನು ಬೆಂಬಲಿಸುತ್ತದೆ” ಎಂದು ಹೇಳಿದ್ದಾರೆ.

“ನಾವು ಸರ್ಕಾರ ರಚಿಸುವ ಬಗ್ಗೆ ಯೋಚಿಸಿಲ್ಲ, ಮುಂಬರುವ ಸಮಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಶರದ್ ಪವಾರ್, ಅಜಿತ್ ಪವಾರ್, ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಬಹುಮತವನ್ನು ತೋರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಹಲವಾರು ಶಾಸಕರು ನಿಮ್ಮನ್ನು ತೊರೆದಿದ್ದಾರೆ, ನೀವು ಅದನ್ನು ಹೇಗೆ ಹೇಳುತ್ತೀರಿ?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಪಕ್ಷ ದೊಡ್ಡದು, ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ: ಶಿವಸೇನೆ ನಾಯಕ ಸಂಜಯ್ ರಾವತ್

ಪಕ್ಷದ ಭವಿಷ್ಯ ಮತ್ತು ವಿಸ್ತರಣೆಯ ಯೋಜನೆಗಳ ಕುರಿತು ಚರ್ಚಿಸಲು ಶಿವಸೇನೆ ಸಭೆ ನಡೆಸಲಿದೆ ಎಂದು ಹಿರಿಯ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. “ಪಕ್ಷವು ತುಂಬಾ ದೊಡ್ಡದಾಗಿದ್ದು, ಅದನ್ನು ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ. ಇದು ನಮ್ಮ ರಕ್ತದಿಂದ ಕಟ್ಟಲ್ಪಟ್ಟಿದೆ. ಅದನ್ನು ಮಾಡಲು ಹಲವಾರು ತ್ಯಾಗ ಮಾಡಲಾಗಿದೆ. ಹಣದಿಂದ ಯಾರೂ ಅದನ್ನು ಮುರಿಯಲು ಸಾಧ್ಯವಿಲ್ಲ” ಎಂದು ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಗುವಾಹಟಿ, ಸೂರತ್‌ನಲ್ಲಿ ಹೋಟೆಲ್ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ, ಎನ್‌ಸಿಪಿ

ಪ್ರಸ್ತುತ ಅಸ್ಸಾಂನಲ್ಲಿ ಮೊಕ್ಕಾಂ ಹೂಡಿರುವ ಶಿವಸೇನೆಯ ಬಂಡಾಯ ಶಾಸಕರು ಉಳಿದಿದ್ದ ಗುವಾಹಟಿ ಮತ್ತು ಸೂರತ್‌ನಲ್ಲಿನ ಹೋಟೆಲ್‌ಗಳ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ ಎಂದು ಎನ್‌ಸಿಪಿ ಪ್ರಶ್ನಸಿದೆ. ಪಕ್ಷವು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು (ಇಡಿ) ಒಳಗೊಂಡಂತೆ ಇಲಾಖೆಗಳಿಗೆ ‘ಕಪ್ಪುಹಣದ’ ಮೂಲವನ್ನು ಕಂಡುಹಿಡಿಯಲು ಕೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಎನ್‌ಸಿಪಿಯ ಮುಖ್ಯ ವಕ್ತಾರ ಮಹೇಶ್ ತಾಪಸೆ, “ಸೂರತ್ ಮತ್ತು ಗುವಾಹಟಿಯ ಹೋಟೆಲ್‌ಗಳು ಮತ್ತು ಚಾರ್ಟರ್ಡ್ ಫ್ಲೈಟ್‌ನ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ? ಕುದುರೆ ವ್ಯಾಪಾರದ ದರ 50 ಕೋಟಿ ರೂಪಾಯಿಗಳು ನಿಜವೇ? ಇಡಿ ಮತ್ತು ಐಟಿ ಸಕ್ರಿಯಗೊಂಡರೆ ಕಪ್ಪು ಹಣದ ಮೂಲ ಬಯಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...