Homeರಾಜಕೀಯಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಉದ್ಧವ್‌ ಠಾಕ್ರೆಗೆ ತೊಂದರೆ ನೀಡಿದ ಎಲ್ಲರೂ ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ, ಯಾರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಿವಸೇನೆ ಶಾಸಕರು ಶನಿವಾರ ಗುವಾಹಟಿಯಲ್ಲಿ ಸಭೆ ನಡೆಸಿ, ಏಕನಾಥ್ ಶಿಂಧೆ ನೇತೃತ್ವದ ತಮ್ಮ ಬಣವನ್ನು ‘ಶಿವಸೇನೆ ಬಾಳಾಸಾಹೇಬ್ ಗ್ರೂಪ್’ ಎಂದು ಹೆಸರಿಸುವುದಾಗಿ ಘೋಷಿಸಿದೆ. ಈ ನಡುವೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿವಸೇನೆ ಶಾಸಕ ತಾನಾಜಿ ಸಾವಂತ್ ಅವರ ಪುಣೆಯ ಕಚೇರಿಗೆ ಶಿವಸೇನೆ ಕಾರ್ಯಕರ್ತರು ಶನಿವಾರ ದಾಳಿ ನಡೆಸಿದ್ದಾರೆ.

ತಾನಾಜಿ ಸಾವಂತ್ ಕಚೇರಿಗೆ ದಾಳಿ ಮಾಡಿರುವುದನ್ನು ಸಮರ್ಥಿಸಿರುವ ಪುಣೆ ಶಿವಸೇನೆ ಮುಖ್ಯಸ್ಥ ಸಂಜಯ್ ಮೋರೆ, “ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದರು. ನಮ್ಮ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ತೊಂದರೆ ನೀಡಿದ ಎಲ್ಲಾ ದೇಶದ್ರೋಹಿಗಳು ಮತ್ತು ಬಂಡಾಯ ಶಾಸಕರು ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ. ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗುವುದು… ಯಾರನ್ನೂ ಬಿಡಲಾಗುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಧ್ಯಕ್ಕೆ ಗುವಾಹಟಿಯಲ್ಲಿರುವ ಬಂಡಾಯ ಶಾಸಕರ ನಾಯಕ ಏಕನಾಥ್‌ ಶಿಂಧೆ ಅವರು, ಬಂಡಾಯವೆದ್ದಿರುವ ಪಕ್ಷದ ಶಾಸಕರ ರಕ್ಷಣೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ರಾಜ್ಯದ ಗೃಹ ಸಚಿವರು ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ 16 ಶಾಸಕರ ಸಹಿ ಇರುವ ಪತ್ರವನ್ನು ಟ್ವೀಟ್ ಮಾಡಿರುವ ಶಿಂಧೆ, ತಮ್ಮ ಕುಟುಂಬ ಸದಸ್ಯರಿಗೆ ಯಾವುದೇ ಹಾನಿ ಉಂಟಾದರೆ ಸಿಎಂ ಠಾಕ್ರೆ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಾಯಕರು ಹೊಣೆಯಾಗುತ್ತಾರೆ ಎಂದು ತಿಳಿಸಿದ್ದಾರೆ. ಠಾಕ್ರೆ ಮತ್ತು ವಾಲ್ಸೆ ಪಾಟೀಲ್ ಅವರ ಆದೇಶದ ಮೇರೆಗೆ 16 ಬಂಡಾಯ ಸೇನಾ ಶಾಸಕರ ಭದ್ರತೆಯನ್ನು ‘ರಾಜಕೀಯ ಸೇಡಿನಿಂದಾಗಿ’  ಹಿಂಪಡೆಯಲಾಗಿದೆ ಎಂದು ಶಿಂಧೆ ತಮ್ಮ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಆದರೆ ಈ ಹೇಳಿಕೆಯನ್ನು ನಿರಾಕರಿಸಿರುವ ರಾಜ್ಯದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, “ರಾಜ್ಯದ ಯಾವುದೇ ಶಾಸಕರ ರಕ್ಷಣೆಗೆ ಮುಖ್ಯಮಂತ್ರಿಯಾಗಲಿ, ಗೃಹ ಇಲಾಖೆಯಾಗಲಿ ಆದೇಶ ನೀಡಿಲ್ಲ. ಈ ನಿಟ್ಟಿನಲ್ಲಿ ಟ್ವಿಟರ್‌ನಲ್ಲಿ ಮಾಡಿರುವ ಆರೋಪಗಳು ಸಂಪೂರ್ಣ ತಪ್ಪು ಮತ್ತು ದಾರಿತಪ್ಪಿಸುವಂತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ನಾವು ಬೆಂಬಲಿಸುತ್ತೇವೆ: ಕೇಂದ್ರ ಸಚಿವ ಅಠವಳೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಸರ್ಕಾರ ರಚಿಸುವ ಬಗ್ಗೆ ಇನ್ನೂ ಯೋಚಿಸಿಲ್ಲ ಎಂದು ಒಕ್ಕೂಟ ಸರ್ಕಾರದ ಸಚಿವ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠವಳೆ ಶುಕ್ರವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, “ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅವರನ್ನು ಬೆಂಬಲಿಸುತ್ತದೆ” ಎಂದು ಹೇಳಿದ್ದಾರೆ.

“ನಾವು ಸರ್ಕಾರ ರಚಿಸುವ ಬಗ್ಗೆ ಯೋಚಿಸಿಲ್ಲ, ಮುಂಬರುವ ಸಮಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಶರದ್ ಪವಾರ್, ಅಜಿತ್ ಪವಾರ್, ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಬಹುಮತವನ್ನು ತೋರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಹಲವಾರು ಶಾಸಕರು ನಿಮ್ಮನ್ನು ತೊರೆದಿದ್ದಾರೆ, ನೀವು ಅದನ್ನು ಹೇಗೆ ಹೇಳುತ್ತೀರಿ?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಪಕ್ಷ ದೊಡ್ಡದು, ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ: ಶಿವಸೇನೆ ನಾಯಕ ಸಂಜಯ್ ರಾವತ್

ಪಕ್ಷದ ಭವಿಷ್ಯ ಮತ್ತು ವಿಸ್ತರಣೆಯ ಯೋಜನೆಗಳ ಕುರಿತು ಚರ್ಚಿಸಲು ಶಿವಸೇನೆ ಸಭೆ ನಡೆಸಲಿದೆ ಎಂದು ಹಿರಿಯ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. “ಪಕ್ಷವು ತುಂಬಾ ದೊಡ್ಡದಾಗಿದ್ದು, ಅದನ್ನು ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ. ಇದು ನಮ್ಮ ರಕ್ತದಿಂದ ಕಟ್ಟಲ್ಪಟ್ಟಿದೆ. ಅದನ್ನು ಮಾಡಲು ಹಲವಾರು ತ್ಯಾಗ ಮಾಡಲಾಗಿದೆ. ಹಣದಿಂದ ಯಾರೂ ಅದನ್ನು ಮುರಿಯಲು ಸಾಧ್ಯವಿಲ್ಲ” ಎಂದು ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಗುವಾಹಟಿ, ಸೂರತ್‌ನಲ್ಲಿ ಹೋಟೆಲ್ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ, ಎನ್‌ಸಿಪಿ

ಪ್ರಸ್ತುತ ಅಸ್ಸಾಂನಲ್ಲಿ ಮೊಕ್ಕಾಂ ಹೂಡಿರುವ ಶಿವಸೇನೆಯ ಬಂಡಾಯ ಶಾಸಕರು ಉಳಿದಿದ್ದ ಗುವಾಹಟಿ ಮತ್ತು ಸೂರತ್‌ನಲ್ಲಿನ ಹೋಟೆಲ್‌ಗಳ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ ಎಂದು ಎನ್‌ಸಿಪಿ ಪ್ರಶ್ನಸಿದೆ. ಪಕ್ಷವು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು (ಇಡಿ) ಒಳಗೊಂಡಂತೆ ಇಲಾಖೆಗಳಿಗೆ ‘ಕಪ್ಪುಹಣದ’ ಮೂಲವನ್ನು ಕಂಡುಹಿಡಿಯಲು ಕೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಎನ್‌ಸಿಪಿಯ ಮುಖ್ಯ ವಕ್ತಾರ ಮಹೇಶ್ ತಾಪಸೆ, “ಸೂರತ್ ಮತ್ತು ಗುವಾಹಟಿಯ ಹೋಟೆಲ್‌ಗಳು ಮತ್ತು ಚಾರ್ಟರ್ಡ್ ಫ್ಲೈಟ್‌ನ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ? ಕುದುರೆ ವ್ಯಾಪಾರದ ದರ 50 ಕೋಟಿ ರೂಪಾಯಿಗಳು ನಿಜವೇ? ಇಡಿ ಮತ್ತು ಐಟಿ ಸಕ್ರಿಯಗೊಂಡರೆ ಕಪ್ಪು ಹಣದ ಮೂಲ ಬಯಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...