Homeಕರ್ನಾಟಕಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ.

- Advertisement -
- Advertisement -

ಪಠ್ಯ ಪರಿಷ್ಕರಣೆಯಲ್ಲಿ ನೂರಾರು ಲೋಪಗಳು ಸಂಭವಿಸಿದ್ದರೂ ಸರ್ಕಾರ ಅದೇ ಪಠ್ಯಗಳನ್ನು ಬೋಧಿಸಲು ಮುಂದಾಗುತ್ತಿದ್ದಂತೆ ಹಲವು ವಲಯಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಪಠ್ಯ ಪರಿಷ್ಕರಣೆ ವಿರೋಧಿ ಹೋರಾಟಕ್ಕೆ ಕಾಗಿನೆಲೆಯ ನಿರಂಜನಾನಂದಪುರಿ ಸ್ವಾಮೀಜಿಗಳು ದನಿಗೂಡಿಸಿದ್ದು, ತಪ್ಪು ಸರಿಪಡಿಸಿಕೊಳ್ಳದಿದ್ದರೆ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಪರಿಷ್ಕರಣೆಯಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ ಪಠ್ಯವನ್ನು ರೋಹಿತ್ ಚಕ್ರತೀರ್ಥ ಸಮಿತಿಯು ಒಂದು ವಾಕ್ಯಕ್ಕೆ ಇಳಿಸಿದೆ ಎಂಬು ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಭಾರೀ ಗೊಂದಲ ಸೃಷ್ಟಿಯಾಗಿದೆ. ಮಾನ್ಯ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ಆದಂತಹ ಲೋಪದೋಷಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ ಎಂದು ಮಾಧ್ಯಮಗಳ ಮೂಲಕ ಹೇಳಲು ಇಷ್ಟಪಡುತ್ತೇನೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಶಿಕ್ಷಣವನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬಾರದು ಎಂಬುದು ನಮ್ಮ ಧ್ಯೇಯ. ಕುವೆಂಪುರವರ, ಜಗಜ್ಯೋತಿ ಬಸವಣ್ಣನವರ, ಕನಕದಾಸರ ಸತ್ಯವಾದ ಜೀವನ ಚರಿತ್ರೆಯನ್ನು ಎಲ್ಲಾ ಸಮುದಾಯಕ್ಕೆ ಪ್ರಾಮಾಣಿಕವಾಗಿ ತಿಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರಲ್ಲಿ ಕೆಲವೊಂದು ಅಂಶಗಳನ್ನು ಮುಚ್ಚಿಟ್ಟು, ಇಲ್ಲ ಸಲ್ಲದ ಅಂಶಗಳನ್ನು ಮಕ್ಕಳಿಗೆ ಕಲಿಸುವುದು, ಸಮಾಜಕ್ಕೆ ತಿಳಿಸುವುದು ಅಕ್ಷಮ್ಯ. ಈ ತಪ್ಪನ್ನು ನೀವು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೀರಿ ಎಂದು ನಂಬಿದ್ದೇನೆ. ತಪ್ಪಿದ್ದಲ್ಲಿ ನಾವು ಕೂಡ ಎಲ್ಲರ ಜೊತೆಗೂಡಿ ಹೋರಾಟಕ್ಕಿಳಿಯಬೇಕಾಗುತ್ತೆ ಎಂದು ಅವರು ಹೇಳಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ಆದರೆ ಕರ್ನಾಟಕದ ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ. ಪೂರ್ತಿ ವಿವರಗಳಿಗಾಗಿ ಈ ಸುದ್ದಿ ಓದಿ

ಇದನ್ನೂ ಓದಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...