Homeಮುಖಪುಟಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

- Advertisement -
- Advertisement -

ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್‌ರವರ ಮುಂಬೈ ಮನೆಯಲ್ಲಿ ಬೀಡು ಬಿಟ್ಟದ್ದ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ವಶಕ್ಕೆ ಪಡೆದಿದ್ದು, ಸಾಂತಾಕ್ರೂಸ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ.

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಇಂದು ಬೆಳಿಗ್ಗೆ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಫೋರ್ಜರಿ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಸೇರಿದಂತೆ ಹಲವರ ವಿರುದ್ಧ ಇಂದು ಐಪಿಸಿ ಸೆಕ್ಷನ್ 468 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ತೀಸ್ತಾರನ್ನು ವಿಚಾರಣೆಗಾಗಿ ಅಹಮದಾಬಾದ್‌ಗೆ ಕರೆದೊಯ್ಯಲು ಬಯಸಿದ್ದಾರೆ ಎಂದು ಸ್ಕ್ರೋಲ್ ವರದಿ ಮಾಡಿದೆ.

ಪೊಲೀಸರು ಇಂದು ಮಧ್ಯಾಹ್ನ 3 ಗಂಟೆಯಿಂದ ಮುಂಬೈನ ಜುಹು ಪ್ರದೇಶದಲ್ಲಿರುವ ತೀಸ್ತಾರವರ ಮನೆಯಲ್ಲಿ ಬೀಡು ಬಿಟ್ಟಿದ್ದರು. ಬಂಧನಕ್ಕೆ ತಮ್ಮ ಬಳಿ ವಾರೆಂಟ್ ಇದೆ ಎನ್ನಲಾಗುತ್ತಿದ್ದು, ಇದುವರೆಗೂ ಯಾವುದೇ ವಾರಂಟ್ ಅನ್ನು ನಮಗೆ ತೋರಿಸಿಲ್ಲ ಎಂದು ತೀಸ್ತಾರವರ ಪತಿ ಆನಂದ್ ಜಾವೇದ್ ಹೇಳಿದ್ದಾರೆ.

ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರವಿಲ್ಲ ಎಂಬ SIT ಕ್ಲೀನ್ ಚಿಟ್ ವಿರೋಧಿಸಿ ಗಲಭೆಯಲ್ಲಿ ಹತ್ಯೆಯಾಗಿದ್ದ ಸಂಸದ ಎಷನ್ ಜಾಫ್ರಿಯವರ ಮಡದಿ 84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಅದಕ್ಕೆ ಸಹಾಯ ಮಾಡಿದ್ದ ತೀಸ್ತಾ ಸೆಟ್ಲವಾದ್ ಸಹ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ಅರ್ಜಿದಾರರ ಭಾವನೆಗಳನ್ನು ದುರಪಯೋಗಪಡಿಸಿಕೊಂಡಿದ್ದೀರಿ ಎಂದು ದೂರಿತ್ತು.

ಸೆಟಲ್ವಾಡ್ ಯಾರು?

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

ಇವರ ಸೇವೆಯನ್ನು ಪರಿಗಣಿಸಿ 2020 ರಲ್ಲಿ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ ಸೆಟ್ಲ್‍ವಾಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...