Homeಮುಖಪುಟಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

- Advertisement -
- Advertisement -

ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್‌ರವರ ಮುಂಬೈ ಮನೆಯಲ್ಲಿ ಬೀಡು ಬಿಟ್ಟದ್ದ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ವಶಕ್ಕೆ ಪಡೆದಿದ್ದು, ಸಾಂತಾಕ್ರೂಸ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ.

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಇಂದು ಬೆಳಿಗ್ಗೆ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಫೋರ್ಜರಿ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಸೇರಿದಂತೆ ಹಲವರ ವಿರುದ್ಧ ಇಂದು ಐಪಿಸಿ ಸೆಕ್ಷನ್ 468 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ತೀಸ್ತಾರನ್ನು ವಿಚಾರಣೆಗಾಗಿ ಅಹಮದಾಬಾದ್‌ಗೆ ಕರೆದೊಯ್ಯಲು ಬಯಸಿದ್ದಾರೆ ಎಂದು ಸ್ಕ್ರೋಲ್ ವರದಿ ಮಾಡಿದೆ.

ಪೊಲೀಸರು ಇಂದು ಮಧ್ಯಾಹ್ನ 3 ಗಂಟೆಯಿಂದ ಮುಂಬೈನ ಜುಹು ಪ್ರದೇಶದಲ್ಲಿರುವ ತೀಸ್ತಾರವರ ಮನೆಯಲ್ಲಿ ಬೀಡು ಬಿಟ್ಟಿದ್ದರು. ಬಂಧನಕ್ಕೆ ತಮ್ಮ ಬಳಿ ವಾರೆಂಟ್ ಇದೆ ಎನ್ನಲಾಗುತ್ತಿದ್ದು, ಇದುವರೆಗೂ ಯಾವುದೇ ವಾರಂಟ್ ಅನ್ನು ನಮಗೆ ತೋರಿಸಿಲ್ಲ ಎಂದು ತೀಸ್ತಾರವರ ಪತಿ ಆನಂದ್ ಜಾವೇದ್ ಹೇಳಿದ್ದಾರೆ.

ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರವಿಲ್ಲ ಎಂಬ SIT ಕ್ಲೀನ್ ಚಿಟ್ ವಿರೋಧಿಸಿ ಗಲಭೆಯಲ್ಲಿ ಹತ್ಯೆಯಾಗಿದ್ದ ಸಂಸದ ಎಷನ್ ಜಾಫ್ರಿಯವರ ಮಡದಿ 84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಅದಕ್ಕೆ ಸಹಾಯ ಮಾಡಿದ್ದ ತೀಸ್ತಾ ಸೆಟ್ಲವಾದ್ ಸಹ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ಅರ್ಜಿದಾರರ ಭಾವನೆಗಳನ್ನು ದುರಪಯೋಗಪಡಿಸಿಕೊಂಡಿದ್ದೀರಿ ಎಂದು ದೂರಿತ್ತು.

ಸೆಟಲ್ವಾಡ್ ಯಾರು?

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

ಇವರ ಸೇವೆಯನ್ನು ಪರಿಗಣಿಸಿ 2020 ರಲ್ಲಿ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ ಸೆಟ್ಲ್‍ವಾಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...