Homeಮುಖಪುಟತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

- Advertisement -
- Advertisement -

‘ಪ್ರಸಾದ’ದ ಪ್ಯಾಕೆಟ್‌ಗಳ ಮೇಲೆ ಉತ್ಪನ್ನದ ತೂಕ, ಉತ್ಪಾದನಾ ದಿನಾಂಕ, ಮುಕ್ತಾಯ ದಿನಾಂಕ ಮತ್ತು ತೂಕದ ಪ್ರಮಾಣವನ್ನು ತೋರಿಸಿಲ್ಲ ಎಂದು ಗ್ರಾಹಕರು ನೀಡಿದ ದೂರಿನ ಮೇರೆಗೆ ತೆಲಂಗಾಣದ ಸಮಾನತೆಯ ಪ್ರತಿಮೆಯ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಪ್ರಕರಣ ದಾಖಲು ಮಾಡಿದೆ.

11ನೇ ಶತಮಾನದ ಸಮಾಜ ಸುಧಾರಕ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ಹೆಸರಿಸಲಾಗಿದೆ. ಈ ಪ್ರತಿಮೆಯು ಶಂಶಾಬಾದ್ ಬಳಿಯ 45 ಎಕರೆ ಜಾಗದಲ್ಲಿ, ರಂಗಾ ರೆಡ್ಡಿ ಜಿಲ್ಲೆಯ ಮುಚಿಂತಲ್‌ನಲ್ಲಿರುವ ಚಿನ್ನಾ ಜೀಯರ್ ಟ್ರಸ್ಟ್‌ನ ಆವರಣದಲ್ಲಿದೆ.

ಈ ಹಿಂದೆ ಮೇ 26ರಂದು ವಿನಯ್ ವಂಗಾಲ ಎಂಬವರು ದೂರು ನೀಡಿದ್ದರು. ಪ್ರಸಾದದ ಪ್ಯಾಕೆಟ್‌ಗಳಲ್ಲಿ ತೂಕ, ಉತ್ಪಾದನೆ ಮತ್ತು ಮುಕ್ತಾಯ ದಿನಾಂಕ ನಮೂದಿಸದ ಕಾರಣ ಸಮಾನತೆಯ ಪ್ರತಿಮೆ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

ದೂರಿನ ಆಧಾರದ ಮೇಲೆ, ರಂಗಾರೆಡ್ಡಿ ವಲಯದ ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕರು ಪ್ರಕರಣ ದಾಖಲು ಮಾಡಿರುವುದಾಗಿ ಜೂ.21 ರಂದು ತೆಲಂಗಾಣದ ಕಾನೂನು ಮಾಪನಶಾಸ್ತ್ರದ ನಿಯಂತ್ರಕರಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಜೂನ್ 20ರಂದು ಸಮಾನತೆಯ ಪ್ರತಿಮೆ ಆವರಣವನ್ನು ಪರಿಶೀಲಿಸಲಾಯಿತು. ಅದರ ಆಧಾರದ ಮೇಲೆ, ಕಾನೂನು ಮಾಪನಶಾಸ್ತ್ರ ಕಾಯಿದೆ, 2009ರ ಕಲಂ 10, 11, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

ಸಮಾನತೆಯ ಪ್ರತಿಮೆ ಸ್ಥಳದ ಪ್ರವೇಶ ದರವೂ ಹೆಚ್ಚಾಗಿದೆ ಎಂಬ ಆರೋಪಗಳು ಬಂದಿವೆ. ವಯಸ್ಕರಿಗೆ 200 ಮತ್ತು ಮಕ್ಕಳಿಗೆ 125 ರೂ.ಗಳನ್ನು ಚಿನ್ನ ಜೀಯರ್ ಸ್ವಾಮಿಯ ಸಂಸ್ಥೆಯು ವಿಧಿಸುತ್ತಿದೆ.

“ಇತರ ಚಟುವಟಿಕೆಗಳು ಈ ಪ್ರದೇಶದಲ್ಲಿ ನಡೆಯುತ್ತಿದ್ದು, ಅವುಗಳನ್ನು ನಿರ್ವಹಿಸಲು ಶುಲ್ಕ ವಿಧಿಸಲಾಗಿದೆ” ಎಂದು ಸಂಸ್ಥೆ ಹೇಳಿಕೊಂಡಿದೆ. “ಒಂದಿಷ್ಟು ಪ್ರವೇಶ ಶುಲ್ಕವನ್ನು ಇರಿಸದ ಹೊರತು, ಗುಂಪನ್ನು ನಿಯಂತ್ರಿಸುವುದು ಕಷ್ಟ. ಅಂತಹ ಸ್ಥಳಗಳಿಗೆ ಸಾಮಾನ್ಯವಾಗಿ ಸಾವಿರಾರು ರೂಪಾಯಿಗಳ ಪ್ರವೇಶ ದರವಿದೆ, ಆದರೆ ನಾವು ಸ್ಥಳದ ನಿರ್ವಹಣೆಗೆ ಅಗತ್ಯವಿರುವ ಶುಲ್ಕವನ್ನು ಮಾತ್ರ ಇರಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...