Homeಮುಖಪುಟಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

- Advertisement -
- Advertisement -

ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು. ಇದು ನರೇಂದ್ರ ಮೋದಿ ಸರ್ಕಾರಕ್ಕೆ ಸಹಕಾರಿಯಾಗಿದೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ.

ಔಷಧಗಳನ್ನು ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರ ಎಂಬ ಔಷಧಾಲಯಗಳ ಮೂಲಕ ಮಾರಾಟ ಮಾಡಲಾಗುತ್ತದೆ. 2016ರಲ್ಲಿ ಮರುಬ್ರಾಂಡ್ ಮಾಡಲಾದ ಸಮಯದಲ್ಲಿ ಪ್ರಧಾನ್ ಮಂತ್ರಿ ಹೆಸರನ್ನು ಸೇರಿಸಲಾಯಿತು. ಇಂದು ದೇಶದಲ್ಲಿ ಸುಮಾರು 8,700 ಔಷಧಿ ಅಂಗಡಿಗಳಿವೆ. ಸಾಮಾನ್ಯವಾಗಿ ಬಳಸುವ 1,600 ಜೆನೆರಿಕ್‌ಗಳು, 240 ಶಸ್ತ್ರಚಿಕಿತ್ಸಾ ವಸ್ತುಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕೇಂದ್ರೀಯ ಸಂಸ್ಥೆಯಾದ ಫಾರ್ಮಾಸ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದ ಪ್ರಕಾರ ದಾಸ್ತಾನು ನಿರಂತರವಾಗಿ ಹೆಚ್ಚಾಗುತ್ತಿದೆ.

‘ಬಿಜೆಪಿ’ ಯೋಜನೆಯು ಕಳೆದ ಹಣಕಾಸು ವರ್ಷದಲ್ಲಿ ಕೇವಲ 4,760 ಕೋಟಿ ರೂ.ಗಳಲ್ಲಿ ಹೆಚ್ಚಿನ ರೋಗಿಗಳನ್ನು ಉಳಿಸಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ ಜೆನೆರಿಕ್ ಔಷಧಗಳು ಬ್ರಾಂಡ್ ಔಷಧಿಗಳಿಗಿಂತ 50-90 ಪ್ರತಿಶತ ಅಗ್ಗವಾಗಿವೆ ಎಂದು ಬ್ಯೂರೋದ ಸಿಇಒ ರವಿ ದಾಧಿಚ್ ಹೇಳಿದ್ದಾರೆ. ಉದಾಹರಣೆಗೆ ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಬಳಸಲಾಗುವ ‘ಅಮ್ಲೋಡಿಪೈನ್’ 10-ಟ್ಯಾಬ್ಲೆಟ್ ಸ್ಟ್ರಿಪ್, ಈ ಯೋಜನೆಯಡಿಯಲ್ಲಿ ರೂ. 5.50 ಸಿಗುತ್ತದೆ. ಮಾರುಕಟ್ಟೆಯಲ್ಲಿ ಈ ಸ್ಟ್ರಿಪ್‌ಗೆ 28 ರೂ.ಗಳನ್ನು ನೀಡಬೇಕಾಗುತ್ತದೆ.

ಮುಂದಿನ ವರ್ಷದ ವೇಳೆಗೆ 10,000 ಜನೌಷಧಿ ಕೇಂದ್ರಗಳನ್ನು ಹೊಂದುವುದು ಸರ್ಕಾರದ ಯೋಜನೆಯಾಗಿದೆ ಎಂದು ದಧಿಚ್ ‘ನ್ಯೂಸ್‌ಲಾಂಡ್ರಿ’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಯೋಜನೆಯ “ಬಿಜೆಪಿ” ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದಂತೆ, ದಧಿಚ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದಾಗ್ಯೂ ಮರುಬ್ರಾಂಡಿಂಗ್‌ನಲ್ಲಿ ಭಾಗಿಯಾದ ‘ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯ’ದ ಉನ್ನತ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. “ರಾಜಕೀಯ ಪ್ರತಿನಿಧಿಗಳು” ಹೀಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ. ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿಲ್ಲ.

ಆದಾಗ್ಯೂ, ಈ ರೀತಿಯ ಬ್ರಾಂಡಿಂಗ್‌ ನಿಷೇಧಿಸಲಾಗಿಲ್ಲ. ತಾಂತ್ರಿಕವಾಗಿ ನೋಡಿದರೆ ರಾಜಕೀಯ ಜಾಹೀರಾತಿನ ವ್ಯಾಪ್ತಿಯೊಳಗೆ ಇದು ಬರುವುದಿಲ್ಲ. ಸರ್ಕಾರಿ ಜಾಹೀರಾತಿನಲ್ಲಿನ ವಿಷಯಗಳನ್ನು ನಿಯಂತ್ರಿಸಲೆಂದೇ ಸಮಿತಿಯೂ ಇದೆ.

“ತೆರಿಗೆದಾರರ ಹಣದಿಂದ ಪಾವತಿಸಿದ ಜಾಹೀರಾತುಗಳು ಸರ್ಕಾರಿ ಜವಾಬ್ದಾರಿಗಳಿಗೆ ಮಾತ್ರ ಸಂಬಂಧಿಸಿವೆ, ವಸ್ತುನಿಷ್ಠ ವಿಷಯವನ್ನು ಒಳಗೊಂಡಿರುತ್ತವೆ, ರಾಜಕೀಯ ಹಿತಾಸಕ್ತಿಗಳನ್ನು ಉತ್ತೇಜಿಸುವುದಿಲ್ಲ” ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ 2016ರಲ್ಲಿ ಸಮಿತಿ ರಚನೆಯಾಗಿದೆ.

ಸಮಿತಿಯು ಈ ಪಕ್ಷಪಾತಗಳನ್ನು ತಡೆದಿಲ್ಲ ಎಂದು ಆರೋಪಗಳು ಬಂದಿವೆ. “ಬಿಜೆಪಿಯ ಜಾಹೀರಾತುಗಳಿಗೆ ಸಮಿತಿ ಕಣ್ಣು ಮುಚ್ಚಿದೆ” ಎಂದು ಎಎಪಿ ದೂರಿದೆ.

ಡಿಸೆಂಬರ್ 2021ರವರೆಗೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್, ಆರೋಪಗಳನ್ನು ನಿರಾಕರಿಸಿದ್ದಾರೆ. “ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಲವು ಬಿಜೆಪಿ ಸರ್ಕಾರಗಳಿಗೆ ನೋಟಿಸ್‌ಗಳನ್ನು ನೀಡಲಾಗಿದೆ” ಎಂದಿದ್ದಾರೆ.

ಮೋದಿ ಸರ್ಕಾರವು ತನ್ನ ನಾಯಕರು ಮತ್ತು ಪಕ್ಷವನ್ನು ಪ್ರಚಾರ ಮಾಡಲು ಸಾರ್ವಜನಿಕ ಯೋಜನೆಗಳನ್ನು ಬಳಸಿದ ದಾಖಲೆಯನ್ನು ಹೊಂದಿದೆ. ದೀನದಯಾಳ್ ಉಪಾಧ್ಯಾಯರಂತಹ ಸಂಘ ಪರಿವಾರದ ನಾಯಕರ ಹೆಸರನ್ನು ಯೋಜನೆಗಳಿಗೆ ಮರುನಾಮಕರಣ ಮಾಡಿದ್ದಿದೆ.

ಇದನ್ನೂ ಓದಿರಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

(ಮೂಲ: ನ್ಯೂಸ್‌ಲಾಂಡ್ರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...