Homeಮುಖಪುಟಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

- Advertisement -
- Advertisement -

ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು. ಇದು ನರೇಂದ್ರ ಮೋದಿ ಸರ್ಕಾರಕ್ಕೆ ಸಹಕಾರಿಯಾಗಿದೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ.

ಔಷಧಗಳನ್ನು ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರ ಎಂಬ ಔಷಧಾಲಯಗಳ ಮೂಲಕ ಮಾರಾಟ ಮಾಡಲಾಗುತ್ತದೆ. 2016ರಲ್ಲಿ ಮರುಬ್ರಾಂಡ್ ಮಾಡಲಾದ ಸಮಯದಲ್ಲಿ ಪ್ರಧಾನ್ ಮಂತ್ರಿ ಹೆಸರನ್ನು ಸೇರಿಸಲಾಯಿತು. ಇಂದು ದೇಶದಲ್ಲಿ ಸುಮಾರು 8,700 ಔಷಧಿ ಅಂಗಡಿಗಳಿವೆ. ಸಾಮಾನ್ಯವಾಗಿ ಬಳಸುವ 1,600 ಜೆನೆರಿಕ್‌ಗಳು, 240 ಶಸ್ತ್ರಚಿಕಿತ್ಸಾ ವಸ್ತುಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕೇಂದ್ರೀಯ ಸಂಸ್ಥೆಯಾದ ಫಾರ್ಮಾಸ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದ ಪ್ರಕಾರ ದಾಸ್ತಾನು ನಿರಂತರವಾಗಿ ಹೆಚ್ಚಾಗುತ್ತಿದೆ.

‘ಬಿಜೆಪಿ’ ಯೋಜನೆಯು ಕಳೆದ ಹಣಕಾಸು ವರ್ಷದಲ್ಲಿ ಕೇವಲ 4,760 ಕೋಟಿ ರೂ.ಗಳಲ್ಲಿ ಹೆಚ್ಚಿನ ರೋಗಿಗಳನ್ನು ಉಳಿಸಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ ಜೆನೆರಿಕ್ ಔಷಧಗಳು ಬ್ರಾಂಡ್ ಔಷಧಿಗಳಿಗಿಂತ 50-90 ಪ್ರತಿಶತ ಅಗ್ಗವಾಗಿವೆ ಎಂದು ಬ್ಯೂರೋದ ಸಿಇಒ ರವಿ ದಾಧಿಚ್ ಹೇಳಿದ್ದಾರೆ. ಉದಾಹರಣೆಗೆ ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಬಳಸಲಾಗುವ ‘ಅಮ್ಲೋಡಿಪೈನ್’ 10-ಟ್ಯಾಬ್ಲೆಟ್ ಸ್ಟ್ರಿಪ್, ಈ ಯೋಜನೆಯಡಿಯಲ್ಲಿ ರೂ. 5.50 ಸಿಗುತ್ತದೆ. ಮಾರುಕಟ್ಟೆಯಲ್ಲಿ ಈ ಸ್ಟ್ರಿಪ್‌ಗೆ 28 ರೂ.ಗಳನ್ನು ನೀಡಬೇಕಾಗುತ್ತದೆ.

ಮುಂದಿನ ವರ್ಷದ ವೇಳೆಗೆ 10,000 ಜನೌಷಧಿ ಕೇಂದ್ರಗಳನ್ನು ಹೊಂದುವುದು ಸರ್ಕಾರದ ಯೋಜನೆಯಾಗಿದೆ ಎಂದು ದಧಿಚ್ ‘ನ್ಯೂಸ್‌ಲಾಂಡ್ರಿ’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಯೋಜನೆಯ “ಬಿಜೆಪಿ” ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದಂತೆ, ದಧಿಚ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದಾಗ್ಯೂ ಮರುಬ್ರಾಂಡಿಂಗ್‌ನಲ್ಲಿ ಭಾಗಿಯಾದ ‘ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯ’ದ ಉನ್ನತ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. “ರಾಜಕೀಯ ಪ್ರತಿನಿಧಿಗಳು” ಹೀಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ. ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿಲ್ಲ.

ಆದಾಗ್ಯೂ, ಈ ರೀತಿಯ ಬ್ರಾಂಡಿಂಗ್‌ ನಿಷೇಧಿಸಲಾಗಿಲ್ಲ. ತಾಂತ್ರಿಕವಾಗಿ ನೋಡಿದರೆ ರಾಜಕೀಯ ಜಾಹೀರಾತಿನ ವ್ಯಾಪ್ತಿಯೊಳಗೆ ಇದು ಬರುವುದಿಲ್ಲ. ಸರ್ಕಾರಿ ಜಾಹೀರಾತಿನಲ್ಲಿನ ವಿಷಯಗಳನ್ನು ನಿಯಂತ್ರಿಸಲೆಂದೇ ಸಮಿತಿಯೂ ಇದೆ.

“ತೆರಿಗೆದಾರರ ಹಣದಿಂದ ಪಾವತಿಸಿದ ಜಾಹೀರಾತುಗಳು ಸರ್ಕಾರಿ ಜವಾಬ್ದಾರಿಗಳಿಗೆ ಮಾತ್ರ ಸಂಬಂಧಿಸಿವೆ, ವಸ್ತುನಿಷ್ಠ ವಿಷಯವನ್ನು ಒಳಗೊಂಡಿರುತ್ತವೆ, ರಾಜಕೀಯ ಹಿತಾಸಕ್ತಿಗಳನ್ನು ಉತ್ತೇಜಿಸುವುದಿಲ್ಲ” ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ 2016ರಲ್ಲಿ ಸಮಿತಿ ರಚನೆಯಾಗಿದೆ.

ಸಮಿತಿಯು ಈ ಪಕ್ಷಪಾತಗಳನ್ನು ತಡೆದಿಲ್ಲ ಎಂದು ಆರೋಪಗಳು ಬಂದಿವೆ. “ಬಿಜೆಪಿಯ ಜಾಹೀರಾತುಗಳಿಗೆ ಸಮಿತಿ ಕಣ್ಣು ಮುಚ್ಚಿದೆ” ಎಂದು ಎಎಪಿ ದೂರಿದೆ.

ಡಿಸೆಂಬರ್ 2021ರವರೆಗೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್, ಆರೋಪಗಳನ್ನು ನಿರಾಕರಿಸಿದ್ದಾರೆ. “ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಲವು ಬಿಜೆಪಿ ಸರ್ಕಾರಗಳಿಗೆ ನೋಟಿಸ್‌ಗಳನ್ನು ನೀಡಲಾಗಿದೆ” ಎಂದಿದ್ದಾರೆ.

ಮೋದಿ ಸರ್ಕಾರವು ತನ್ನ ನಾಯಕರು ಮತ್ತು ಪಕ್ಷವನ್ನು ಪ್ರಚಾರ ಮಾಡಲು ಸಾರ್ವಜನಿಕ ಯೋಜನೆಗಳನ್ನು ಬಳಸಿದ ದಾಖಲೆಯನ್ನು ಹೊಂದಿದೆ. ದೀನದಯಾಳ್ ಉಪಾಧ್ಯಾಯರಂತಹ ಸಂಘ ಪರಿವಾರದ ನಾಯಕರ ಹೆಸರನ್ನು ಯೋಜನೆಗಳಿಗೆ ಮರುನಾಮಕರಣ ಮಾಡಿದ್ದಿದೆ.

ಇದನ್ನೂ ಓದಿರಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

(ಮೂಲ: ನ್ಯೂಸ್‌ಲಾಂಡ್ರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...