Homeಕರ್ನಾಟಕನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

ನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮಾಹಿತಿ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ ನಗರ. ಭಾರತದ ಅತ್ಯುತ್ತಮ ಜೀವನಯೋಗ್ಯ ನಗರಗಳಲ್ಲೊಂದು. ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ನಗರವೂ ಹೌದು.  ಅದ್ರೆ ಇಲ್ಲಿರುವ ನಮ್ಮ ಸ್ಥಿತಿ ನೋಡಿದರೆ ಜನರು ಮುಂದಕ್ಕೆ ಹೆಜ್ಜೆ ಹಾಕಲು ಭಯಪಡುವಂತಾಗಿದೆ. ಅವರನ್ನು ನಾನೇ ಅಪೋಶನ ತೆಗೆದುಕೊಳ್ಳುವಂತಾಗಿರುವುದು ದುರಂತ.

ಅಂದ ಹಾಗೆ ನಮ್ಮ ಹೆಸರು ಪುಟ್ಪಾತ್, ಕನ್ನಡದಲ್ಲಿ ಪಾದಚಾರಿ ಮಾರ್ಗ ಎಂದು ಕರೆಯುತ್ತಾರೆ. ಪ್ರತಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಾವಿರುತ್ತೇವೆ. ವಾಹನಗಳಿಂದ ಸುರಕ್ಷಿತವಾಗಿ ಜನ ನಮ್ಮನ್ನು ಬಳಸವಹುದಾಗಿದೆ. ಆದರೆ ನಮ್ಮ ಪರಿಸ್ಥಿತಿಯೋ ತೀರಾ ಹದಗೆಟ್ಟಿದೆ.

ಇತ್ತೀಚಿಗೆ ಅಷ್ಟೇ ಕಾಮಗಾರಿ ನಡೆಸಿದ್ದಾರೆ ಆಗಲೇ ಸಿಮೆಂಟ್ ಬ್ಲಾಕ್‍ಗಳು ಕಿತ್ತು ಹೋಗಿವೆ. ಹಾಸಿರುವ ಬಂಡೆಗಳು  ಮುರಿದು ಬಿದ್ದಿದೆ. ನಮ್ಮ ಮೇಲೆ ಬಿದ್ದಿರುವ ಮರದ ರೆಂಬೆ ಕೊಂಬೆಗಳನ್ನು ತೆರೆವುಗೊಳಿಸಿಲ್ಲ. ಕೆಲವೊಂದು ವಾರ್ಡ್‍ಗಳಲ್ಲಿ ನಾವೇ ಕಸದ ಬುಟ್ಟಿಗಳಾಗಿದ್ದೇವೆ. ಹೇಗಿದೆ ನೋಡಿ ಸ್ವಾಮಿ ನಮ್ಮ ಪರಿಸ್ಥಿತಿ. ನಮ್ಮ ಮೇಲೆ ಖುಷಿಯಿಂದ ಹೆಜ್ಜೆ ಹಾಕಬೇಕಾದವರು ಕಸದ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಹೋಗುವ ದುಸ್ಥಿತಿ ಬಂದಿದೆ. ಇದಕ್ಕೆಲ್ಲಾ ಮುಕ್ತಿ ಯಾವಾಗಪ್ಪಾ…..

 

ನಮ್ಮನ್ನ ಸರಿಯಾಗಿ ನೋಡಕೊಳ್ಳಬೇಕು, ಜನರು ಸುಖಕರವಾಗಿ ನಮ್ಮನ್ನು ಬಳಸಬೇಕು ಎಂದು ನಮ್ಮನ್ನು ಬಿಬಿಎಂಪಿಗೆ ಒಪ್ಪಿಸಿದ್ದಾರೆ. ಆದರೆ, ನಮ್ಮ ಪರಿಸ್ಥಿತಿಯನ್ನು ಕಂಡರೆ ಅವರು ಏನು ಕಾರ್ಯನಿರ್ವಹಿಸುತ್ತಿದ್ದರೋ ಎಂಬ ಅನುಮಾನ ಕಾಡ್ತಿದೆ.

ವಾಹನಗಳ ಪಾರ್ಕಿಂಗ್ ಸ್ಥಳ: ಪಾದಚಾರಿಗಳಿಗೆ ಮಾರ್ಗವಾಗಬೇಕಾದ ನಾವು ವಾರ್ಡ್‍ಗಳ ಒಳಗಡೆ ಹೇಗೆ ಬೇಕೋ ಹಾಗೇ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸ್ಥಳವಾಗಿದ್ದೇವೆ. ಹಾಗಾಗಿ ಇವರ ಹಾವಳಿ ಹೆಚ್ಚಾದಾಗ ಜನರು ನಮ್ಮನ್ನು ಹೇಗೆ ಬಳಸಲು ಸಾಧ್ಯ ಹೇಳಿ.

ಉದ್ಯಮ ನಗರಿಗೆ ವಾಹನ ದಟ್ಟಣೆ ಸಾಮಾನ್ಯ ಪದ. ಅದು ಗೊತ್ತಿದ್ದು ಸಹ ಈ ದ್ವಿಚಕ್ರ ವಾಹನ ಸವಾರರು ವಾಹನ ದಟ್ಟಣೆ ಉಂಟಾದಾಗ ನಮ್ಮ ಮೇಲೆಯೇ ಸವಾರಿ ನಡೆಸ್ತಾರೆ. ಒಮ್ಮೊಮ್ಮೆ ಸವಾರಿಯಲ್ಲಿ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಉದಾಹರಣೆಗಳು ಇವೆ. ಹಾಗಾಗಿ ಇದನ್ನು ತಪ್ಪಿಸಬೇಕು ಎಂದು ಅಲ್ಲಿಲ್ಲ ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದಾರೆ. ಆದರೂ ಸಹ ನಮ್ಮ ಮೇಲೆ ವಾಹನಗಳನ್ನು ಓಡಿಸುತ್ತಾರೆ ಏನು ಮಾಡೋಣ.

ನಮ್ಮ ಸ್ಥಿತಿ ಹೇಗಿದೆ ಅಂದರೆ ಯಾರಾದರೂ ನಮ್ಮ ಮಾರ್ಗದಲ್ಲಿ ಸಾಗುತ್ತಾ ಮೊಬೈಲ್ ಏನಾದರೂ ನೋಡಿಕೊಂಡು ಹೋದರಂತೂ
ಮುಖ ಮೂತಿ ಕಿತ್ತುಹೋಗುವುದಂತೂ ಗ್ಯಾರಂಟಿ.

ಇನ್ನು ಯಾರಾದರೂ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಂಡರಂತೂ ನಾವೇ ಕಾಮಾಗಾರಿಗೆ ಬೇಕಾದ ಕಲ್ಲು, ಮರಳು, ಜಲ್ಲಿ ಸಂಗ್ರಹಿಸುವ ಗೋದಾಮುಗಳು. ಅವರಿಗೆ ಹೇಳುವವರಿಲ್ಲ ಕೇಳುವವರಿಲ್ಲ. ಜನರು ಅಷ್ಟೇ ಯಾರೂ ಪ್ರಶ್ನಿಸದೆ ನಮಗ್ಯಾಕಪ್ಪ ನಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಂಡು ಹೋಗೋಣ ಎಂದು ಮುಂದುವರೆಯುತ್ತಾರೆ.

ಬಯಲು ಶೌಚಾಲಯ: ಪಾವತಿಸಿ ನಮ್ಮನ್ನು ಬಳಸಿ ಎಂದು ದೊಡ್ಡ ದೊಡ್ಡ ಬೋರ್ಡ್‍ಗಳನ್ನು ಹಾಕಿಕೊಂಡು ಸಾರ್ವಜನಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಆದರೆ, ಅದನ್ನು ಬಳಸದೇ ಎಲ್ಲಾದರೂ ಗೋಡೆ ಸಿಕ್ಕರೆ ಸಾಕು, ನನ್ನ ಮೇಲೆ ನಿಂತು ಮಜ್ಜನ ಮಾಡಿಸುವ ಪುಣ್ಯಾತ್ಮರು ಇದ್ದಾರೆ. ಆ ವಾಸನೆ ಕುಡಿದು ಅಲ್ಲಿ ಯಾರಾದರೂ ಓಡಾಡಲು ಸಾಧ್ಯವೇ ನೀವೇ ಹೇಳಿ.

ಬೀದಿ ಬದಿ ವ್ಯಾಪಾರಿಗಳು: ಹೊಟ್ಟೆ ಪಾಡಿಗಾಗಿ ಅನೇಕ ವರ್ಷಗಳಿಂದ ನನ್ನ ಮೇಲೆಯೇ ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಹೋಗಲಿ ಹೇಗೋ ಮಾಡಿಕೊಂಡು ಹೋಗಲಿ ಎಂದರೆ ಕೆಲವು ಜನರ ಓಡಾಡಕ್ಕೂ ತೊಂದರೆ ಮಾಡುತ್ತಿದ್ದಾರೆ. ಬಿಬಿಎಂಪಿ ಅನೇಕ ವರ್ಷಗಳಿಂದ ಬೀದಿ ವ್ಯಾಪಾರಿಗಳಿಗೆ ಮತ್ತೊಂದು ವ್ಯವಸ್ಥೆ ಮಾಡಿಕೊಟ್ಟಿದ್ದರು ಈ ಜನರಿಗೆ ಅಲ್ಲಿಗೆ ಹೋಗುವ ಮನಸ್ಸಿಲ್ಲ. ಅವರು ನನ್ನ ಮೇಲೆನೆ ವ್ಯಾಪಾರ ಮಾಡಬ್ಬೇಕು ಎಂದು ಕೂರ್ತಾರೆ. ನಂತರ ಕಸವನ್ನೆಲ್ಲಾ ಅಲ್ಲೇ ಹಾಕಿ ಹೋಗುತ್ತಾರೆ. ಅದನ್ನು ಒಮ್ಮೊಮ್ಮೆ ಬಿಬಿಎಂಪಿ ಅವರು ಕಸ ಎತ್ತುತ್ತಾರೆ ಇನ್ನೊಂದು ಸಲ ಎತ್ತುವುದಿಲ್ಲ. ಹಾಗಾಗಿ ನಮ್ಮ ಮೇಲೆ ಜನರು ಹೇಗೆ ಎಲ್ಲಾ ಕಡೆ ಸುಲಲಿತವಾಗಿ ಓಡಾಡಲು ಸಾಧ್ಯ ಹೇಳಿ.

ಒಟ್ಟಾರೆಯಾಗಿ ಬಿಬಿಎಂಪಿ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಿದರೆ, ನೀವು ಪಾದಾಚಾರಿಗಳು ಎಚ್ಚೆತ್ತುಕೊಂಡು ಕಸ ಬಿಸಾಡದೇ, ಗಲೀಜು ಮಾಡದೆ ನಮ್ಮನ್ನು ಶುಚಿಯಾಗಿಟ್ಟುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ಎಂಬುದು ನಮ್ಮ ಪಾದಚಾರಿ ಮಾರ್ಗದ ಆಶಯ.

ಬನ್ನಿ ನಮ್ಮ ಕುರಿತು ಜನಸಾಮಾನ್ಯರು ಏನು ಹೇಳಿದ್ದಾರೆ ಎಂದು ನೋಡೋಣ.

ಪಾದಚಾರಿ ಮಾರ್ಗವನ್ನು ಗಾಡಿಗಳು ಮತ್ತು ಬೀದಿ ವ್ಯಾಪಾರಿಗಳು ಆವರಿಸಿಕೊಂಡು ಜನರಿಗೆ ಓಡಾಡಲು ರಸ್ತೆ ಇಲ್ಲದಾಗಿದೆ. ಜೊತೆಗೆ ವ್ಯಾಪಾರಿಗಳು ಸುರಿಯುವ ಕಸವು ಕೊಳೆತು ಆರೋಗ್ಯ ಕೆಡುವಂತಾಗಿದೆ.
– ಸೌಮ್ಯ, ಬನಶಂಕರಿ ನಿವಾಸಿ.
=========
ವಾರ್ಡ್ ಒಳಗಿರುವ ಪಾದಚಾರಿ ಮಾರ್ಗಗಳು ಕಸದಿಂದಲೇ ರಾರಾಜಿಸಿತ್ತಿರುವೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಮ್ಯಾನ್‍ಹೋಲ್‍ಗಳಿಂದ ನೀರು ಸುರಿದು ಸುರಿದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ.
– ಮಂಜುನಾಥ್, ಶ್ರೀರಾಮಪುರ ನಿವಾಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಮರೆ-೨ ಅಂತ ಹಾಕಿದ್ದೀರಿ.

    ಎಲೆಮರೆ-೧ಹುಡುಕಿದೆ. ಇಲ್ಲ ಅಂದಿರಿ.ಏನಿದರ ಅರ್ಥ?

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....