Homeಕರ್ನಾಟಕನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

ನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮಾಹಿತಿ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ ನಗರ. ಭಾರತದ ಅತ್ಯುತ್ತಮ ಜೀವನಯೋಗ್ಯ ನಗರಗಳಲ್ಲೊಂದು. ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ನಗರವೂ ಹೌದು.  ಅದ್ರೆ ಇಲ್ಲಿರುವ ನಮ್ಮ ಸ್ಥಿತಿ ನೋಡಿದರೆ ಜನರು ಮುಂದಕ್ಕೆ ಹೆಜ್ಜೆ ಹಾಕಲು ಭಯಪಡುವಂತಾಗಿದೆ. ಅವರನ್ನು ನಾನೇ ಅಪೋಶನ ತೆಗೆದುಕೊಳ್ಳುವಂತಾಗಿರುವುದು ದುರಂತ.

ಅಂದ ಹಾಗೆ ನಮ್ಮ ಹೆಸರು ಪುಟ್ಪಾತ್, ಕನ್ನಡದಲ್ಲಿ ಪಾದಚಾರಿ ಮಾರ್ಗ ಎಂದು ಕರೆಯುತ್ತಾರೆ. ಪ್ರತಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಾವಿರುತ್ತೇವೆ. ವಾಹನಗಳಿಂದ ಸುರಕ್ಷಿತವಾಗಿ ಜನ ನಮ್ಮನ್ನು ಬಳಸವಹುದಾಗಿದೆ. ಆದರೆ ನಮ್ಮ ಪರಿಸ್ಥಿತಿಯೋ ತೀರಾ ಹದಗೆಟ್ಟಿದೆ.

ಇತ್ತೀಚಿಗೆ ಅಷ್ಟೇ ಕಾಮಗಾರಿ ನಡೆಸಿದ್ದಾರೆ ಆಗಲೇ ಸಿಮೆಂಟ್ ಬ್ಲಾಕ್‍ಗಳು ಕಿತ್ತು ಹೋಗಿವೆ. ಹಾಸಿರುವ ಬಂಡೆಗಳು  ಮುರಿದು ಬಿದ್ದಿದೆ. ನಮ್ಮ ಮೇಲೆ ಬಿದ್ದಿರುವ ಮರದ ರೆಂಬೆ ಕೊಂಬೆಗಳನ್ನು ತೆರೆವುಗೊಳಿಸಿಲ್ಲ. ಕೆಲವೊಂದು ವಾರ್ಡ್‍ಗಳಲ್ಲಿ ನಾವೇ ಕಸದ ಬುಟ್ಟಿಗಳಾಗಿದ್ದೇವೆ. ಹೇಗಿದೆ ನೋಡಿ ಸ್ವಾಮಿ ನಮ್ಮ ಪರಿಸ್ಥಿತಿ. ನಮ್ಮ ಮೇಲೆ ಖುಷಿಯಿಂದ ಹೆಜ್ಜೆ ಹಾಕಬೇಕಾದವರು ಕಸದ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಹೋಗುವ ದುಸ್ಥಿತಿ ಬಂದಿದೆ. ಇದಕ್ಕೆಲ್ಲಾ ಮುಕ್ತಿ ಯಾವಾಗಪ್ಪಾ…..

 

ನಮ್ಮನ್ನ ಸರಿಯಾಗಿ ನೋಡಕೊಳ್ಳಬೇಕು, ಜನರು ಸುಖಕರವಾಗಿ ನಮ್ಮನ್ನು ಬಳಸಬೇಕು ಎಂದು ನಮ್ಮನ್ನು ಬಿಬಿಎಂಪಿಗೆ ಒಪ್ಪಿಸಿದ್ದಾರೆ. ಆದರೆ, ನಮ್ಮ ಪರಿಸ್ಥಿತಿಯನ್ನು ಕಂಡರೆ ಅವರು ಏನು ಕಾರ್ಯನಿರ್ವಹಿಸುತ್ತಿದ್ದರೋ ಎಂಬ ಅನುಮಾನ ಕಾಡ್ತಿದೆ.

ವಾಹನಗಳ ಪಾರ್ಕಿಂಗ್ ಸ್ಥಳ: ಪಾದಚಾರಿಗಳಿಗೆ ಮಾರ್ಗವಾಗಬೇಕಾದ ನಾವು ವಾರ್ಡ್‍ಗಳ ಒಳಗಡೆ ಹೇಗೆ ಬೇಕೋ ಹಾಗೇ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸ್ಥಳವಾಗಿದ್ದೇವೆ. ಹಾಗಾಗಿ ಇವರ ಹಾವಳಿ ಹೆಚ್ಚಾದಾಗ ಜನರು ನಮ್ಮನ್ನು ಹೇಗೆ ಬಳಸಲು ಸಾಧ್ಯ ಹೇಳಿ.

ಉದ್ಯಮ ನಗರಿಗೆ ವಾಹನ ದಟ್ಟಣೆ ಸಾಮಾನ್ಯ ಪದ. ಅದು ಗೊತ್ತಿದ್ದು ಸಹ ಈ ದ್ವಿಚಕ್ರ ವಾಹನ ಸವಾರರು ವಾಹನ ದಟ್ಟಣೆ ಉಂಟಾದಾಗ ನಮ್ಮ ಮೇಲೆಯೇ ಸವಾರಿ ನಡೆಸ್ತಾರೆ. ಒಮ್ಮೊಮ್ಮೆ ಸವಾರಿಯಲ್ಲಿ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಉದಾಹರಣೆಗಳು ಇವೆ. ಹಾಗಾಗಿ ಇದನ್ನು ತಪ್ಪಿಸಬೇಕು ಎಂದು ಅಲ್ಲಿಲ್ಲ ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದಾರೆ. ಆದರೂ ಸಹ ನಮ್ಮ ಮೇಲೆ ವಾಹನಗಳನ್ನು ಓಡಿಸುತ್ತಾರೆ ಏನು ಮಾಡೋಣ.

ನಮ್ಮ ಸ್ಥಿತಿ ಹೇಗಿದೆ ಅಂದರೆ ಯಾರಾದರೂ ನಮ್ಮ ಮಾರ್ಗದಲ್ಲಿ ಸಾಗುತ್ತಾ ಮೊಬೈಲ್ ಏನಾದರೂ ನೋಡಿಕೊಂಡು ಹೋದರಂತೂ
ಮುಖ ಮೂತಿ ಕಿತ್ತುಹೋಗುವುದಂತೂ ಗ್ಯಾರಂಟಿ.

ಇನ್ನು ಯಾರಾದರೂ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಂಡರಂತೂ ನಾವೇ ಕಾಮಾಗಾರಿಗೆ ಬೇಕಾದ ಕಲ್ಲು, ಮರಳು, ಜಲ್ಲಿ ಸಂಗ್ರಹಿಸುವ ಗೋದಾಮುಗಳು. ಅವರಿಗೆ ಹೇಳುವವರಿಲ್ಲ ಕೇಳುವವರಿಲ್ಲ. ಜನರು ಅಷ್ಟೇ ಯಾರೂ ಪ್ರಶ್ನಿಸದೆ ನಮಗ್ಯಾಕಪ್ಪ ನಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಂಡು ಹೋಗೋಣ ಎಂದು ಮುಂದುವರೆಯುತ್ತಾರೆ.

ಬಯಲು ಶೌಚಾಲಯ: ಪಾವತಿಸಿ ನಮ್ಮನ್ನು ಬಳಸಿ ಎಂದು ದೊಡ್ಡ ದೊಡ್ಡ ಬೋರ್ಡ್‍ಗಳನ್ನು ಹಾಕಿಕೊಂಡು ಸಾರ್ವಜನಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಆದರೆ, ಅದನ್ನು ಬಳಸದೇ ಎಲ್ಲಾದರೂ ಗೋಡೆ ಸಿಕ್ಕರೆ ಸಾಕು, ನನ್ನ ಮೇಲೆ ನಿಂತು ಮಜ್ಜನ ಮಾಡಿಸುವ ಪುಣ್ಯಾತ್ಮರು ಇದ್ದಾರೆ. ಆ ವಾಸನೆ ಕುಡಿದು ಅಲ್ಲಿ ಯಾರಾದರೂ ಓಡಾಡಲು ಸಾಧ್ಯವೇ ನೀವೇ ಹೇಳಿ.

ಬೀದಿ ಬದಿ ವ್ಯಾಪಾರಿಗಳು: ಹೊಟ್ಟೆ ಪಾಡಿಗಾಗಿ ಅನೇಕ ವರ್ಷಗಳಿಂದ ನನ್ನ ಮೇಲೆಯೇ ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಹೋಗಲಿ ಹೇಗೋ ಮಾಡಿಕೊಂಡು ಹೋಗಲಿ ಎಂದರೆ ಕೆಲವು ಜನರ ಓಡಾಡಕ್ಕೂ ತೊಂದರೆ ಮಾಡುತ್ತಿದ್ದಾರೆ. ಬಿಬಿಎಂಪಿ ಅನೇಕ ವರ್ಷಗಳಿಂದ ಬೀದಿ ವ್ಯಾಪಾರಿಗಳಿಗೆ ಮತ್ತೊಂದು ವ್ಯವಸ್ಥೆ ಮಾಡಿಕೊಟ್ಟಿದ್ದರು ಈ ಜನರಿಗೆ ಅಲ್ಲಿಗೆ ಹೋಗುವ ಮನಸ್ಸಿಲ್ಲ. ಅವರು ನನ್ನ ಮೇಲೆನೆ ವ್ಯಾಪಾರ ಮಾಡಬ್ಬೇಕು ಎಂದು ಕೂರ್ತಾರೆ. ನಂತರ ಕಸವನ್ನೆಲ್ಲಾ ಅಲ್ಲೇ ಹಾಕಿ ಹೋಗುತ್ತಾರೆ. ಅದನ್ನು ಒಮ್ಮೊಮ್ಮೆ ಬಿಬಿಎಂಪಿ ಅವರು ಕಸ ಎತ್ತುತ್ತಾರೆ ಇನ್ನೊಂದು ಸಲ ಎತ್ತುವುದಿಲ್ಲ. ಹಾಗಾಗಿ ನಮ್ಮ ಮೇಲೆ ಜನರು ಹೇಗೆ ಎಲ್ಲಾ ಕಡೆ ಸುಲಲಿತವಾಗಿ ಓಡಾಡಲು ಸಾಧ್ಯ ಹೇಳಿ.

ಒಟ್ಟಾರೆಯಾಗಿ ಬಿಬಿಎಂಪಿ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಿದರೆ, ನೀವು ಪಾದಾಚಾರಿಗಳು ಎಚ್ಚೆತ್ತುಕೊಂಡು ಕಸ ಬಿಸಾಡದೇ, ಗಲೀಜು ಮಾಡದೆ ನಮ್ಮನ್ನು ಶುಚಿಯಾಗಿಟ್ಟುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ಎಂಬುದು ನಮ್ಮ ಪಾದಚಾರಿ ಮಾರ್ಗದ ಆಶಯ.

ಬನ್ನಿ ನಮ್ಮ ಕುರಿತು ಜನಸಾಮಾನ್ಯರು ಏನು ಹೇಳಿದ್ದಾರೆ ಎಂದು ನೋಡೋಣ.

ಪಾದಚಾರಿ ಮಾರ್ಗವನ್ನು ಗಾಡಿಗಳು ಮತ್ತು ಬೀದಿ ವ್ಯಾಪಾರಿಗಳು ಆವರಿಸಿಕೊಂಡು ಜನರಿಗೆ ಓಡಾಡಲು ರಸ್ತೆ ಇಲ್ಲದಾಗಿದೆ. ಜೊತೆಗೆ ವ್ಯಾಪಾರಿಗಳು ಸುರಿಯುವ ಕಸವು ಕೊಳೆತು ಆರೋಗ್ಯ ಕೆಡುವಂತಾಗಿದೆ.
– ಸೌಮ್ಯ, ಬನಶಂಕರಿ ನಿವಾಸಿ.
=========
ವಾರ್ಡ್ ಒಳಗಿರುವ ಪಾದಚಾರಿ ಮಾರ್ಗಗಳು ಕಸದಿಂದಲೇ ರಾರಾಜಿಸಿತ್ತಿರುವೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಮ್ಯಾನ್‍ಹೋಲ್‍ಗಳಿಂದ ನೀರು ಸುರಿದು ಸುರಿದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ.
– ಮಂಜುನಾಥ್, ಶ್ರೀರಾಮಪುರ ನಿವಾಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಮರೆ-೨ ಅಂತ ಹಾಕಿದ್ದೀರಿ.

    ಎಲೆಮರೆ-೧ಹುಡುಕಿದೆ. ಇಲ್ಲ ಅಂದಿರಿ.ಏನಿದರ ಅರ್ಥ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...