Homeಕರ್ನಾಟಕಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

ಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

- Advertisement -
- Advertisement -

ಕೊಡಗು: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನದ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್‌.ಮನು ಶೆಣೈ (64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮನು ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಗೆಳೆಯರ ಬಳಗವನ್ನು ಅಗಲಿದ್ದಾರೆ.

ಅಗಲಿಗೆ ಜೀವಕ್ಕೆ ಸಂತಾಪ

“ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅರವತ್ತಮೂರು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅವರ ಅಗಲಿಕೆಗೆ ಸಂತಾಪ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ” ಎಂದು ಕೊಡಗು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

‘ರಾಜೀಯಾಗದ ಗೆಳೆಯ’

“ಮನು ನನ್ನ ಅತ್ಯಂತ ಆಪ್ತ ಗೆಳೆಯ. ನನ್ನೂರು ವಿರಾಜಪೇಟೆಯವರು. ನಿಷ್ಠುರ ಪ್ರಾಮಾಣಿಕ, ಪತ್ರಕರ್ತ. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿ, 1996ರಲ್ಲಿ ತನ್ನದೇ ಸ್ವಂತ ಪತ್ರಿಕೆ “ಕೊಡಗು ಸಮಾಚಾರ” ಆರಂಭಿಸಿಯೇ ಬಿಟ್ಟರು. ಒಂದು ಪತ್ರಿಕೆ ನಡೆಸೋದು ಎಷ್ಟು ಕಷ್ಟ ಎನ್ನುವುದು ಅದರ ಅನುಭವ ಇರುವವರಿಗೆ ಗೊತ್ತು. ಅನೇಕ ಸಮಸ್ಯೆಗಳ ಮಧ್ಯೆಯೂ ಅದನ್ನು ನಿಲ್ಲಿಸದೆ, ತಾನು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ 25 ವರ್ಷಗಳ ಕಾಲ ನಡೆಸಿದರು. ವಸ್ತು ನಿಷ್ಟ ವರದಿಗಾಗಿ ಅಲೆದಾಡಿ ಇದ್ದುದನ್ನ ಇದ್ದ ಹಾಗೆ ಬರೆಯುವ ಧೈರ್ಯ ಇದ್ದ ಮನು, ಅದರಿಂದ ಅನೇಕರ ಪಾಲಿಗೆ ‘ಶತ್ರು’ ಆಗಿದ್ದರು” ಎಂದು ಪತ್ರಕರ್ತ ಬೋಪಯ್ಯ ಚೋವಂಡ ಸ್ಮರಿಸಿದ್ದಾರೆ.

“ಇದು ಕಂಪ್ರೊಮೈಸ್ ಕಾಲ. ಸ್ವಲ್ಪ ಕಂಪ್ರೊಮೈಸ್‌ ಮಾಡ್ಕೊಂಡರೆ ಎಲ್ಲಾ ಸವಲತ್ತುಗಳು, ಪ್ರಶಸ್ತಿ, ಪುರಸ್ಕಾರಗಳು ಸಿಗುತ್ತವೆ. ಆದ್ರೆ ಮನು ಎಂದೂ ಅದನ್ನು ಮಾಡಲಿಲ್ಲ. ಹಾಗಾಗಿ ಅವನಿಗೆ ಸಿಗಬೇಕಿದ್ದ ಪ್ರಶಸ್ತಿಗಳೂ ಸಿಗಲಿಲ್ಲ. ಮನು ತುಂಬಾ ಕಷ್ಟ ಪಟ್ಟ. ಕಷ್ಟಪಡ್ತಾನೆ ಹೋಗಿ ಬಿಟ್ಟ! ಪ್ರಗತಿಪರ ಚಿಂತಕ, ಫೈರ್ ಬ್ರಾಂಡ್‌ ಎಂದೇ ಖ್ಯಾತರಾದ ಸುಬ್ಬಯ್ಯ ಅವರ ಬಗ್ಗೆ ಎರಡು ಪುಸ್ತಕಗಳನ್ನು ಬರೆದಿದ್ದರು. ಅಲ್ಲದೆ ಸುಬ್ಬಯ್ಯ ಅವರ ಬಗ್ಗೆ ಸಂಪಾದಿಸಿದ ಆರು ಪುಸ್ತಕಗಳನ್ನು ಹೊರತಂದಿದ್ದರು. ಮನು ನಡೆಸುತ್ತಿದ್ದ ಪತ್ರಿಕೆಗೆ ಸುಬ್ಬಯ್ಯನವರು ಸುಮಾರು 150 ವಾರಗಳ ಕಾಲ ಲೇಖನ ಬರೆದಿದ್ದರು” ಎಂದು ನೆನೆದಿದ್ದಾರೆ.

ಎಸ್‌ಡಿಪಿಐ ಕೊಡಗು ಘಟಕ ಸಂತಾಪ ಸೂಚಿಸಿದ್ದು, “ಪ್ರಸ್ತುತ ಕಾಲದಲ್ಲಿ ಹೆಚ್ಚಿನ ಪತ್ರಕರ್ತರು ಫ್ಯಾಸಿಸ್ಟರ ಎಂಜಲು ಕಾಸಿನ ಆಸೆಗೋಸ್ಕರ ಪತ್ರಿಕಾ ಧರ್ಮವನ್ನು ಮೆರೆತು ವರದಿ ಮಾಡುತ್ತಿರುವ ಸಂದರ್ಭದಲ್ಲಿ ಬಿ.ಎನ್.ಮನು ಶೆಣೈ ಯವರು ಯಾವುದೇ ಆಸೆ ಆಮಿಷಗಳಿಗೆ ಬಲಿ ಬೀಳದೆ ತನ್ನ ಬರಹದ ಮೂಲಕ ಫ್ಯಾಸಿಸಂಅನ್ನು ಕಟು ಶಬ್ದದ ಮೂಲಕ ವಿರೋಧಿಸುತ್ತಿದ್ದರು. ಇವರ ನಿಧನವು ಸಮಾಜಕ್ಕೆ ಮತ್ತು ಫ್ಯಾಸಿಸ್ಟ್ ವಿರೋಧಿ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದೆ.

“ಜೀವಪರ ದನಿ, ಪತ್ರಕರ್ತ ಮನು ಶೆಣೈ ಇನ್ನಿಲ್ಲ ಎಂಬ ಸುದ್ದಿ ಕೇಳಿದೆ. ನಿಜಕ್ಕೂ ನೋವಿನ ಸಂಗತಿ” ಎಂದು ಪತ್ರಕರ್ತ ಶಶಿಧರ್‌ ಹೆಮ್ಮಾಡಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...