Homeಕರ್ನಾಟಕಬೀದರ್‌: ಕೇಂದ್ರ ಸಚಿವ ಖೂಬಾರನ್ನು ಪ್ರಶ್ನಿಸಿದ ಶಿಕ್ಷಕ ಅಮಾನತು

ಬೀದರ್‌: ಕೇಂದ್ರ ಸಚಿವ ಖೂಬಾರನ್ನು ಪ್ರಶ್ನಿಸಿದ ಶಿಕ್ಷಕ ಅಮಾನತು

- Advertisement -
- Advertisement -

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಪ್ರಶ್ನಿಸಿದ್ದ ಕರ್ನಾಟಕದ ಶಿಕ್ಷಕರೊಬ್ಬರನ್ನು ಇತ್ತೀಚೆಗೆ ಅಮಾನತುಗೊಳಿಸಲಾಗಿದ್ದು, ಸಚಿವರೊಂದಿಗೆ ಶಿಕ್ಷಕ ಮಾತನಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ.

ಬೀದರ್ ಜಿಲ್ಲೆಯ ಹೇಡಗಾಪುರ ಗ್ರಾಮದ ನಿವಾಸಿ, ಶಿಕ್ಷಕ ಕುಶಾಲ್ ಪಾಟೀಲ್ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

‘ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ಬೀದರ್‌ನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ್ ಪಾಟೀಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ನಗನೂರ ತಿಳಿಸಿದ್ದಾರೆ.

‘ಸಚಿವರ ಜೊತೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೇ, ಅವರೊಂದಿಗಿನ ಸಂಭಾಷಣೆಯನ್ನು ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಾರಣ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಹೆಡಗಾಪುರ ಗ್ರಾಮದ ಕುಶಾಲ ಪಾಟೀಲ, ಭಗವಂತ ಖೂಬಾ ಅವರಿಗೆ ಕರೆ ಮಾಡಿ, ‘ಊರಿನಲ್ಲಿ ಗೊಬ್ಬರ ಸಿಗುತ್ತಿಲ್ಲ. ರೈತರು ತೊಂದರೆಯಲ್ಲಿದ್ದಾರೆ. ಇದರಿಂದ ನಿಮ್ಮ ಹೆಸರು ಕೆಡುತ್ತಿದೆ. ಹೀಗಾದರೆ ಮುಂದಿನ ಚುನಾವಣೆಯಲ್ಲಿ ನಿಮಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದ್ದರು.

ಇದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯಿಸಿ, ‘ನಾನು ಕೇಂದ್ರ ಸಚಿವ, ಮನೆ ಮನೆಗೆ ಗೊಬ್ಬರ ಪೂರೈಸಲು ಆಗುವುದೇ’ ಎಂದು ಪ್ರಶ್ನಿಸಿದ್ದರು. ನಂತರ ರೈತ ಸಂಘಟನೆಗಳ ಪದಾಧಿಕಾರಿಗಳು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಪಾಟೀಲ್‌ ಅವರ ಕರೆ ಸ್ವೀಕರಿಸಿ ಮಾತನಾಡಿದ್ದ ಖೂಬಾ, “ಇದಕ್ಕೆ ಏನು ಮಾಡಲಾಗದು. ಈಗಾಗಲೇ ರಾಜ್ಯಗಳಿಗೆ ರಸಗೊಬ್ಬರ ಕಳುಹಿಸಿದ್ದು, ಸ್ಥಳೀಯ ಶಾಸಕರನ್ನು ಸಂಪರ್ಕಿಸಿ” ಎಂದು ಸೂಚಿಸಿದ್ದರು.

ಪಾಟೀಲ್ ಅವರು, “ನಮ್ಮ ಗ್ರಾಮದಲ್ಲಿ ನೀವು ಮತ ಕೇಳಲು ಸಾಧ್ಯವಾಗುವುದಿಲ್ಲ. ಬೀದರ್ ಲೋಕಸಭಾ ಕ್ಷೇತ್ರದಿಂದ ಮತ್ತೆ ಆಯ್ಕೆಯಾಗುವುದಿಲ್ಲ” ಎಂದು ಹೇಳುತ್ತಿದ್ದಂತೆ ಸಚಿವರು ಸಿಟ್ಟಿಗೆದ್ದರು.

“ನಾನು ಭಾರತ ಸರ್ಕಾರದ ಮಂತ್ರಿಯಾಗಿದ್ದೇನೆ. ಹಲವು ರಾಜ್ಯಗಳನ್ನು ನೋಡಿಕೊಳ್ಳುತ್ತಿದ್ದೇನೆ. ನೀವು ನಿಮ್ಮ ಶಾಸಕರು ಮತ್ತು ಅಧಿಕಾರಿಗಳ ಬಳಿಗೆ ಹೋಗಬೇಕು” ಎಂದು ಸಚಿವರು ಹೇಳಿರುವುದಾಗಿ ವರದಿಯಾಗಿದೆ.

ಆಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ತನಿಖೆ ಆರಂಭಿಸಿ ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ಇದರ ಆಧಾರದ ಮೇಲೆ ಕರ್ತವ್ಯಲೋಪ, ಬೇಜವಾಬ್ದಾರಿತನ ಮತ್ತು ದುರ್ನಡತೆಯ ಆರೋಪದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ. ಉದ್ದೇಶಪೂರ್ವಕವಾಗಿ ದೂರವಾಣಿ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಶಾಲ ಪಾಟೀಲ್, “ನಾನು ಕೃಷಿಕ ಕುಟುಂಬದಿಂದ ಬಂದವನು. ಕಳೆದ ಕೆಲವು ಹಂಗಾಮಿನಿಂದ ರಸಗೊಬ್ಬರ ಸಿಗದೆ ರೈತರು ಪರದಾಡುತ್ತಿದ್ದಾರೆ. ಜನರು ಭಗವಂತ ಖೂಬಾ ಅವರನ್ನು ಅಧಿಕಾರಕ್ಕೆ ತಂದಿದ್ದಾರೆ. ತಮ್ಮ ಸಮಸ್ಯೆಗಳ ಬಗ್ಗೆ ಅವರನ್ನು ಸಂಪರ್ಕಿಸುವ ಮತ್ತು ಪ್ರಶ್ನಿಸುವ ಹಕ್ಕು ಜನರಿಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...