Homeಕರ್ನಾಟಕಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 'ಜನ ಪ್ರಕಾಶನ' ವತಿಯಿಂದ ಭಾನುವಾರ ಜಸ್ಟೀಸ್‌ ಎಚ್.ಎನ್‌.ನಾಗಮೋಹನ್ ದಾಸ್ ಅವರ 'ಮೀಸಲಾತಿ; ಭ್ರಮೆ ಮತ್ತು ವಾಸ್ತವ' ಪುಸ್ತಕ ಬಿಡುಗಡೆ ಮಾಡಲಾಯಿತು.

- Advertisement -
- Advertisement -

ಈ ದೇಶದ ಸಂಪತ್ತನ್ನು ಆರಾಮಾಗಿ ಕುಳಿತು ಅನುಭವಿಸಿದವರು ಇಂದು ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಜನ ಪ್ರಕಾಶನ’ ವತಿಯಿಂದ ಭಾನುವಾರ ಆಯೋಜಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್ ಅವರ ‘ಮೀಸಲಾತಿ: ಭ್ರಮೆ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಹುಸಂಖ್ಯಾತ ಶೂದ್ರರನ್ನು ಅಕ್ಷರದಿಂದ ವಂಚಿಸಿ, ಅವರು ಸಂಪತ್ತನ್ನು ಅನುಭವಿಸಿದ್ದು ಮೀಸಲಾತಿ ಅಲ್ಲವೇ? ಈಗ ಮಾತ್ರ ಮೀಸಲಾತಿ ಯಾಕೆ? ಇನ್ನೆಷ್ಟು ದಿನ ಮೀಸಲಾತಿ ಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಇದು ಸರಿಯಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಾತಿ ಕಾರಣಕ್ಕಾಗಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಉಂಟಾಗಿದೆ. ಇದು ಯಾಕಾಯಿತು? ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅವರ ಒಳಿತಿಗೆ ಜಾತಿ ವ್ಯವಸ್ಥೆಯನ್ನು ಗಟ್ಟಿಗೊಳಿಸಿದರು. 12ನೇ ಶತಮಾನದಲ್ಲಿ ಬಸವಾದಿ ಶರಣರು ಕಾಯಕ ಮಾಡಿ ಅಂತ ಹೇಳಿದ್ದರು. ಶ್ರಮ ಜೀವಿಗಳು ದುಡಿಯುತ್ತಿದ್ದರೆ, ಆ ಒಂದು ಸಮುದಾಯ ಮಾತ್ರ ಕುಳಿತುಕೊಂಡು ಮಜಾ ಮಾಡುತ್ತಿತ್ತು. ಆಗ ಅವರು ಅನುಭವಿಸಿದ್ದು ಅಲಿಖಿತ ಮೀಸಲಾತಿ ಅಲ್ಲವೇ? ಈಗ ಅವರೇ ಮೀಸಲಾತಿ ಯಾಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಸಮಾನತೆಗೆ ಕಾರಣರಾದವರು ಈಗ ಮೀಸಲಾತಿಯನ್ನು ಪ್ರಶ್ನೆ ಮಾಡುತ್ತಾರೆ” ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ 4635 ಜಾತಿಗಳಿವೆ. ಇವನ್ನೆಲ್ಲ ಹುಟ್ಟು ಹಾಕಿದವರು ಯಾರು? ಈಗ ಅವರೇ ಪ್ರಶ್ನೆ ಕೇಳುತ್ತಾರೆ. ನಾನೇದಾರೂ ಈ ಬಗ್ಗೆ ಪ್ರಶ್ನೆ ಕೇಳಿದರೆ ಎಲ್ಲರೂ ನನ್ನ ಮೈಮೇಲೆ ಬೀಳುತ್ತಾರೆ. ನಮ್ಮವರು ಒಬ್ಬರೂ ಮಾತನಾಡಲ್ಲ. ಇದು ವಾಸ್ತವ ಎಂದು ಸಿದ್ದರಾಮಯ್ಯ ಬೇಸರ ಹೊರಹಾಕಿದರು.

ಇದನ್ನೂ ಓದಿರಿ: ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಭಾರತಕ್ಕೆ ಸ್ವಾತಂತ್ರ್ಯ ಬಂದ 21 ವರ್ಷಗಳ ನಂತರ ಹಿಂದುಳಿದ ಜಾತಿಗಳಿಗೆ (ಒಬಿಸಿ) ಮೀಸಲಾತಿ ನೀಡಲಾಯಿತು. ನಾವು ಎಲ್ಲವನ್ನೂ ಸಹಿಸಿಕೊಂಡು ಸುಮ್ಮನಿದ್ದೇವೆ. ಸಂವಿಧಾನ ಜಾರಿಯಾದಾಗ ಪರಿಶಿಷ್ಟರಿಗೆ ಮೀಸಲಾತಿ ಸಿಕ್ಕಿತು. ಆದರೆ, ಕೇಂದ್ರದಲ್ಲಿ ವಿ ಪಿ ಸಿಂಗ್ ಅಧಿಕಾರಕ್ಕೆ ಬರುವವರೆಗೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸಿಗಲಿಲ್ಲ ಎಂದು ಇತಿಹಾಸ ಮೆಲುಕು ಹಾಕಿದರು.

ನಾವೀಗ ಚಲನರಹಿತವಾದ ಸಮಾಜದಲ್ಲಿದ್ದೇವೆ. ಸಮಾಜಕ್ಕೆ ಚಲನೆ ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಶಿಕ್ಷಣ, ಅಧಿಕಾರ ಮತ್ತು ಸಂಪತ್ತಿನಲ್ಲಿ ಸಮಾನತೆ ಬಂದಾಗ ಬದಲಾವಣೆ ಸಾಧ್ಯ. ಸಮಾಜಕ್ಕೆ ಚಲನಶೀಲತೆ ಬಂದಾಗ ಬದಲಾವಣೆ ಸಾಧ್ಯ. ಇದರ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕು. ಕೇವಲ ರಾಜಕೀಯ ಸ್ವಾತಂತ್ರ್ಯ ಇದ್ದರೆ ಸಾಲದು. ಅದರ ಜತೆಗೆ ಆರ್ಥಿಕ ಸ್ವಾತಂತ್ರ ಇದ್ದಾಗ ಮಾತ್ರ ನಾವು ಸ್ವಾತಂತ್ರ ಪಡೆದುಕೊಂಡಿದ್ದು ಸಾರ್ಥಕವಾಗುತ್ತದೆ ಎಂದು ಎಚ್ಚರಿಸಿದರು.

“ಸವರ್ಣೀಯ ಬಡವರಿಗೆ ಮೋದಿ ಶೇ.10ರಷ್ಟು ಮೀಸಲಾತಿ ನೀಡಿದ್ದಾರೆ. ಇದಕ್ಕೆ ಸಂವಿಧಾನದಲ್ಲಿ ಅವಕಾಶ ಇದೆಯಾ? ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂಬ ಕಾನೂನಿದೆಯಾ? ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಒಂದೇ ದಿನದಲ್ಲಿ ಮೀಸಲಾತಿ ಜಾರಿಗೆ ತಂದರು. ಅಂಬೇಡ್ಕರ್ ಮೀಸಲಾತಿ ಬಗ್ಗೆ ಸಾಕಷ್ಟು ಸ್ಪಷ್ಟನೆ ಕೊಟ್ಟಿದ್ದರೂ ಮೀಸಲಾತಿ ಇನ್ನೂ ಎಷ್ಟು ವರ್ಷ ಎಂದು ಕೇಳುತ್ತಾರೆ. ಹಾಗಾಗಿ ಇಂತಹ ಒಂದು ಪುಸ್ತಕ ಬೇಕಾಗಿತ್ತು. ಈ ಪುಸ್ತಕ ಸಂಗ್ರಹ ಯೋಗ್ಯವಾಗಿದೆ‘” ಎಂದು ಜಸ್ಟೀಸ್ ದಾಸ್‌ ಅವರ ಕಾರ್ಯವನ್ನು ಶ್ಲಾಘಿಸಿದರು.

“ಮೀಸಲಾತಿ ಕುರಿತಾದ ಈ ಪುಸ್ತಕ ಚಿಕ್ಕದಾಗಿ, ಚೊಕ್ಕವಾಗಿದೆ. 136 ಪುಟಗಳ ಈ ಪುಸ್ತಕದಲ್ಲಿ ಸಾಕಷ್ಟು ಮಾಹಿತಿ ಇದೆ. ನಾಗಮೋಹನ್ ದಾಸ್ ಅವರ ‘ಸಂವಿಧಾನ ಓದು’ ಕಿರು ಹೊತ್ತಿಗೆಯನ್ನು ಕೂಡ ನಾನು ಓದಿದ್ದೇನೆ. ನನ್ನ ಪ್ರಕಾರ ಈ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಸಂವಿಧಾನ ಓದಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ವಿಚಾರಣೆ ಇಲ್ಲದೆ ಬಂಧನವಾಗುತ್ತಿದೆ: ಜಸ್ಟೀಸ್‌ ನಾಗಮೋಹನ ದಾಸ್‌

ಜಸ್ಟೀಸ್ ನಾಗಮೋಹನ ದಾಸ್ ಅವರು ಮಾತನಾಡಿ, “ಮುಕ್ತವಾದ ಚರ್ಚೆಗಳು ಇಲ್ಲದ ಕಡೆ ಪ್ರಗತಿ ಸಾಧ್ಯವಿಲ್ಲ. ನಮ್ಮ ಕಾಲದ ಸಮಸ್ಯೆಗಳು ಮತ್ತು ಅದಕ್ಕಿರುವ ಪರಿಹಾರ ಎನು ಎಂಬ ಬಗ್ಗೆ ನಾವು ಯೋಚಿಸಬೇಕು. ಇಂದು ದೇಶದಲ್ಲಿ ವಿಮರ್ಶೆ, ಟೀಕೆ ಮಾಡುವಂತಿಲ್ಲ. ಟೀಕೆ, ವಿಮರ್ಶೆ ಮಾಡಿದರೆ ವಿಚಾರಣೆ ಇಲ್ಲದೆಯೇ ಬಂಧಿಸಲಾಗುತ್ತಿದೆ. ಲೇಖಕಿ ತೀಸ್ತಾ ಸೆಟಲ್ವಾಡ್‌ ಬಂಧನವಾಗಿರುವುದೂ ಕೂಡ ಇದೇ ಕಾರಣದಿಂದ” ಎಂದು ವಿಷಾದಿಸಿದರು.

ನಾವು ಈ ಹಿಂದೆ ಮುದ್ರಣ ಮಾಡಿದ್ದ ಸಂವಿಧಾನ ಓದು ಪುಸ್ತಕ ವಿದ್ಯಾವಂತರಿಗೆ ತಲುಪುತ್ತಿದೆ. ಸಂವಿಧಾನ ಓದು ಜಾಥಾ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ನನಗೆ ಮೀಸಲಾತಿ ಯಾಕೆ ಬೇಕು ಎಂಬ ಪ್ರಶ್ನೆ ಕೇಳಿದ್ದಾರೆ. ಸಮಾನತೆಯನ್ನು ಬಯಸುವ ನಾವು ಕೆಲವೊಂದು ಜಾತಿಗೆ ಮಾತ್ರ ಯಾಕೆ ಮೀಸಲಾತಿ ನೀಡಬೇಕೆಂದು ಪ್ರಶ್ನಿಸಿದ್ದಾರೆ. ಮೀಸಲಾತಿ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಲು ನಾನು ಈ ಪುಸ್ತಕ ಬರೆದಿದ್ದೇವೆ ಎಂದರು.

“ಪ್ರಸ್ತುತ ದೇಶದಲ್ಲಿ ತೊಡುವ ಬಟ್ಟೆ ತಿನ್ನುವ ಆಹಾರದ ಬಗ್ಗೆ ವಿರೋಧ ಮಾಡಲಾಗುತ್ತಿದೆ. ಇದು ನನ್ನ ದೇಶವಲ್ಲ. ನನ್ನ ದೇಶದಲ್ಲಿ ಎಲ್ಲ ಧರ್ಮದ ಜನರು ಒಬ್ಬರನ್ನೊಬ್ಬರು ಗೌರವಿಸುತ್ತಾರೆ, ಪ್ರೀತಿಸುತ್ತಾರೆ” ಎಂದು ತಿಳಿಸಿದರು.

“ಸಂವಿಧಾನಾತ್ಮಕವಾಗಿ ಮೀಸಲಾತಿ ಪಡೆಯುತ್ತಿರುವವರೂ ಕೂಡ ಮೀಸಲಾತಿ ವಿರೋಧಿಸುತ್ತಾರೆ. ಈ ದೇಶದ ಎಲ್ಲ ಜಾತಿ ಧರ್ಮದ ಜನರಿಗೆ ಮೀಸಲಾತಿ ಸಿಗುತ್ತಿದೆ. ಒಂದು ವರ್ಗದ ಜನರು ಮೀಸಲಾತಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆ ಭ್ರಮೆಗಳನ್ನು ನಾವು ಒಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ತಲೆಬಾಗಿಲು ಬೇರೆಯವರಿಗೆ ಕೊಟ್ಟು ನಾವು ಬಾಗಿಲು ಕಾಯುತ್ತಿದ್ದೇವೆ: ಹಂಸಲೇಖ

ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ, “ನಮ್ಮಮನೆಯ ತಲೆಬಾಗಿಲನ್ನು ಬೇರೆಯವರಿಗೆ ಕೊಟ್ಟು ನಾವೀಗ ನಮ್ಮ ಮನೆಯ ಬಾಗಿಲು ಕಾಯುವ ಸ್ಥಿತಿ ಬಂದಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

“ಜಗತ್ತಿನಲ್ಲಿ ಪರಿವರ್ತನೆ ಆದಾಗ ಮಹಾಕಾವ್ಯ ಹುಟ್ಟುತ್ತದೆ. ದೇಶದ ಈಗಿನ ಸಂದರ್ಭಕ್ಕೆ ಇದು ಒಂದು ಮಹಾಕಾವ್ಯ. ನಾವು ಹಾಡಬೇಕಾಗಿರುವುದು ಹರಿಕಥೆ ಗಿರಿಕತೆ ಅಲ್ಲ. ಸಂವಿಧಾನ ಗೀತೆಯನ್ನು ಹಾಡಬೇಕು. ಆ ಕೆಲಸ ನಾವು ಮಾಡಲೇಬೇಕು” ಎಂದು ಎಚ್ಚರಿಸಿದರು.

“ಮೀಸಲಾತಿಗೆ ಶಾಶ್ವತ ಪರಿಹಾರ ಎಂದರೆ ಸುಸ್ಥಿತಿಯಲ್ಲಿರುವ ದಲಿತರು ತನ್ನ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅಂದರೆ, ತಿಂದ ಮೇಲೆ ಋಣ ತೀರಿಸಬೇಕು ಎಂದರ್ಥ. ಆಗ ಮಾತ್ರ ಅದು ಹಂಗಿಲ್ಲದ ಮೀಸಲಾತಿ ಆಗುತ್ತದೆ” ಎಂದು ಕಿವಿಮಾತು ಹೇಳಿದರು.

“12ನೇ ಶತಮಾನದಲ್ಲಿ ಈ ಪ್ರಯೋಗ ಆಗಿದೆ. ಶರಣರು ಬಸವಣ್ಣನವರನ್ನು ಮುಂದಿಟ್ಟುಕೊಂಡು ಮೀಸಲಾತಿಯನ್ನು ದಾಸೋಹವಾಗಿ ಪರಿವರ್ತನೆ ಮಾಡಿದ್ದರು. ನಂತರ ಅಕ್ಷರ ದಾಸೋಹ ಮಾಡಿದ್ದರು. ಆ ಅಕ್ಷರ ಮಂಟಪ ನಮಗೆ ಹಂಗಿಲ್ಲದ ಮೀಸಲಾತಿ ಹೇಳಿಕೊಟ್ಟಿದೆ. ಹಂಗಿಲ್ಲದ ಮೀಸಲಾತಿಯನ್ನು ಸಮಾಜಕ್ಕೆ ಕೊಡಬೇಕು” ಎಂದು ಆಶಿಸಿದರು.

ಮೀಸಲಾತಿ ಪುಸ್ತಕವನ್ನು ಇಂಗ್ಲಿಷ್ ಭಾಷೆಗೆ ಭಾಷಾಂತರ ಮಾಡಿದ ಪ್ರೊ.ಟಿ.ಆರ್.ಚಂದ್ರಶೇಖರ್, ಚಿಂತಕ ಬಂಜಗೆರೆ ಜಯಪ್ರಕಾಶ್, ಹಿರಿಯ ಪತ್ರಕರ್ತರಾದ ಬಿ.ಎಂ.ಹನೀಫ್, ಜನ ಪ್ರಕಾಶನದ ರಾಜಶೇಖರ ಮೂರ್ತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...