Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...