Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...