Homeಕರ್ನಾಟಕಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ವಿಶ್ವನಾಥ್‌ ಸಲಹೆ

ಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ವಿಶ್ವನಾಥ್‌ ಸಲಹೆ

“ಶಿಕ್ಷಣ ಇಲಾಖೆಯ ಗೊಂದಲಕ್ಕೆ ಕಂದಾಯ ಮಂತ್ರಿ ಉತ್ತರ ಕೊಡಬೇಕಾ?” ಎಂದು ವಿಶ್ವನಾಥ್‌ ಕೇಳಿದ್ದಾರೆ.

- Advertisement -
- Advertisement -

“ಡಾ.ಎಸ್‌.ಎಲ್‌.ಭೈರಪ್ಪ ಅವರು ದೊಡ್ಡ ಸಾಹಿತಿ. ಆದರೆ ಅವರು ಬಿಜೆಪಿ ವಕ್ತಾರರ ರೀತಿ ಮಾತನಾಡಬಾರದು” ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಿತ ಪಠ್ಯಪುಸ್ತಕಗಳ ಕುರಿತು ಭೈರಪ್ಪನವರು ಒಲವು ತೋರಿರುವುದಕ್ಕೆ ಪ್ರತಿಕ್ರಿಯೆ ನೀಡಿದರು.

“ಭೈರಪ್ಪ ದೊಡ್ಡ ಸಾಹಿತಿ. ಅವರು ಬಿಜೆಪಿ ವಕ್ತಾರರ ರೀತಿ ಮಾತನಾಡಬಾರದು. ಸಾರಸ್ವತ ಲೋಕದ ಸೌಂದರ್ಯ ಹೆಚ್ಚಿಸಬೇಕೇ ಹೊರತು, ಪಕ್ಷದ ವಕಾಲತ್ತು ವಹಿಸಬಾರದು. ಅವರ ಮಾತುಗಳಲ್ಲಿ ರಾಜಕೀಯ ದುರ್ನಾತ ಬರುತ್ತಿದೆ. ಇದು ಅವರಿಗೆ ಶೋಭೆ ತರುವಂಥದ್ದಲ್ಲ” ಎಂದು ಕಿವಿಮಾತು ಹೇಳಿದರು.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್‌.ಅಶೋಕ್‌ ಸುದ್ದಿಗೋಷ್ಠಿ ನಡೆಸಿರುವುದನ್ನು ಕಟುವಾಗಿ ಟೀಕಿಸಿರುವ ವಿಶ್ವನಾಥ್‌, “ಪಠ್ಯ ಪರಿಷ್ಕರಣೆ ‍ಪ್ರಕ್ರಿಯೆ ಯಾವುದೋ ಪಕ್ಷದ ಕಾರ್ಯಕ್ರಮವಲ್ಲ. ಸದ್ಯ ಶಿಕ್ಷಣ ಇಲಾಖೆ ಅಧೋಗತಿಗೆ ಹೋಗುತ್ತಿದೆ. ಶಿಕ್ಷಣ ಇಲಾಖೆಯ ಗೊಂದಲಕ್ಕೆ ಕಂದಾಯ ಮಂತ್ರಿ ಉತ್ತರ ಕೊಡಬೇಕಾ? ನಗರಾಭಿವೃದ್ಧಿ ಸಚಿವರು ಉತ್ತರಿಸುತ್ತಾರೆ ಎಂದರೆ ಏನರ್ಥ? ಶಿಕ್ಷಣ ಸಚಿವ ನಾಗೇಶ್ ಏನು ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

“ಪಠ್ಯಕ್ರಮದ ವಿಷಯದಲ್ಲಿ ಮತ್ತು ಅಕ್ಷರದ ಮೇಲೆ ಸರ್ಕಾರ ಹಠ ಮಾಡಬಾರದು; ಪ್ರತಿಷ್ಠೆಯಾಗಿ ಸ್ವೀಕರಿಸಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ವಿಷಯದಲ್ಲಿ ಹಠ ಮಾಡಲಿ, ಶಿಕ್ಷಣ ರಂಗವನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿ” ಎಂದಿದ್ದಾರೆ.

“ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸುವ ಪಠ್ಯಕ್ರಮವನ್ನು ಇಡೀ ನಾಡು ಒಕ್ಕೊರಲಿಂದ ವಿರೋಧಿಸಿದೆ. ಆದ್ದರಿಂದ, ಆ ಪಠ್ಯವನ್ನು ವಾಪಸ್ ಪಡೆದು ಪ್ರಸಕ್ತ ಸಾಲಿನಲ್ಲಿ ಹಳೆಯದ್ದನ್ನೇ ಬೋಧಿಸಬೇಕು. ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸಾಹಿತಿಗಳು, ಪೋಷಕರು, ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ, ವಿಸ್ತೃತವಾಗಿ ಚರ್ಚಿಸಿ ಪಠ್ಯಪುಸ್ತಕ ಪರಿಷ್ಕರಿಸಬೇಕು. ಮುಂದಿನ ಶೈಕ್ಷಣಿಕ ಸಾಲಿನಿಂದ ಎಲ್ಲವನ್ನೂ ಸರಿಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ಪಠ್ಯಪುಸ್ತಕ ವಿವಾದದ ಆರಂಭದಿಂದಲೂ ಎ.ಎಚ್.ವಿಶ್ವನಾಥ್‌ ಸರ್ಕಾರದ ನಡೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ಇವರ ಜೊತೆ ಅನೇಕ ಬಿಜೆಪಿ ನಾಯಕರೂ ದನಿಗೂಡಿಸಿದ್ದಾರೆ.

ವಿವಾದದ ಆರಂಭದಲ್ಲೇ ಪ್ರತಿಕ್ರಿಯೆ ನೀಡಿದ್ದ ಅಡಗೂರು ಎಚ್‌.ವಿಶ್ವನಾಥ್‌, “ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ” ಎಂದಿದ್ದರು.

“ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...