Homeಕರ್ನಾಟಕಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ವಿಶ್ವನಾಥ್‌ ಸಲಹೆ

ಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ವಿಶ್ವನಾಥ್‌ ಸಲಹೆ

“ಶಿಕ್ಷಣ ಇಲಾಖೆಯ ಗೊಂದಲಕ್ಕೆ ಕಂದಾಯ ಮಂತ್ರಿ ಉತ್ತರ ಕೊಡಬೇಕಾ?” ಎಂದು ವಿಶ್ವನಾಥ್‌ ಕೇಳಿದ್ದಾರೆ.

- Advertisement -
- Advertisement -

“ಡಾ.ಎಸ್‌.ಎಲ್‌.ಭೈರಪ್ಪ ಅವರು ದೊಡ್ಡ ಸಾಹಿತಿ. ಆದರೆ ಅವರು ಬಿಜೆಪಿ ವಕ್ತಾರರ ರೀತಿ ಮಾತನಾಡಬಾರದು” ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಿತ ಪಠ್ಯಪುಸ್ತಕಗಳ ಕುರಿತು ಭೈರಪ್ಪನವರು ಒಲವು ತೋರಿರುವುದಕ್ಕೆ ಪ್ರತಿಕ್ರಿಯೆ ನೀಡಿದರು.

“ಭೈರಪ್ಪ ದೊಡ್ಡ ಸಾಹಿತಿ. ಅವರು ಬಿಜೆಪಿ ವಕ್ತಾರರ ರೀತಿ ಮಾತನಾಡಬಾರದು. ಸಾರಸ್ವತ ಲೋಕದ ಸೌಂದರ್ಯ ಹೆಚ್ಚಿಸಬೇಕೇ ಹೊರತು, ಪಕ್ಷದ ವಕಾಲತ್ತು ವಹಿಸಬಾರದು. ಅವರ ಮಾತುಗಳಲ್ಲಿ ರಾಜಕೀಯ ದುರ್ನಾತ ಬರುತ್ತಿದೆ. ಇದು ಅವರಿಗೆ ಶೋಭೆ ತರುವಂಥದ್ದಲ್ಲ” ಎಂದು ಕಿವಿಮಾತು ಹೇಳಿದರು.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್‌.ಅಶೋಕ್‌ ಸುದ್ದಿಗೋಷ್ಠಿ ನಡೆಸಿರುವುದನ್ನು ಕಟುವಾಗಿ ಟೀಕಿಸಿರುವ ವಿಶ್ವನಾಥ್‌, “ಪಠ್ಯ ಪರಿಷ್ಕರಣೆ ‍ಪ್ರಕ್ರಿಯೆ ಯಾವುದೋ ಪಕ್ಷದ ಕಾರ್ಯಕ್ರಮವಲ್ಲ. ಸದ್ಯ ಶಿಕ್ಷಣ ಇಲಾಖೆ ಅಧೋಗತಿಗೆ ಹೋಗುತ್ತಿದೆ. ಶಿಕ್ಷಣ ಇಲಾಖೆಯ ಗೊಂದಲಕ್ಕೆ ಕಂದಾಯ ಮಂತ್ರಿ ಉತ್ತರ ಕೊಡಬೇಕಾ? ನಗರಾಭಿವೃದ್ಧಿ ಸಚಿವರು ಉತ್ತರಿಸುತ್ತಾರೆ ಎಂದರೆ ಏನರ್ಥ? ಶಿಕ್ಷಣ ಸಚಿವ ನಾಗೇಶ್ ಏನು ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

“ಪಠ್ಯಕ್ರಮದ ವಿಷಯದಲ್ಲಿ ಮತ್ತು ಅಕ್ಷರದ ಮೇಲೆ ಸರ್ಕಾರ ಹಠ ಮಾಡಬಾರದು; ಪ್ರತಿಷ್ಠೆಯಾಗಿ ಸ್ವೀಕರಿಸಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ವಿಷಯದಲ್ಲಿ ಹಠ ಮಾಡಲಿ, ಶಿಕ್ಷಣ ರಂಗವನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿ” ಎಂದಿದ್ದಾರೆ.

“ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸುವ ಪಠ್ಯಕ್ರಮವನ್ನು ಇಡೀ ನಾಡು ಒಕ್ಕೊರಲಿಂದ ವಿರೋಧಿಸಿದೆ. ಆದ್ದರಿಂದ, ಆ ಪಠ್ಯವನ್ನು ವಾಪಸ್ ಪಡೆದು ಪ್ರಸಕ್ತ ಸಾಲಿನಲ್ಲಿ ಹಳೆಯದ್ದನ್ನೇ ಬೋಧಿಸಬೇಕು. ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸಾಹಿತಿಗಳು, ಪೋಷಕರು, ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ, ವಿಸ್ತೃತವಾಗಿ ಚರ್ಚಿಸಿ ಪಠ್ಯಪುಸ್ತಕ ಪರಿಷ್ಕರಿಸಬೇಕು. ಮುಂದಿನ ಶೈಕ್ಷಣಿಕ ಸಾಲಿನಿಂದ ಎಲ್ಲವನ್ನೂ ಸರಿಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ಪಠ್ಯಪುಸ್ತಕ ವಿವಾದದ ಆರಂಭದಿಂದಲೂ ಎ.ಎಚ್.ವಿಶ್ವನಾಥ್‌ ಸರ್ಕಾರದ ನಡೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ಇವರ ಜೊತೆ ಅನೇಕ ಬಿಜೆಪಿ ನಾಯಕರೂ ದನಿಗೂಡಿಸಿದ್ದಾರೆ.

ವಿವಾದದ ಆರಂಭದಲ್ಲೇ ಪ್ರತಿಕ್ರಿಯೆ ನೀಡಿದ್ದ ಅಡಗೂರು ಎಚ್‌.ವಿಶ್ವನಾಥ್‌, “ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ” ಎಂದಿದ್ದರು.

“ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...