Homeಕರ್ನಾಟಕಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆಗೆ ನೇಮಿಸಿದ್ದ ಸಮಿತಿಯು ಯಾವುದೇ ಅಧಿಕೃತ ಆದೇಶವಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ, ಪಠ್ಯಪುಸ್ತಕದಲ್ಲಿ ಕಂಡು ಬಂದಿರುವ ಸಾಲು ಸಾಲು ದೋಷಗಳ ಪೈಕಿ ಎಂಟನ್ನು ಮಾತ್ರ ತಿದ್ದಲು ಮುಂದಾಗಿದೆ.

ಪ್ರಾಥಮಿಕ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದು, ಪಠ್ಯದಲ್ಲಿನ ಎಂಟು ತಪ್ಪುಗಳನ್ನು ಉಲ್ಲೇಖಿಸಿ ತಿದ್ದುಪಡಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ತಿದ್ದುಪಡಿಯಲ್ಲಿ ಏನೇನು ಸೇರಿಸಲಾಗುತ್ತಿದೆ?

1) 9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ‘ನಮ್ಮ ಸಂವಿಧಾನ’ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖವಿರುತ್ತದೆ. ಪರಿಷ್ಕೃತ ಪಠ್ಯದಲ್ಲಿ, “ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ವಾಕ್ಯವು ಇಲ್ಲವಾಗಿದ್ದು, “ಸಂವಿಧಾನದ ಶಿಲ್ಪಿ” ಎಂಬುದರ ಪುನರ್ ಸೇರ್ಪಡೆ.

2) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2 ರಲ್ಲಿ ಭಕ್ತಿಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ, 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ‘ಭಕ್ತಿ ಪಂಥ ಹಾಗೂ ಸೂಫಿಸಂತರು’ ಸಂಪೂರ್ಣ ಪಾಠ ಸೇರ್ಪಡೆ.

3) 7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147ರಲ್ಲಿ ‘ಗೊಂಬೆ ಕಲಿಸುವ ನೀತಿ’ ಪದ್ಯದ ಕೃತಿಕಾರರ ಹೆಸರು ಡಾ.ಆರ್.ಎನ್‌.ಜಯಗೋಪಾಲ್ ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ ಚಿ.ಉದಯಶಂಕರ್ ರವರ ಕವಿ ಪರಿಚಯ ಸೇರ್ಪಡೆ.

4) 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಸೇರ್ಪಡೆ.

5) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಮೈಸೂರು ಮತ್ತು ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳು ಸೇರ್ಪಡೆ.

6) 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಪಠ್ಯಪುಸ್ತಕದಲ್ಲಿ ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ ಸೇರ್ಪಡೆ.

7) 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ ‘ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು’ ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ರವರ ಹಾಗೂ ಹುಯಿಲಗೋಳ ನಾರಾಯಣರಾವ್ ರವರ ಭಾವಚಿತ್ರಗಳನ್ನು ಅಳವಡಿಸುವುದು.

8) 4ನೇ ತರಗತಿಯ ಪರಿಸರ ಅಧ್ಯಯನ ‘ಪ್ರತಿಯೊಬ್ಬರು ವಿಶಿಷ್ಟ’ ಎಂಬ ಪಾಠದಲ್ಲಿ “ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ರವರಿಗೆ ಚಿಕ್ಕಂದಿನಿಂದಲೂ ಕಥೆ, ಕವನ, ಪುಸ್ತಕ ಓದುವ, ಬರೆಯುವ ಅಭ್ಯಾಸ ಇತ್ತು” ಎಂಬ ವಾಕ್ಯದ ನಂತರ “ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು” ಎಂಬ ಸಾಲನ್ನು ಕೈಬಿಡುವುದು.

(ಮುಂದಿನ ಅಂಶಗಳು ಪಠ್ಯ ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ನಡಾವಳಿಗಳನ್ನು ಸೂಚಿಸುತ್ತವೆ.)

9) ಸಾಮಾನ್ಯವಾಗಿ ಪಠ್ಯಪುಸ್ತಕಗಳ ರಚನೆ, ಪರಿಷ್ಕರಣೆಗಳಾದಾಗ ಅಗತ್ಯವಾದ ತಿದ್ದುಪಡಿಗಳನ್ನು ತಿದ್ದೋಲೆ ರೂಪದಲ್ಲಿ ನೀಡುವುದು ಶಿಕ್ಷಣ ಇಲಾಖೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ.

10) ಅಗತ್ಯವಿರುವ ತಿದ್ದೋಲೆ ಪ್ರತಿಗಳನ್ನು ಮುದ್ರಿಸಲು ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಈಗಾಗಲೇ ಪಠ್ಯಪುಸ್ತಕಗಳ ಮುದ್ರಣಕ್ಕೆ ಕಾರ್ಯಾದೇಶ ಪಡೆದಿರುವ ಎಲ್-೧ ದರ ನಮೂದಿಸಿರುವ ಮುದ್ರಕರಿಂದ ಮುದ್ರಿಸಿ, ಕರ್ನಾಟಕ ಪಠ್ಯಪುಸ್ತಕ ಸಂಘದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸಿ, ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಹಾಗೂ ಅನುದಾನರಹಿತ ಶಾಲೆಗಳಿಗೆ ಉಚಿತವಾಗಿ ತಲಾ ಒಂದು ಪ್ರತಿಯಂತೆ ವಿತರಿಸುವುದು.

11)ತಿದ್ದೋಲೆಯ ವಿಷಯಾಂಶಗಳನ್ನು ಕರ್ನಾಟಕ ಪಠ್ಯಪುಸ್ತಕ ಸಂಘದ ಜಾಲತಾಣದಲ್ಲಿ ಪ್ರಕಟಿಸುವುದು ಮತ್ತು ಮೂಲ ಪಠ್ಯಪುಸ್ತಕಗಳ ಸಾಫ್ಟ್ ಪ್ರತಿಯಲ್ಲಿ ಅಳವಡಿಸುವುದು.

‘ಪಠ್ಯಪುಸ್ತಕ ವಾಪಸ್ ಪಡೆಯುವುದೇ ಸರಿಯಾದ ಕ್ರಮ’

ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪುಗಳ ಸಂಬಂಧ 62 ಪುಟಗಳ ಸಂಶೋಧನಾ ವರದಿ ಸಿದ್ಧಪಡಿಸಿರುವ ಸಂಶೋಧಕ, ಸಾಮಾಜಿಕ ಕಾರ್ಯರ್ತ ಹರ್ಷಕುಮಾರ್‌ ಕುಗ್ವೆಯವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಂಪೂರ್ಣ ಪಠ್ಯಪುಸ್ತಕವನ್ನು ವಾಪಸ್‌ ಪಡೆದು ಹಳೆಯ ಪಠ್ಯಪುಸ್ತಕಗಳನ್ನೇ ಮಕ್ಕಳಿಗೆ ನೀಡುವುದು ಸರಿಯಾದ ಕ್ರಮ” ಎಂದು ಪ್ರತಿಪಾದಿಸಿದರು.

“ಇಷ್ಟು ದಿನ ಶಿಕ್ಷಣ ಸಚಿವರು ತಾವು ಮಾಡಿದ್ದೆಲ್ಲ ಸರಿ ಇದೆ ಎಂದು ಮಾತನಾಡುತ್ತಿದ್ದರು. ಆದರೆ ತಪ್ಪುಗಳಿರುವುದನ್ನು ಸರ್ಕಾರ ತನ್ನ ಆದೇಶದಲ್ಲಿ ಅಧಿಕೃತವಾಗಿ ಒಪ್ಪಿಕೊಂಡಿದೆ. ದುರಾದೃಷ್ಟವಶಾತ್‌ ಸರ್ಕಾರ ಕೇವಲ ಎಂಟು ಅಂಶಗಳನ್ನು ಮಾತ್ರ ಪ್ರಸ್ತಾಪಿಸಿ ನಿಜವಾದ ಸಮಸ್ಯೆಯನ್ನು ಮರೆಮಾಚಿದೆ. ಕರ್ನಾಟಕದ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವಿದು. ನೂರಾರು ಗಂಭೀರ ಲೋಪಗಳನ್ನು ಗುರುತಿಸಿ ವರದಿ ಸಿದ್ಧಪಡಿಸಿದ್ದೇವೆ. ಪ್ರತಿ ಪಠ್ಯಪುಸ್ತಕದಲ್ಲೂ ಈ ತಪ್ಪುಗಳನ್ನು ಕಾಣಬಹುದು. ಅದ್ಯಾವುದರ ಬಗ್ಗೆಯೂ ಮಾತನಾಡದೆ ಕೇವಲ ಒಂದೆರಡು ತಪ್ಪುಗಳನ್ನು ಪ್ರಸ್ತಾಪಿಸಿ ಜನರನ್ನು ಯಾಮಾರಿಸಲಾಗುತ್ತಿದೆ. ತಮ್ಮ ಅಜೆಂಡಾವನ್ನೇ ಮುಂದುವರಿಸಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪರಿಷ್ಕರಣೆಗೆ ಸರ್ಕಾರ ಆದೇಶ ಮಾಡಿರಲಿಲ್ಲ ಎಂಬುದು ಇಂದಿನ ಆದೇಶದಲ್ಲಿ ಸ್ಪಷ್ಟವಾಗಿದೆ. ಇದು ಪರಿಶೀಲನೆಗೆ ನೇಮಿಸಿದ್ದ ಸಮಿತಿಯಾಗಿತ್ತೇ ಹೊರತು ಪರಿಷ್ಕರಣೆಗಲ್ಲ ಎಂಬುದನ್ನು ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ. ಸರ್ಕಾರದ ಆದೇಶವಿಲ್ಲದೆ ಪರಿಷ್ಕರಣೆ ಮಾಡಿರುವುದು ಅಸಿಂಧುವಾಗುತ್ತದೆ. ಸಂಪೂರ್ಣವಾಗಿ ಪರಿಷ್ಕರಣೆಯನ್ನು ಕೈಬಿಟ್ಟು, ಈ ನಷ್ಟಕ್ಕೆ ಕಾರಣವಾದವರಿಂದಲೇ ಹಣ ವಸೂಲಿ ಮಾಡಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಪ್ರತಿಕ್ರಿಯೆ ನೀಡಿ, “ಸರ್ಕಾರದ ನಿರ್ಧಾರವನ್ನು ಒಪ್ಪಲು ಸಾಧ್ಯವೇ ಇಲ್ಲ. ಅಲ್ಲಿ ಇಲ್ಲಿ ಒಂಚೂರು ಬದಲಾಯಿಸುವ ಕೆಲಸ ಇದಲ್ಲ. ಇಡೀ ಪ್ರಕ್ರಿಯೆಯೇ ಅಸಾಂವಿಧಾನಿಕ, ಅಪ್ರಜಾಸತ್ತಾತ್ಮಕ ಆಗಿರುವುದರಿಂದ ಇಲ್ಲೊಂದು ಇಲ್ಲೊಂದು ವಾಕ್ಯ ಬದಲಿಸುತ್ತೇವೆ ಎನ್ನುವುದರಲ್ಲಿ ಅರ್ಥವೇ ಇಲ್ಲ. ಇಡೀ ಪ್ರಕ್ರಿಯೆಯನ್ನೇ ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಪಠ್ಯಪುಸ್ತಕ ಎಡವಟ್ಟಿಗೆ ಸಂಬಂಧಿಸಿದ ಕೆಲವು ವರದಿಗಳು (ಲಿಂಕ್ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...