Homeಅಂತರಾಷ್ಟ್ರೀಯ‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್...

‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್

ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು ಎಂದು ಅದು ಹೇಳಿದೆ

- Advertisement -
- Advertisement -

ದೇಶದ ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಬಂಧನ ಮತ್ತು ಸೆರೆವಾಸವನ್ನು ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್ (WGHR) ಖಂಡಿಸಿದ್ದು, ತನ್ನ ಸದಸ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅದು ಒತ್ತಾಯಿಸಿದೆ.

2002ರ ಗುಜರಾತ್ ಗಲಭೆಯಲ್ಲಿ ಹತರಾದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಗುಜರಾತ್ ಪೊಲೀಸರು ತೀಸ್ತಾ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ತೀಸ್ತಾ ಜೊತೆಗೆ ಎಫ್‌ಐಆರ್‌‌ನಲ್ಲಿ ಹೆಸರಿಸಲಾದ ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಮತ್ತು ಅಮಾನತುಗೊಂಡ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಿಡುಗಡೆ ಮಾಡುವಂತೆ ಸಂಘಟನೆಯು ಆಗ್ರಹಿಸಿದೆ.

ಇದನ್ನೂ ಓದಿ: ತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

ತೀಸ್ತಾ ಅವರು 2002ರ ಗುಜರಾತ್ ಗಲಭೆಗಳ ಸಂತ್ರಸ್ತರ ಪರವಾಗಿ ವಾದಿಸಲು ರಚಿಸಲಾದ ಸಂಸ್ಥೆಯಾದ ಸಿಟಿಜನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್ (CJP) ನ ಕಾರ್ಯದರ್ಶಿಯಾಗಿದ್ದಾರೆ.

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’ ಎಂದು ಸಂಸ್ಥೆ ತನ್ನ ಹೇಳಿಕೆಯಲ್ಲಿ ಹೇಳಿದ್ದು, ಕಾನೂನುಬದ್ಧ ಮಾನವ ಹಕ್ಕುಗಳ ಕೆಲಸವನ್ನು ನಡೆಸುವ ರಕ್ಷಕರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ವಿರುದ್ಧ ಪ್ರತೀಕಾರವು ಸಾಂವಿಧಾನಿಕ ಪ್ರಜಾಪ್ರಭುತ್ವಕ್ಕೆ ಸಂಪೂರ್ಣವಾಗಿ ‘ಸ್ವೀಕಾರಾರ್ಹವಲ್ಲ ಮತ್ತು ಹೊಂದಾಣಿಕೆಯಾಗುವುದಿಲ್ಲ’ ಎಂದು ಅದು ಹೇಳಿದೆ.

ತೀಸ್ತಾ ಅವರು ಭಾರತದಲ್ಲಿ ಕೋಮುಗಲಭೆಯ ಸಂತ್ರಸ್ತರ ನ್ಯಾಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ ಎಂದು ಹೇಳಿರುವ WGHR, “ಅವರು ಅತ್ಯಂತ ದುರ್ಬಲರ ಹಕ್ಕುಗಳ ಧೈರ್ಯಶಾಲಿ ಚಾಂಪಿಯನ್‌ ಎಂದು ಪ್ರಸಿದ್ಧರಾಗಿದ್ದಾರೆ ಮತ್ತು ಗೌರವಿಸಲ್ಪಡುತ್ತಿದ್ದಾರೆ’’ ಎಂದು ಹೇಳಿದೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ 

“ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸೇರಿದಂತೆ ದಾಳಿಯ ಸಂತ್ರಸ್ತ್ರರ ಜೊತೆ ನಿಂತಿದ್ದಕ್ಕಾಗಿ ಮತ್ತು ಅಧಿಕಾರದ ಸ್ಥಾನದಲ್ಲಿರುವವರು ಸೇರಿದಂತೆ ಎಲ್ಲರಿಂದಲೂ ಉತ್ತರದಾಯಿತ್ವವನ್ನು ಕೋರಿದ್ದಕ್ಕಾಗಿ ತೀಸ್ತಾ ಅವರ ಬಂಧನ ನಡೆದಿದ್ದು ಪ್ರತೀಕಾರಕ್ಕೆ ಸಮಾನವಾಗಿದೆ ಎಂದು WGHR ದೃಢವಾಗಿ ನಂಬುತ್ತದೆ” ಎಂದು ಸಂಸ್ಥೆ ಹೇಳಿದೆ.

“ಭಾರತೀಯ ಸಂವಿಧಾನದ ಅಡಿಯಲ್ಲಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಗಂಭೀರ ಉಲ್ಲಂಘನೆ ನಡೆದಿದ್ದು, ಆಡಳಿತ ಯಂತ್ರದಿಂದ ಅಧಿಕಾರ ಮತ್ತು ಕಾನೂನಿನ ಆಕ್ರಮಣಕಾರಿ ದುರುಪಯೋಗವನ್ನು ಪ್ರತಿಬಿಂಬಿಸುತ್ತಿರುವ ಕಾರಣ ತೀಸ್ತಾ ಅವರ ಬಂಧನದಿಂದ ನಾವು ತೀವ್ರವಾಗಿ ಕಳವಳಗೊಂಡಿದ್ದೇವೆ” ಹೇಳಿಕೆ ತಿಳಿಸಿದೆ.

ಅವರ ಬಂಧನಕ್ಕೆ ಕಾರಣವಾಗುವ ಘಟನೆಗಳ ತಿರುವು ದೇಶೀಯವಾಗಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಮಾನವ ಹಕ್ಕುಗಳ ರಕ್ಷಕರಿಗೆ (HRDs) ಭಾರತ ಸರ್ಕಾರದ ಬದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ತೀಸ್ತಾ – ಧರ್ಮಗ್ಲಾನಿಯಾದಾಗ ದಿಢೀರನೇ ಎತ್ತಿದ ಅವತಾರ ಅಲ್ಲ

WGHR ಅನ್ನು ಜನವರಿ 2009 ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸ್ವತಂತ್ರ ತಜ್ಞರ ಗುಂಪು ಸ್ಥಾಪಿಸಿತ್ತು. WGHR ದೇಶದಲ್ಲಿನ ಎಲ್ಲಾ ನಾಗರಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಮಾನವ ಹಕ್ಕುಗಳ ಸಾಕ್ಷಾತ್ಕಾರಕ್ಕೆ ಮತ್ತು ಅದರ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಬಾಧ್ಯತೆಗಳಿಗೆ ಭಾರತ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಕೆಲಸ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್ ರಿಗೆ, ಅವರ ಒಡೆತನದ ಪತ್ರಿಕೆಗಳಿಗೆ ದೇಶದಲ್ಲಿನ ಬುದ್ದಿ ಜೀವಿಗಳ ಹೇಳಿಕೆಗಳು ಕಾಣೋದಿಲ್ಲಾ ,ಆದರೆ ಪರದೇಶಿಗಳ ಕಪಿಗಳ ವಾಖ್ಯೆಗಳು ಇವರಿಗೆ ದೈವ ವಾಣಿಯಂತೆ ಕೇಳುತ್ತೇ ,ನಿಮ್ಮ ಮೆದುಳಿಗೆ ಸ್ವಂತಿಕೆ ,ಸ್ವದೇಶಿ ಬುದ್ದಿ ಸಹ ಇಲ್ಲವೇ ,ಕಮ್ಯೂನಿಸ್ಟ್ ರಿಗೆ ಬ್ರಿಟಿಶ್ ರ ಗುಲಾಮಗಿರಿ ಇನ್ನೂ ಬಿಟ್ಟಲ್ಲಾ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...