Homeಅಂತರಾಷ್ಟ್ರೀಯ‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್...

‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್

ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು ಎಂದು ಅದು ಹೇಳಿದೆ

- Advertisement -
- Advertisement -

ದೇಶದ ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಬಂಧನ ಮತ್ತು ಸೆರೆವಾಸವನ್ನು ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್ (WGHR) ಖಂಡಿಸಿದ್ದು, ತನ್ನ ಸದಸ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅದು ಒತ್ತಾಯಿಸಿದೆ.

2002ರ ಗುಜರಾತ್ ಗಲಭೆಯಲ್ಲಿ ಹತರಾದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಗುಜರಾತ್ ಪೊಲೀಸರು ತೀಸ್ತಾ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ತೀಸ್ತಾ ಜೊತೆಗೆ ಎಫ್‌ಐಆರ್‌‌ನಲ್ಲಿ ಹೆಸರಿಸಲಾದ ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಮತ್ತು ಅಮಾನತುಗೊಂಡ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಿಡುಗಡೆ ಮಾಡುವಂತೆ ಸಂಘಟನೆಯು ಆಗ್ರಹಿಸಿದೆ.

ಇದನ್ನೂ ಓದಿ: ತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

ತೀಸ್ತಾ ಅವರು 2002ರ ಗುಜರಾತ್ ಗಲಭೆಗಳ ಸಂತ್ರಸ್ತರ ಪರವಾಗಿ ವಾದಿಸಲು ರಚಿಸಲಾದ ಸಂಸ್ಥೆಯಾದ ಸಿಟಿಜನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್ (CJP) ನ ಕಾರ್ಯದರ್ಶಿಯಾಗಿದ್ದಾರೆ.

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’ ಎಂದು ಸಂಸ್ಥೆ ತನ್ನ ಹೇಳಿಕೆಯಲ್ಲಿ ಹೇಳಿದ್ದು, ಕಾನೂನುಬದ್ಧ ಮಾನವ ಹಕ್ಕುಗಳ ಕೆಲಸವನ್ನು ನಡೆಸುವ ರಕ್ಷಕರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ವಿರುದ್ಧ ಪ್ರತೀಕಾರವು ಸಾಂವಿಧಾನಿಕ ಪ್ರಜಾಪ್ರಭುತ್ವಕ್ಕೆ ಸಂಪೂರ್ಣವಾಗಿ ‘ಸ್ವೀಕಾರಾರ್ಹವಲ್ಲ ಮತ್ತು ಹೊಂದಾಣಿಕೆಯಾಗುವುದಿಲ್ಲ’ ಎಂದು ಅದು ಹೇಳಿದೆ.

ತೀಸ್ತಾ ಅವರು ಭಾರತದಲ್ಲಿ ಕೋಮುಗಲಭೆಯ ಸಂತ್ರಸ್ತರ ನ್ಯಾಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ ಎಂದು ಹೇಳಿರುವ WGHR, “ಅವರು ಅತ್ಯಂತ ದುರ್ಬಲರ ಹಕ್ಕುಗಳ ಧೈರ್ಯಶಾಲಿ ಚಾಂಪಿಯನ್‌ ಎಂದು ಪ್ರಸಿದ್ಧರಾಗಿದ್ದಾರೆ ಮತ್ತು ಗೌರವಿಸಲ್ಪಡುತ್ತಿದ್ದಾರೆ’’ ಎಂದು ಹೇಳಿದೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ 

“ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸೇರಿದಂತೆ ದಾಳಿಯ ಸಂತ್ರಸ್ತ್ರರ ಜೊತೆ ನಿಂತಿದ್ದಕ್ಕಾಗಿ ಮತ್ತು ಅಧಿಕಾರದ ಸ್ಥಾನದಲ್ಲಿರುವವರು ಸೇರಿದಂತೆ ಎಲ್ಲರಿಂದಲೂ ಉತ್ತರದಾಯಿತ್ವವನ್ನು ಕೋರಿದ್ದಕ್ಕಾಗಿ ತೀಸ್ತಾ ಅವರ ಬಂಧನ ನಡೆದಿದ್ದು ಪ್ರತೀಕಾರಕ್ಕೆ ಸಮಾನವಾಗಿದೆ ಎಂದು WGHR ದೃಢವಾಗಿ ನಂಬುತ್ತದೆ” ಎಂದು ಸಂಸ್ಥೆ ಹೇಳಿದೆ.

“ಭಾರತೀಯ ಸಂವಿಧಾನದ ಅಡಿಯಲ್ಲಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಗಂಭೀರ ಉಲ್ಲಂಘನೆ ನಡೆದಿದ್ದು, ಆಡಳಿತ ಯಂತ್ರದಿಂದ ಅಧಿಕಾರ ಮತ್ತು ಕಾನೂನಿನ ಆಕ್ರಮಣಕಾರಿ ದುರುಪಯೋಗವನ್ನು ಪ್ರತಿಬಿಂಬಿಸುತ್ತಿರುವ ಕಾರಣ ತೀಸ್ತಾ ಅವರ ಬಂಧನದಿಂದ ನಾವು ತೀವ್ರವಾಗಿ ಕಳವಳಗೊಂಡಿದ್ದೇವೆ” ಹೇಳಿಕೆ ತಿಳಿಸಿದೆ.

ಅವರ ಬಂಧನಕ್ಕೆ ಕಾರಣವಾಗುವ ಘಟನೆಗಳ ತಿರುವು ದೇಶೀಯವಾಗಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಮಾನವ ಹಕ್ಕುಗಳ ರಕ್ಷಕರಿಗೆ (HRDs) ಭಾರತ ಸರ್ಕಾರದ ಬದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ತೀಸ್ತಾ – ಧರ್ಮಗ್ಲಾನಿಯಾದಾಗ ದಿಢೀರನೇ ಎತ್ತಿದ ಅವತಾರ ಅಲ್ಲ

WGHR ಅನ್ನು ಜನವರಿ 2009 ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸ್ವತಂತ್ರ ತಜ್ಞರ ಗುಂಪು ಸ್ಥಾಪಿಸಿತ್ತು. WGHR ದೇಶದಲ್ಲಿನ ಎಲ್ಲಾ ನಾಗರಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಮಾನವ ಹಕ್ಕುಗಳ ಸಾಕ್ಷಾತ್ಕಾರಕ್ಕೆ ಮತ್ತು ಅದರ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಬಾಧ್ಯತೆಗಳಿಗೆ ಭಾರತ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಕೆಲಸ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್ ರಿಗೆ, ಅವರ ಒಡೆತನದ ಪತ್ರಿಕೆಗಳಿಗೆ ದೇಶದಲ್ಲಿನ ಬುದ್ದಿ ಜೀವಿಗಳ ಹೇಳಿಕೆಗಳು ಕಾಣೋದಿಲ್ಲಾ ,ಆದರೆ ಪರದೇಶಿಗಳ ಕಪಿಗಳ ವಾಖ್ಯೆಗಳು ಇವರಿಗೆ ದೈವ ವಾಣಿಯಂತೆ ಕೇಳುತ್ತೇ ,ನಿಮ್ಮ ಮೆದುಳಿಗೆ ಸ್ವಂತಿಕೆ ,ಸ್ವದೇಶಿ ಬುದ್ದಿ ಸಹ ಇಲ್ಲವೇ ,ಕಮ್ಯೂನಿಸ್ಟ್ ರಿಗೆ ಬ್ರಿಟಿಶ್ ರ ಗುಲಾಮಗಿರಿ ಇನ್ನೂ ಬಿಟ್ಟಲ್ಲಾ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...