Homeಮುಖಪುಟಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿದ್ದ ದೆಹಲಿ ಪೊಲೀಸರು ದೆಹಲಿಯ ಬುರಾರಿಯಲ್ಲಿರುವ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಜುಬೇರ್‌ರನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೆ ನೀಡಿದೆ.

ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡುವ ಆರೋಪದ ಮೇಲೆ ಜುಬೇರ್ ಮೇಲೆ ಪ್ರಕರಣ ದಾಖಲಾಗಿದೆ. 2020ರ ಪ್ರಕರಣದ ವಿಚಾರಣೆಗೆಂದು ಅವರನ್ನು ದೆಹಲಿ ಪೊಲೀಸರು ಕರೆಸಿದ್ದರು. ಆ ಪ್ರಕರಣದಲ್ಲಿ ಜುಬೇರ್ ಬಂಧನದಿಂದ ರಕ್ಷಣೆ ಪಡೆದಿದ್ದರು. ಆನಂತರ ಪೊಲೀಸರು 2018ರ ಟ್ವೀಟ್‌ ಆಧರಿಸಿ ಬಂಧಿಸಿದ್ದೇವೆ ಎಂದಿದ್ದಾರೆ. ಆ ಟ್ವೀಟ್ ಯಾವುದಿರಬೇಕೆಂದು ಚರ್ಚೆ ನಡೆಯುತ್ತಿದೆ.

2018ರ ಮಾರ್ಚ್ 24 ರಂದು ಮೊಹಮ್ಮದ್ ಜುಬೇರ್ ಮತೀಯ ಗೂಂಡಾಗಿರಿಗಳನ್ನು, ನೈತಿಕ ಪೊಲೀಸ್‌ಗಿರಿಯನ್ನು ಖಂಡಿಸಿ ವ್ಯಂಗ್ಯವಾಗಿ ಪೋಸ್ಟ್ ಒಂದನ್ನು ಮಾಡಿದ್ದರು. 2014ಕ್ಕೆ ಮುಂಚೆ ಹನಿಮೂನ್ ಹೋಟೆಲ್ ಇದ್ದಿದ್ದು, 2014ರ ನಂತರ ಹನುಮಾನ್ ಹೋಟೆಲ್ ಆಗಿ ಬದಲಾಗಲಿದೆ. ಸಂಸ್ಕಾರಿ ಹೋಟೆಲ್ ಎಂದು ಬರೆದಿದ್ದರು. ಪ್ರೇಮಿಗಳ ದಿನಕ್ಕೆ ತಡೆಯೊಡ್ಡುತ್ತಿದ್ದ ಬಲಪಂಥೀಯ ಕಾರ್ಯಕರ್ತರ ಧೋರಣೆ ಖಂಡಿಸಿ ವ್ಯಂಗ್ಯವಾಗಿ ಮಾಡಿದ್ದ ಪೋಸ್ಟ್ ಅದಾಗಿತ್ತು.

ಅದಕ್ಕೆ ಹನುಮಾನ್ ಭಕ್ತ್ ಎಂಬ ಬಾಲಾಜಿಕಿಜೈನ್ ಎಂಬ ಯೂಸರ್ ಐಡಿ ಹೊಂದಿರುವ ಫೇಕ್ ಅಕೌಂಟ್‌ನಿಂದ ಕಮೆಂಟ್ ಮಾಡಿ ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿತ್ತು. ನಮ್ಮ ದೇವರಾದ ಹನುಮಾನ್‌ಜಿಯವರನ್ನು ಹನಿಮೂನ್‌ಗೆ ಹೋಲಿಸಿ ನೇರವಾಗಿ ಹಿಂದೂಗಳಿಗೆ ಅವಮಾನ ಮಾಡಲಾಗಿದೆ. ಏಕೆಂದರೆ ಹನುಮಾನ್ ಬ್ರಹ್ಮಚಾರಿಯಾಗಿದ್ದರು. ಈ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳಿ ಎಂದು ಈ ತಿಂಗಳ 19ನೇ ತಾರೀಕಿನಂದು ಕಮೆಂಟ್ ಮಾಡಲಾಗಿತ್ತು. ವಾಸ್ತವದಲ್ಲಿ ಆ ಖಾತೆಯು 2021ರ ಅಕ್ಟೋಬರ್‌ನಲ್ಲಿ ರಚನೆಯಾಗಿದೆ ಎಂದು ತಿಳಿದುಬಂದಿದೆ.

ಆ ಖಾತೆ ಆ ರೀತಿ ಕಮೆಂಟ್ ಮಾಡಿದಾಗ ಅದಕ್ಕೆ ಕೇವಲ ಒಬ್ಬರು ಮಾತ್ರ ಫಾಲೋವರ್ ಇದ್ದರು. ಮೂರೇ ಮೂರು ಟ್ವೀಟ್ ಗಳನ್ನು ಮಾಡಲಾಗಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಜುಬೇರ್‌ರನ್ನು ಬಂಧಿಸಿದ್ದಾರೆ. ಆ ನಂತರ ಆ ಹನುಮಾನ್ ಭಕ್ತ್ ಖಾತೆಯನ್ನು ನೂರಾರು ಜನರು ಫಾಲೋ ಮಾಡುತ್ತಿದ್ದಾರೆ. ಅಲ್ಲದೆ ಆ ಮುಖವಿಲ್ಲದೆ ಖಾತೆಯೇ ನನ್ನನ್ನು ಫಾಲೋ ಮಾಡಿ ಎಂದು ಟ್ವೀಟ್ ಮಾಡುತ್ತಿದೆ.

ಈ ದೂರು ನೀಡಿದ ಖಾತೆಯ ಕುರಿತು ಹಲವಾರು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಅನಾಮಧೇಯ ಖಾತೆಯಿಂದ ಬಂದ ದೂರನ್ನು ದೆಹಲಿ ಪೊಲೀಸರು ಹೇಗೆ ಪರಿಗಣಿಸುತ್ತಾರೆ? ಆದರೆ ಜೆಎನ್‌ಯುನಲ್ಲಿ ಹಿಂಸಾಚಾರವೆಬ್ಬಿಸಿದ ಕೋಮಲ್ ಶರ್ಮಾ ವಿರುದ್ಧ ಸ್ಪಷ್ಟ ವಿಡಿಯೋ ಸಾಕ್ಷಿ ಇದ್ದರೂ ಸಹ ಏಕೆ ಬಂಧಿಸಿಲ್ಲ ಎಂದು ಯೂಟ್ಯೂಬರ್ ಧ್ರುವ್‌ರಾಠೀ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...