Homeಅಂತರಾಷ್ಟ್ರೀಯಅಮೆರಿಕಾ: ಟ್ರ್ಯಾಕ್ಟರ್ ಟ್ರೇಲರ್‌ನಲ್ಲಿ 46 ಅಕ್ರಮ ವಲಸಿಗರ ಮೃತದೇಹ ಪತ್ತೆ, 16 ಮಂದಿ ಗಂಭೀರ

ಅಮೆರಿಕಾ: ಟ್ರ್ಯಾಕ್ಟರ್ ಟ್ರೇಲರ್‌ನಲ್ಲಿ 46 ಅಕ್ರಮ ವಲಸಿಗರ ಮೃತದೇಹ ಪತ್ತೆ, 16 ಮಂದಿ ಗಂಭೀರ

- Advertisement -
- Advertisement -

ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ ಸೋಮವಾರ ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರೇಲರ್‌ನಲ್ಲಿ 46 ವಲಸಿಗರ ಮೃತದೇಹಗಳು ಪತ್ತೆಯಾಗಿವೆ. 16 ಜನರು ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಎಸ್-ಮೆಕ್ಸಿಕೊ ಗಡಿಯಲ್ಲಿ ಮಾನವ ಕಳ್ಳಸಾಗಣೆ ಹೆಚ್ಚಾಗಿ ನಡೆಯುತ್ತಿದೆ ಎನ್ನಲಾಗಿದೆ. ಪೊಲೀಸರು ಟ್ರಕ್‌ ಕಂಡು ಹಿಡಿಯುವ ಸ್ವಲ್ಪ ಸಮಯದಲ್ಲಿ ಚಾಲಕ ಅಲ್ಲಿಂದ ಪರಾರಿಯಾಗಿರಬಹುದು ಎಂದು, ಚಾಲಕನ ಹುಡುಕಾಟವನ್ನು ನಡೆಸಲಾಗುತ್ತಿದೆ.

ಟ್ರೈಲರ್‌ನಲ್ಲಿಮೃತದೇಹಗಳ ಜೊತೆಗೆ ಪತ್ತೆಯಾದದ ಇತರ ಹದಿನಾರು ಜನರು ವಿಪರೀತ ಉಷ್ಣಾಂಶ ಮತ್ತು ಬಳಲಿಕೆಯಿಂದ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಇದರಲ್ಲಿ ನಾಲ್ಕು ಮಂದಿ ಅಪ್ರಾಪ್ತ ವಯಸ್ಕರು ಇದ್ದಾರೆ. ಮೃತರಲ್ಲಿ ಅಪ್ರಾಪ್ತರಿಲ್ಲ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ಮೆಕ್ಸಿಕನ್ ಗಡಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ ಸ್ಯಾನ್ ಆಂಟೋನಿಯೊದಲ್ಲಿನ ಜೂನ್ ತಿಂಗಳಲ್ಲಿ ಹೆಚ್ಚಿನ ಉಷ್ಣ ವಾತಾವರಣವಿರುತ್ತದೆ. ಸೋಮವಾರ 39.4 ಡಿಗ್ರಿ ಸೆಲ್ಸಿಯಸ್‌ ಉಷ್ಣ ವಾತಾವರಣವಿತ್ತು ಎಂದು ವರದಿಯಾಗಿದೆ.

ಆದರೂ 46 ಮಂದಿಯ ಸಾವಿಗೆ ಸ್ಪಷ್ಟ ಕಾರಣವಿನ್ನು ಸಿಕ್ಕಿಲ್ಲ. ಈ ರೀತಿ ಅಕ್ರಮ ವಲಸಿಗರು ಮೃತಪಟ್ಟಿರುವುದು ಅತಿದೊಡ್ಡ ಘಟನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಹದ್ದೆ ಪ್ರಕರಣಗಳಲ್ಲಿ ಈವರೆಗೆ ಮೂರು ಮಂದಿ ಬಂಧನದಲ್ಲಿದ್ದಾರೆ. ಆದರೆ, ಅವರಿಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇನ್ವೆಸ್ಟಿಗೇಷನ್ಸ್ ವಿಭಾಗವು ಸ್ಥಳೀಯ ಪೋಲೀಸ್‌ನೊಂದಿಗೆ ಸಮನ್ವಯ ಸಾಧಿಸಿ “ಅಕ್ರಮ ಮಾನವ ಕಳ್ಳಸಾಗಣೆ ಘಟನೆ” ಯನ್ನು ತನಿಖೆ ನಡೆಸುತ್ತಿದೆ ಎಂದು ಯುಎಸ್‌ ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ವಕ್ತಾರರು ತಿಳಿಸಿದ್ದಾರೆ.

ಜುಲೈ 2017 ರಲ್ಲಿ, 10 ವಲಸಿಗರು ಟ್ರ್ಯಾಕ್ಟರ್-ಟ್ರೇಲರ್‌ನಲ್ಲಿ ಸಾಗಿಸುತ್ತಿದ್ದಾಗ ಸಾವನ್ನಪ್ಪಿದರು, ಇದನ್ನು ಸ್ಯಾನ್ ಆಂಟೋನಿಯೊ ಪೊಲೀಸರು ಪಾರ್ಕಿಂಗ್ ಸ್ಥಳದಲ್ಲಿ ಪತ್ತೆ ಮಾಡಿದ್ದರು. ಪ್ರಕರಣದಲ್ಲಿ ಟ್ರಕ್ ಚಾಲಕನಿಗೆ ಮಾನವ ಕಳ್ಳಸಾಗಣೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ನೀಡಲಾಗಿತ್ತು.


ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...