Homeಕರ್ನಾಟಕವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

“ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪಠ್ಯ ಪರಿಷ್ಕರಣೆಯೇ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳೂ ಅಕ್ರಮವೆಂದಲ್ಲವೇ!?”

- Advertisement -
- Advertisement -

“ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದ್ದಾರೆ.

ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರವು ತಿದ್ದೋಲೆಯನ್ನು ಹೊರಡಿಸಲು ಅನುಮತಿ ನೀಡಿ ಹೊರಡಿಸಿರುವ ಸರಕಾರೀ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ತಿದ್ದೋಲೆ ಹೊರಡಿಸಲು ಅನುಮತಿಸಿರುವ ಆದೇಶವು, ವಿಷವುಣಿಸಿದ ವ್ಯಕ್ತಿ ಸಾಯುವ ಮುನ್ನ ನೀರು ಕೊಡಲು ಕರುಣಿಸಿದಂತಿದೆ. ಈ ಮೂಲಕ ವಿಷವುಣಿಸಿದ ಘೋರ ಅಪರಾಧವನ್ನು ಮುಚ್ಚಿ ಹಾಕಿ, ಅಪರಾಧವೇ ನಡೆದಿಲ್ಲವೇನೋ ಎಂಬಂತೆ ಬಿಂಬಿಸಲು ಹೊರಟಿರುವುದು, ಇಡೀ ಪ್ರಕ್ರಿಯೆಯ ಹಿಂದಿರುವ ಕುತಂತ್ರ ಹಾಗೂ ಹುನ್ನಾರಗಳನ್ನು ಬೆತ್ತಲೆಗೊಳಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೊಸ ಪಠ್ಯಪುಸ್ತಕಗಳು ಯಾವುದೇ ಸಹಜ ನ್ಯಾಯದ ತತ್ವಗಳನ್ನು (Principles of Natural Justice) ಅನುಸರಿಸದೆ ಅಸಾಂವಿಧಾನಿಕವಾಗಿವೆ. ನಿಯಮಾನುಸಾರ ಒಪ್ಪಿತ ಪಠ್ಯಕ್ರಮ ಚೌಕಟ್ಟಿನಲ್ಲಿ ನಡೆಯದ ಅಪ್ರಬುದ್ಧ, ಅಪಾರದರ್ಶಕ ಹಾಗೂ ಅಪ್ರಜಾಸತ್ತ್ಮಕ ನಿಯಮ ಬಾಹಿರ ಪ್ರಕ್ರಿಯೆಯನ್ನು ತಿದ್ದೋಲೆ ಹೊರಡಿಸುವ ಮೂಲಕ ಮತ್ತೊಮ್ಮೆ ಸಮರ್ಥಿಸಿಕೊಳ್ಳುವ ಜನವಿರೋಧಿ ನಡೆ ತೋರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಮಕ್ಕಳ ಕಲಿಕೆಯನ್ನು ಮತ್ತಷ್ಟು ಗೊಂದಲಗೊಳಿಸುವುದಲ್ಲದೆ, ಕಳೆದ ಹಲವಾರು ದಶಕಗಳಿಂದ ಶಾಲಾ ಶಿಕ್ಷಣದ ಸಾರ್ವತ್ರೀಕರಣಕ್ಕೆ ಅಣಿಗೊಳಿಸಿದ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡುವ ಮೂಲಕ ದಮನಿತ ಮತ್ತು ಅವಕಾಶ ವಂಚಿತ ಸಮುದಾಯಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತದೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣ ಹಕ್ಕಲ್ಲ, ಅದು ಕೆಲವರ ಸವಲತ್ತು ( Education is a privilege not a Right) ಎಂದು ವಾದಿಸುತ್ತಾ ಸಾವಿರಾರು ವರ್ಷಗಳಿಂದ ಬಹುಸಂಖ್ಯಾತ ದಮನಿತರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗಿಡುವ ಮೂಲಕ ನಡೆದಿದ್ದ ಅಕ್ಷರ ವಂಚನೆ ಸಂಸ್ಕೃತಿಯನ್ನು ಮುಂದುವರಿಸಲು, ಜನರನ್ನು ದಿಕ್ಕುತಪ್ಪಿಸಲು ಈ ಆದೇಶ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಕಲಿಸುವ ಬದಲು, ತಿದ್ದೋಲೆ ಆದೇಶದ ಅನ್ವಯ ಪುಸ್ತಕಗಳಲ್ಲಿರುವ ದೋಷಗಳನ್ನು ತಿದ್ದುವ ಕೆಲಸದಲ್ಲಿಯೇ ಈ ಶೈಕ್ಷಣಿಕ ವರ್ಷ ಮುಗಿದು ಹೋಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಕ್ಕಳಿಗೆ ವಿಷಪ್ರಾಶನ ಮಾಡುವ ಈ ಕೆಲಸದಲ್ಲಿ ಸರಕಾರವನ್ನು ಬಾಹ್ಯವಾಗಿ ನಿಯಂತ್ರಿಸುತ್ತಿರುವ, ಸಂವಿಧಾನಕ್ಕೂ ಮೀರಿದ ಶಕ್ತಿಗಳು ಸರಕಾರಿ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಈಗ ಸರ್ಕಾರದ ಮೂಲಕವೇ ತಿದ್ದೋಲೆ ಕೊಡಿಸಲು ಹೊರಟಿರುವುದು ಸಂವಿಧಾನವನ್ನು ಅಣಕಿಸುವಂತಿದೆ ಎಂದು ಟೀಕಿಸಿದ್ದಾರೆ.

ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪರಿಷ್ಕರಣೆಯ ಮೂಲ ಚಿಂತನೆಯೇ ದುರುದ್ದೇಶಪೂರಿತ ಹಾಗೂ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳು ಅಕ್ರಮವೆಂದಲ್ಲವೇ! ತಿದ್ದೋಲೆ ಮೂಲಕ ಪದ, ವಾಕ್ಯ, ಪ್ಯಾರಾ, ಪೋಟೋಗಳನ್ನು ಸರಿಪಡಿಸಿದರೆ ಅದು ಸಕ್ರಮವಾಗುವುದೇ? ಎಂದು ಪ್ರಶ್ನಿಸಿದ್ದಾರೆ.

ತಿದ್ದೋಲೆ ಆದೇಶವನ್ನು ಹೊರಡಿಸುವುದೆಂದರೆ ಸರ್ಕಾರ ಪಠ್ಯ ಪರಿಷ್ಕರಣೆ ಪ್ರಕ್ರಿಯಲ್ಲಿಯಾಗಿರುವ ಲೋಪಗಳನ್ನು ಅಧಿಕೃತವಾಗಿ ಒಪ್ಪಿದೆ ಎಂದಾಯಿತು. ತಪ್ಪಾಗಿರುವುದನ್ನು ಸರಕಾರ ಒಪ್ಪಿದ ಮೇಲೆ, ತಿದ್ದೋಲೆ ಮೂಲಕ ತಿಪ್ಪೆ ಸಾರಿಸುವ ನ್ಯಾಯವನ್ನು ಕೈಬಿಟ್ಟು ಅಸಂವಿಧಾನಿಕ ಹಾಗೂ ಅಪ್ರಜಾಸತ್ತಾತ್ಮಕವಾದ ಈ ಪ್ರಕ್ರಿಯೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸಿ, ಅಲ್ಲಿರುವ ಸಾಧಕ ಬಾಧಕಗಳನ್ನು ಅಧ್ಯಯನ ಮಾಡಲು ಒಂದು ಸ್ವತಂತ್ರ ತಜ್ಞರ ಸಮಿತಿ ಅಥವಾ ಸದನ ಸಮಿತಿಯನ್ನುಯನ್ನು ರಚಿಸುವುದು ಸೂಕ್ತ ತೀರ್ಮಾನವಾಗುತ್ತದೆ. ಅಲ್ಲಿಯವರೆಗೆ ಸಹಜ ನ್ಯಾಯದ ತತ್ವದಂತೆ ಯಥಾಸ್ಥಿಯನ್ನು, ಅಂದರೆ 2021-22ರಲ್ಲಿದ್ದ ಪುಸ್ತಕಗಳನ್ನೇ ಮುಂದುವರಿಸಿ,ತಜ್ಞರ ಸಮಿತಿ/ ಸದನ ಸಮಿತಿಯ ವರದಿ ನಂತರ ಅಂತಿಮ ತೀರ್ಮಾನ ಕೈಗೊಳ್ಳುವುದು ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ತೀರ್ಮಾನವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಈಗಲಾದರೂ ಮುಖ್ಯಮಂತ್ರಿಯವರು, ತಮಗೇ ತಿಳಿಯದ ತೆರೆಮರೆಯ, ಈ ಎಲ್ಲಾ ಕುತಂತ್ರಗಳನ್ನು ಅರಿತು, ಸಂವಿಧಾನ ವಿರೋಧಿಗಳ ಕೈಗೊಂಬೆಯಾಗದೆ, ತಮ್ಮ ಸಂವಿಧಾನಬದ್ಧ ಅಧಿಕಾರವನ್ನು ಬಳಸಿ, ಇದಕ್ಕೆಲ್ಲ ಮೂಲ ಕಾರಣರಾದ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಆದೇಶರಹಿತ ಕಾನೂನು ಬಾಹಿರ ಪಠ್ಯ ಪರಿಷ್ಕರಣೆಯನ್ನು ಅಮಾನ್ಯಗೊಳಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದು ಪಕ್ಷಾತೀತವಾಗಿ ಶೈಕ್ಷಣಿಕ ವಲಯದಲ್ಲಿ ಕಳೆದ ಮೂರೂವರೆ ದಶಕಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ಮಾಡುತ್ತಿರುವ ನಾನು ವಿನಮ್ರವಾಗಿ ಕೇಳಿಕೊಳ್ಳುತ್ತೇನೆ ಎಂದು ಕೋರಿದ್ದಾರೆ.

“ಇದು ಪ್ರತಿಷ್ಠೆಯ ಪ್ರಶ್ನೆಯಲ್ಲ. ಬದಲಿಗೆ ಮೌಲಿಕ ನ್ಯಾಯದ ಮತ್ತು ಪ್ರಜಾಸತ್ತೆಯನ್ನು ಗೌರವಿಸಿ ಸಂವಿಧಾನವನ್ನು ಎತ್ತಿಹಿಡಿಯುವ ಪ್ರಶ್ನೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...