Homeಕರ್ನಾಟಕವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

“ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪಠ್ಯ ಪರಿಷ್ಕರಣೆಯೇ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳೂ ಅಕ್ರಮವೆಂದಲ್ಲವೇ!?”

- Advertisement -
- Advertisement -

“ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದ್ದಾರೆ.

ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರವು ತಿದ್ದೋಲೆಯನ್ನು ಹೊರಡಿಸಲು ಅನುಮತಿ ನೀಡಿ ಹೊರಡಿಸಿರುವ ಸರಕಾರೀ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ತಿದ್ದೋಲೆ ಹೊರಡಿಸಲು ಅನುಮತಿಸಿರುವ ಆದೇಶವು, ವಿಷವುಣಿಸಿದ ವ್ಯಕ್ತಿ ಸಾಯುವ ಮುನ್ನ ನೀರು ಕೊಡಲು ಕರುಣಿಸಿದಂತಿದೆ. ಈ ಮೂಲಕ ವಿಷವುಣಿಸಿದ ಘೋರ ಅಪರಾಧವನ್ನು ಮುಚ್ಚಿ ಹಾಕಿ, ಅಪರಾಧವೇ ನಡೆದಿಲ್ಲವೇನೋ ಎಂಬಂತೆ ಬಿಂಬಿಸಲು ಹೊರಟಿರುವುದು, ಇಡೀ ಪ್ರಕ್ರಿಯೆಯ ಹಿಂದಿರುವ ಕುತಂತ್ರ ಹಾಗೂ ಹುನ್ನಾರಗಳನ್ನು ಬೆತ್ತಲೆಗೊಳಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೊಸ ಪಠ್ಯಪುಸ್ತಕಗಳು ಯಾವುದೇ ಸಹಜ ನ್ಯಾಯದ ತತ್ವಗಳನ್ನು (Principles of Natural Justice) ಅನುಸರಿಸದೆ ಅಸಾಂವಿಧಾನಿಕವಾಗಿವೆ. ನಿಯಮಾನುಸಾರ ಒಪ್ಪಿತ ಪಠ್ಯಕ್ರಮ ಚೌಕಟ್ಟಿನಲ್ಲಿ ನಡೆಯದ ಅಪ್ರಬುದ್ಧ, ಅಪಾರದರ್ಶಕ ಹಾಗೂ ಅಪ್ರಜಾಸತ್ತ್ಮಕ ನಿಯಮ ಬಾಹಿರ ಪ್ರಕ್ರಿಯೆಯನ್ನು ತಿದ್ದೋಲೆ ಹೊರಡಿಸುವ ಮೂಲಕ ಮತ್ತೊಮ್ಮೆ ಸಮರ್ಥಿಸಿಕೊಳ್ಳುವ ಜನವಿರೋಧಿ ನಡೆ ತೋರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಮಕ್ಕಳ ಕಲಿಕೆಯನ್ನು ಮತ್ತಷ್ಟು ಗೊಂದಲಗೊಳಿಸುವುದಲ್ಲದೆ, ಕಳೆದ ಹಲವಾರು ದಶಕಗಳಿಂದ ಶಾಲಾ ಶಿಕ್ಷಣದ ಸಾರ್ವತ್ರೀಕರಣಕ್ಕೆ ಅಣಿಗೊಳಿಸಿದ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡುವ ಮೂಲಕ ದಮನಿತ ಮತ್ತು ಅವಕಾಶ ವಂಚಿತ ಸಮುದಾಯಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತದೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣ ಹಕ್ಕಲ್ಲ, ಅದು ಕೆಲವರ ಸವಲತ್ತು ( Education is a privilege not a Right) ಎಂದು ವಾದಿಸುತ್ತಾ ಸಾವಿರಾರು ವರ್ಷಗಳಿಂದ ಬಹುಸಂಖ್ಯಾತ ದಮನಿತರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗಿಡುವ ಮೂಲಕ ನಡೆದಿದ್ದ ಅಕ್ಷರ ವಂಚನೆ ಸಂಸ್ಕೃತಿಯನ್ನು ಮುಂದುವರಿಸಲು, ಜನರನ್ನು ದಿಕ್ಕುತಪ್ಪಿಸಲು ಈ ಆದೇಶ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಕಲಿಸುವ ಬದಲು, ತಿದ್ದೋಲೆ ಆದೇಶದ ಅನ್ವಯ ಪುಸ್ತಕಗಳಲ್ಲಿರುವ ದೋಷಗಳನ್ನು ತಿದ್ದುವ ಕೆಲಸದಲ್ಲಿಯೇ ಈ ಶೈಕ್ಷಣಿಕ ವರ್ಷ ಮುಗಿದು ಹೋಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಕ್ಕಳಿಗೆ ವಿಷಪ್ರಾಶನ ಮಾಡುವ ಈ ಕೆಲಸದಲ್ಲಿ ಸರಕಾರವನ್ನು ಬಾಹ್ಯವಾಗಿ ನಿಯಂತ್ರಿಸುತ್ತಿರುವ, ಸಂವಿಧಾನಕ್ಕೂ ಮೀರಿದ ಶಕ್ತಿಗಳು ಸರಕಾರಿ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಈಗ ಸರ್ಕಾರದ ಮೂಲಕವೇ ತಿದ್ದೋಲೆ ಕೊಡಿಸಲು ಹೊರಟಿರುವುದು ಸಂವಿಧಾನವನ್ನು ಅಣಕಿಸುವಂತಿದೆ ಎಂದು ಟೀಕಿಸಿದ್ದಾರೆ.

ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪರಿಷ್ಕರಣೆಯ ಮೂಲ ಚಿಂತನೆಯೇ ದುರುದ್ದೇಶಪೂರಿತ ಹಾಗೂ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳು ಅಕ್ರಮವೆಂದಲ್ಲವೇ! ತಿದ್ದೋಲೆ ಮೂಲಕ ಪದ, ವಾಕ್ಯ, ಪ್ಯಾರಾ, ಪೋಟೋಗಳನ್ನು ಸರಿಪಡಿಸಿದರೆ ಅದು ಸಕ್ರಮವಾಗುವುದೇ? ಎಂದು ಪ್ರಶ್ನಿಸಿದ್ದಾರೆ.

ತಿದ್ದೋಲೆ ಆದೇಶವನ್ನು ಹೊರಡಿಸುವುದೆಂದರೆ ಸರ್ಕಾರ ಪಠ್ಯ ಪರಿಷ್ಕರಣೆ ಪ್ರಕ್ರಿಯಲ್ಲಿಯಾಗಿರುವ ಲೋಪಗಳನ್ನು ಅಧಿಕೃತವಾಗಿ ಒಪ್ಪಿದೆ ಎಂದಾಯಿತು. ತಪ್ಪಾಗಿರುವುದನ್ನು ಸರಕಾರ ಒಪ್ಪಿದ ಮೇಲೆ, ತಿದ್ದೋಲೆ ಮೂಲಕ ತಿಪ್ಪೆ ಸಾರಿಸುವ ನ್ಯಾಯವನ್ನು ಕೈಬಿಟ್ಟು ಅಸಂವಿಧಾನಿಕ ಹಾಗೂ ಅಪ್ರಜಾಸತ್ತಾತ್ಮಕವಾದ ಈ ಪ್ರಕ್ರಿಯೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸಿ, ಅಲ್ಲಿರುವ ಸಾಧಕ ಬಾಧಕಗಳನ್ನು ಅಧ್ಯಯನ ಮಾಡಲು ಒಂದು ಸ್ವತಂತ್ರ ತಜ್ಞರ ಸಮಿತಿ ಅಥವಾ ಸದನ ಸಮಿತಿಯನ್ನುಯನ್ನು ರಚಿಸುವುದು ಸೂಕ್ತ ತೀರ್ಮಾನವಾಗುತ್ತದೆ. ಅಲ್ಲಿಯವರೆಗೆ ಸಹಜ ನ್ಯಾಯದ ತತ್ವದಂತೆ ಯಥಾಸ್ಥಿಯನ್ನು, ಅಂದರೆ 2021-22ರಲ್ಲಿದ್ದ ಪುಸ್ತಕಗಳನ್ನೇ ಮುಂದುವರಿಸಿ,ತಜ್ಞರ ಸಮಿತಿ/ ಸದನ ಸಮಿತಿಯ ವರದಿ ನಂತರ ಅಂತಿಮ ತೀರ್ಮಾನ ಕೈಗೊಳ್ಳುವುದು ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ತೀರ್ಮಾನವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಈಗಲಾದರೂ ಮುಖ್ಯಮಂತ್ರಿಯವರು, ತಮಗೇ ತಿಳಿಯದ ತೆರೆಮರೆಯ, ಈ ಎಲ್ಲಾ ಕುತಂತ್ರಗಳನ್ನು ಅರಿತು, ಸಂವಿಧಾನ ವಿರೋಧಿಗಳ ಕೈಗೊಂಬೆಯಾಗದೆ, ತಮ್ಮ ಸಂವಿಧಾನಬದ್ಧ ಅಧಿಕಾರವನ್ನು ಬಳಸಿ, ಇದಕ್ಕೆಲ್ಲ ಮೂಲ ಕಾರಣರಾದ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಆದೇಶರಹಿತ ಕಾನೂನು ಬಾಹಿರ ಪಠ್ಯ ಪರಿಷ್ಕರಣೆಯನ್ನು ಅಮಾನ್ಯಗೊಳಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದು ಪಕ್ಷಾತೀತವಾಗಿ ಶೈಕ್ಷಣಿಕ ವಲಯದಲ್ಲಿ ಕಳೆದ ಮೂರೂವರೆ ದಶಕಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ಮಾಡುತ್ತಿರುವ ನಾನು ವಿನಮ್ರವಾಗಿ ಕೇಳಿಕೊಳ್ಳುತ್ತೇನೆ ಎಂದು ಕೋರಿದ್ದಾರೆ.

“ಇದು ಪ್ರತಿಷ್ಠೆಯ ಪ್ರಶ್ನೆಯಲ್ಲ. ಬದಲಿಗೆ ಮೌಲಿಕ ನ್ಯಾಯದ ಮತ್ತು ಪ್ರಜಾಸತ್ತೆಯನ್ನು ಗೌರವಿಸಿ ಸಂವಿಧಾನವನ್ನು ಎತ್ತಿಹಿಡಿಯುವ ಪ್ರಶ್ನೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...