Homeಮುಖಪುಟಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

ಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

- Advertisement -
- Advertisement -

ಅಗ್ನಿಪಥ ಯೋಜನೆ ಘೋಷಣೆಯಾದಾಗಿನಿಂದ ಬಿಜೆಪಿ ಸರ್ಕಾರದ ವಿರುದ್ಧವೇ ಪ್ರಶ್ನೆ ಮಾಡುತ್ತಿರುವ ಬಿಜೆಪಿ ಲೋಕಸಭೆಯ ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ “ಅವರು ಪ್ರತಿದಿನವೂ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳವಾರ ತಮ್ಮ ಪಕ್ಷದ ಸಹೋದ್ಯೋಗಿ, ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಅಗ್ನಿಪಥ್ ಬಗ್ಗೆ ಅವರು ನೀಡುವ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.

ಬಿಜೆಪಿಯ ಹಲವು ಕಾನೂನುಗಳು ಮತ್ತು ಯೋಚನೆಗಳನ್ನು ಸಂಸದ ವರುಣ್‌ ಗಾಂಧಿ ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ವಿವಾದಿತ ಕೃಷಿ ಕಾನೂನುಗಳು, ಲಖೀಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ ಮಾತನಾಡಿದ್ದರು. ಈಗ ಅಗ್ನಿವೀರರಿಗೆ ನಾಲ್ಕು ವರ್ಷಗಳ ನಂತರ ಪಿಂಚಣಿ ನೀಡದ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ: ’ಅಗ್ನಿಪಥ್’ ಯೋಜನೆ; ’ಎಕ್ಸೆಕ್ಯುಟಿವ್’ ಆಡಳಿತ ಎಂಬುದು ಸರ್ವಾಧಿಕಾರದ ’ಪ್ರಾಕ್ಸಿ’

ಕೇಂದ್ರದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಯಲ್ಲಿ ಆಯ್ಕೆಯಾದವರಿಗೆ ನಾಲ್ಕು ವರ್ಷಗಳ ಅಧಿಕಾರಾವಧಿ ಮುಗಿದ ನಂತರ ಪಿಂಚಣಿ ನೀಡುವುದಿಲ್ಲ ಎಂದಾದರೆ ಚುನಾಯಿತ ಪ್ರತಿನಿಧಿಗಳಿಗೆ ನಿವೃತ್ತಿಯ ನಂತರ ನೀಡಲಾಗುವ ಸವಲತ್ತುಗಳು ಏಕೆ ಬೇಕು ಎಂದು ವರುಣ್ ಗಾಂಧಿ ಕಳೆದ ವಾರ ಪ್ರಶ್ನಿಸಿದ್ದರು.

ವರುಣ್ ಗಾಂಧಿಯವರ ಹೇಳಿಕೆಗಳ ಬಗೆಗಿನ ಪ್ರಶ್ನೆಗೆ ಉತ್ತರಿಸಿರುವ ತೋಮರ್, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಏಕೆಂದರೆ ಅವರು ಪ್ರತಿದಿನ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ಹೇಳಿದ್ದಾರೆ.

 

“ಅಲ್ಪಾವಧಿ ಸೇವೆ ಸಲ್ಲಿಸಿದ ಅಗ್ನಿವೀರ್ ಅವರಿಗೆ ಪಿಂಚಣಿಗೆ ಅರ್ಹರಲ್ಲ, ಹೀಗಿರುವಾಗ ಜನಪ್ರತಿನಿಧಿಗಳಿಗೆ ಏಕೆ ಈ ‘ಅನುಕೂಲಗಳು’? ರಾಷ್ಟ್ರ ರಕ್ಷಕರಿಗೆ ಪಿಂಚಣಿ ಹಕ್ಕು ಇಲ್ಲದಿದ್ದರೆ, ನಾನು ನನ್ನ ಸ್ವಂತ ಪಿಂಚಣಿಯನ್ನು ತ್ಯಜಿಸಲು ಸಿದ್ಧನಿದ್ದೇನೆ. ನಾವು ಶಾಸಕರು/ಸಂಸದರು ನಮ್ಮ ಪಿಂಚಣಿಯನ್ನು ಬಿಟ್ಟು ಅಗ್ನಿವೀರರಿಗೆ ಪಿಂಚಣಿ ಸಿಗುವಂತೆ ಮಾಡಲು ಸಾಧ್ಯವಿಲ್ಲವೇ..?” ಎಂದು ಪ್ರಶ್ನಿಸಿದ್ದರು.

ಜೂನ್ 14 ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಕೇಂದ್ರ ಸರ್ಕಾರದ ನೂತನ ’ಅಗ್ನಿಪಥ್’ ಎಂಬ ರಕ್ಷಣಾ ನೇಮಕಾತಿಯ ಯೋಜನೆ ಘೋಷಿಸಿದ್ದಾರೆ. ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗೆ ನಾಲ್ಕು ವರ್ಷಗಳ ಅಲ್ಪ ಅವಧಿಗೆ ಈ ವರ್ಷ ’ಅಗ್ನಿವೀರ್’ ಹೆಸರಿನ ಯೋಜನೆಯಡಿ 46,000 ಯುವ ಸೈನಿಕರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. 17.5ರಿಂದ 21 ವರ್ಷದವರೆಗಿನ ಬುದ್ಧಿವಂತ, ತಂತ್ರಜ್ಞಾನ ತಿಳಿವಳಿಕೆಯುಳ್ಳ ಯುವಜನರು ಸೇನೆಗೆ ಸೇರ್ಪಡೆಯಾಗುವ ಮೂಲಕ ಭಾರತೀಯ ಸೇನೆಗೆ ತಾರುಣ್ಯ ತಂದುಕೊಡಲಿದ್ದಾರೆ ಎಂದಿದ್ದಾರೆ.

ಸದ್ಯದ ಭಾರತೀಯ ಸೈನಿಕರ ಸರಾಸರಿ ವಯಸ್ಸು 32 ವರ್ಷ ಇದ್ದು, ಅದನ್ನು 24-26 ವರ್ಷಕ್ಕೆ ಇಳಿಸುವ ಮತ್ತು ಪಿಂಚಣಿ-ಗ್ರಾಚ್ಯುಟಿ, ಸಂಬಳ ಸೇರಿದಂತೆ ಇತರ ಭತ್ಯೆಗಳನ್ನು ಕಡಿತಗೊಳಿಸುವುದು ಈ ಯೋಜನೆಯ ಗುರಿ ಎಂದು ಸರ್ಕಾರ ಹೇಳಿಕೊಂಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...