Homeರಾಷ್ಟ್ರೀಯ‘ಒಂದೇ ವ್ಯತ್ಯಾಸ... ನನ್ನ ಧರ್ಮ, ನನ್ನ ಹೆಸರು’ - ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

‘ಒಂದೇ ವ್ಯತ್ಯಾಸ… ನನ್ನ ಧರ್ಮ, ನನ್ನ ಹೆಸರು’ – ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

- Advertisement -
- Advertisement -

ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ತನ್ನನ್ನು ಬಂಧಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌‌ ಅವರು ನ್ಯಾಯಾಲಯಕ್ಕೆ ಮಂಗಳವಾರ ತಿಳಿಸಿದ್ದಾರೆ.

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018 ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ ಖ್ಯಾತ ವಕೀಲೆ ವೃಂದಾ ಗ್ರೋವರ್‌‌, “ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಮುಸ್ಲಿಂ ಮತ್ತು ಪತ್ರಕರ್ತ ಎಂದು ಉಲ್ಲೇಖಿಸಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಿಸಿ ಸೆ ನಾ ಕೆಹನಾ’: ಮೊಹಮ್ಮದ್ ಜುಬೇರ್‌ ಬಂಧನಕ್ಕೆ ಕಾರಣವಾದ ಹಳೆಯ ಹಿಂದಿ ಸಿನಿಮಾ ದೃಶ್ಯ!

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ಈ ಚಿತ್ರವನ್ನು ಜುಬೇರ್ ಎಡಿಟ್‌ ಮಾಡಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ವಕೀಲರು ತಳ್ಳಿಹಾಕಿದ್ದು, ‘ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಅಥವಾ ದ್ವೇಷವನ್ನು ಉತ್ತೇಜಿಸುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಹೇಳಿದ್ದಾರೆ.

“ಅದು ಪೂಜಾ ಸ್ಥಳವಲ್ಲ, ಇದು ಹನಿಮೂನ್‌ ಮೇಲೆ ಮಾಡಲಾಗಿರುವ ತಮಾಷೆಯಾಗಿದೆ…ಇಡೀ ಪ್ರಕರಣವು ಅಸಂಬದ್ಧತೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

ಜುಬೇರ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ ಅವರು, “ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಟ್ವೀಟ್‌ನಿಂದಾಗಿ 2018ರಿಂದ 2022 ರ ನಡುವೆ ಏನಾದರೂ ನಡೆಯಿತೆ?… ನನ್ನ ಕಕ್ಷಿದಾರ ತಾನು ಮಾಡುವ ಕೆಲಸದಿಂದಾಗಿ ಗುರಿಯಾಗಿದ್ದಾರೆ. ಅವರು ಶಕ್ತಿಶಾಲಿ ಜನರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕಿರುಕುಳಕ್ಕೆ ಒಳಪಡಿಸಬಾರದು” ಎಂದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೇರ್‌ ‘ಜನಪ್ರಿಯತೆಗಾಗಿ ಫ್ಯಾಕ್ಟ್‌ಚೆಕ್’ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದು, ಅವರ ವಿರುದ್ಧ ದಾಖಲಾಗಿರುವ ಇತರ ಎಫ್‌ಐಆರ್‌ಗಳನ್ನು ಉಲ್ಲೇಖಿಸಿ ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದರೆ ನ್ಯಾಯಾಲಯವು ಅವರನ್ನು ಮತ್ತೇ ನಾಲ್ಕು ದಿನಗಳ ಕಾಲ ವಶಕ್ಕೆ ನೀಡಿದೆ.

“ಇದು ಅಪರಾಧದ ಮುಂದುವರಿಕೆಯಾಗಿದ್ದು, ಹನುಮಂತನನ್ನು ಪ್ರಾರ್ಥಿಸಿ, ಕೋತಿಗಳು ನಿಮಗೆ ತೊಂದರೆ ನೀಡುವುದಿಲ್ಲ” ಎಂದು ಜುಬೇರ್ ಟ್ವೀಟ್ ಮಾಡಿದ್ದಾರೆ ಎಂದು ಪೋಲೀಸರ ವಕೀಲರು ವಾದಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಜುಬೇರ್‌ ಪರ ವಕೀಲರು, “ಅದ ಮುಖ್ಯಮಂತ್ರಿಯೊಬ್ಬರ (ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್) ಹೇಳಿಕೆಯಾಗಿದ್ದು, ಅದನ್ನು ಜುಬೇರ್‌ ಪುನರುಚ್ಚರಿಸಿದ್ದರು” ಎಂದು ಹೇಳಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ವೀಡಿಯೊವನ್ನು ಜುಬೇರ್‌ ಎತ್ತಿ ತೋರಿಸಿದ್ದರು. ಇದಾಗಿ ಕೆಲವು ದಿನಗಳ ನಂತರ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಡ್ಯೂಟಿ ಮ್ಯಾಜಿಸ್ಟ್ರೇಟ್ ನಿನ್ನೆ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

2020 ರ ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಎಂದು ಅವರ ವಕೀಲರು ಒತ್ತಿಹೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಈಗಾಗಲೇ ಬಂಧನದ ವಿರುದ್ಧ ರಕ್ಷಣೆ ನೀಡಿದೆ. ಆದರೆ ಪೊಲೀಸ್ ಅಧಿಕಾರಿಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

2017 ರಲ್ಲಿ ಲಾಭರಹಿತವಾಗಿ ಸ್ಥಾಪಿತವಾದ ಆಲ್ಟ್ ನ್ಯೂಸ್ ವಿಶ್ವದ ಅತ್ಯಂತ ಪ್ರಮುಖವಾದ ಫ್ಯಾಕ್ಟ್‌‌ಚೆಕ್‌ ಔಟ್‌ಲೆಟ್‌ಗಳಲ್ಲಿ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂದು ರಾಜಸ್ತಾನದ ಕನಯ್ಯಲಾಲ್ ಅವರ ಹತ್ಯೆಯ ವಿಡಿಯೋವನ್ನು ಯಾರೂ ಶೇರ್ ಮಾಡಬೇಡಿ ಗಲಭೆ ಆಗತ್ತೆ , ಶೇರ್ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಅಂತಿವೆ ಸರಕಾರಗಳು. ಹಾಗೇ ಹಿಂದೆ ನೂಪುರ ಶರ್ಮಾ ಕೊಟ್ಟಿರುವ ಹೇಳಿಕೆಯ ವಿಡಿಯೋವನ್ನು ಇಡೀ ಪ್ರಪಂಚಕ್ಕೆ ಗೊತ್ತಾಗಿ ಪ್ರಚಾರವಾಗಿ ಇಡೀ ಜಗತ್ತೇ ಭಾರತದ ವಿರುದ್ಧ ಪ್ರತಿಭಟನೆ ಗಲಭೆ ಆಗುವಂತೆ ಪ್ರೇರೇಪಿಸಿದ್ದು ಕೂಡಾ ಈ ಆಲ್ಟ್ ನ್ಯೂಸ್ ಅಂದಮೇಲೆ ಇವರ ಮೇಲೂ ಕೇಸ್ ಆಗ್ಲೇಬೇಕಲ್ವಾ…… ರಾಜಸ್ತಾನದ ಟೈಲರ್ ಕೊಲೆಗೆ ಪರೋಕ್ಷ ಕಾರಣ ಈ ಜುಬೈರ್ ಆಗೋದಿಲ್ವಾ….. ನೂಪುರ್ ಶರ್ಮಾ ವಿಚಾರ ಇಷ್ಟೊಂದು ದೊಡ್ಡದಾದ ಕಾರಣ ನಿನ್ನೆಯ ಪ್ರತೀಕಾರಕ್ಕೆ ಕಾರಣ ಅಲ್ವಾ…..

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...