Homeರಾಜಕೀಯಈ ಫಲಿತಾಂಶ ಮತ್ತು ಆ ಚುನಾವಣೆ

ಈ ಫಲಿತಾಂಶ ಮತ್ತು ಆ ಚುನಾವಣೆ

- Advertisement -
- Advertisement -

ಗೌತಮ |

ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಮಾಧ್ಯಮಗಳು ಮತ್ತು ರಾಜಕೀಯ ವಿಶ್ಲೇಷಕರು 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಬಿಂಬಿಸಿವೆ. ಮೇಲ್ನೋಟಕ್ಕೆ ಅದು ಸರಿ ಎಂದು ಕೂಡ ಅನ್ನಿಸುತ್ತಿತ್ತು. ಅನ್ನಿಸುತ್ತಿದೆ. ರಾಜಕಾರಣದಲ್ಲಿ ಕಂಡದ್ದು, ಕೇಳಿದ್ದು ಮಾತ್ರ ‘ಸತ್ಯ’ ಅಲ್ಲ. ಹಾಗಾದರೆ ಕರ್ನಾಟಕದ ಚುನಾವಣೆಯು ಸೆಮಿಫೈನಲ್ ಅಲ್ಲವೇ? ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆಟದ ನಿಯಮಗಳು ರಾಜಕೀಯಕ್ಕೆ ಅನ್ವಯಿಸುವುದಿಲ್ಲ. ಜನ ರಾಜಕೀಯ ಆಯ್ಕೆಯನ್ನು ಆಟದ ರೀತಿಯಲ್ಲಿ ಮನರಂಜನೆ ಎಂದು ಭಾವಿಸುವುದಿಲ್ಲ. ಯಾಕೆಂದರೆ ಅವರಿಗೆ ತಮ್ಮ ಆಯ್ಕೆ ಉಂಟು ಮಾಡುವ ಅಪಾಯದ ಅರಿವು-ಮುನ್ಸೂಚನೆ ಇದ್ದೇ ಇರುತ್ತದೆ. ಎರಡು ಚುನಾವಣೆಯ ನಡುವಿನ ಅವಧಿಯಲ್ಲಿ ‘ಮತದಾರ ಪ್ರಭು’ ಅಸಹಾಯಕ. ಅದು ಅವನಿಗೆ ಗೊತ್ತಿರದ ಸಂಗತಿಯೇನಲ್ಲ. ಸಣ್ಣಪುಟ್ಟ ಬದಲಾವಣೆ-ಘಟನೆ-ಬೆಳವಣಿಗೆಗಳೂ ಸಂಕೇತ-ಸೂಚನೆ ನೀಡುತ್ತವೆ ಎನ್ನುವುದು ಒಂದು ಹಂತದ ಮಟ್ಟಿಗಿನ ತರ್ಕಕ್ಕೆ ಸರಿ. ತರ್ಕವು ಸತ್ಯದ ಸಮೀಪ ಹೋಗಬಹು ದಾದ ದಾರಿ ಮಾತ್ರ. ತರ್ಕದಿಂದಲೇ ಸತ್ಯವನ್ನು ಅರಿಯಲು-ಪಡೆಯಲು ಸಾಧ್ಯವಿಲ್ಲ. ಹಾಗಾದರೆ ಅದು ಹೇಗೆ ಸಿಗುತ್ತದೆ? ಅದನ್ನು ಪಡೆಯುವ ಕ್ರಮ ಏನು? ಅದು ವರ್ತಮಾನವನ್ನು ಹಿಡಿಯುವ ಹಂಬಲದ ಹಾಗೆ. ಸಿಕ್ಕಿತು ಎಂದು ಅನ್ನಿಸುವ ವೇಳೆಗಾಗಲೇ ಅದು ಬದಲಾಗಿ ಬಿಟ್ಟಿರುತ್ತದೆ. ಅದಿರಲಿ.

 ಒಮ್ಮೆ ಓಟು ಕೊಟ್ಟ ಮೇಲೆ ಮತದಾರ ಮೂಕಪ್ರೇಕ್ಷಕ ಆಗುತ್ತಾನೆ. ಐದು ವರ್ಷದವರೆಗೆ ಬರಿ ನೋಡುವುದಷ್ಟೇ ಅವನ ಕೆಲಸ. ಸಾಕ್ಷಿ ಆಗಿ ಉಳಿಯುತ್ತಾನೆ. ಭಾಗಿ ಆಗಲು ಅವಕಾಶವೇ ಇಲ್ಲದ ಮೇಲೆ ಸಾಕ್ಷಿ ಮಾತ್ರ ಆಗಿ ಉಳಿಯುವ ಅನಿವಾರ್ಯ ಸ್ಥಿತಿ ಅವನ ಮುಂದಿರುತ್ತದೆ. ಮಧ್ಯೆ ಬರುವ ರಾಜ್ಯಗಳ ಚುನಾವಣೆಗಳು ಆಯಾಭಾಗದ ಮನಸ್ಥಿತಿ ಮಾತ್ರ ಆಗಿರುತ್ತದೆ. ಇಡೀ ಇಂಡಿಯಾದ ಆಯ್ಕೆ ಆಗಿರುವುದಿಲ್ಲ. ಮತದಾರನಿಗೆ ತಾನು ಆಯ್ಕೆ ಮಾಡುತ್ತಿರುವುದು ‘ಲೋಕಸಭೆ’ ಮತ್ತು ‘ವಿಧಾನಸಭೆ’ಗೆ ಎಂಬುದರ ಸ್ಪಷ್ಟ ಅರಿವು ಇದ್ದೇ ಇದೆ. ಇರುತ್ತದೆ. ಅದಕ್ಕಾಗಿ ಭಾರತೀಯ ಮತದಾರರನ್ನು ಅನಕ್ಷರಸ್ಥ ಆದರೆ ಪ್ರಜ್ಞಾವಂತ ಎಂದು ಗುರುತಿಸುವುದು. ಕೋಟೆಯನ್ನು ಪ್ರಬಲಗೊಳಿಸಲು ಬಿಟ್ಟು ನೋಡುತ್ತ ಕುಳಿತು ಕೊಳ್ಳುವ ಮತದಾರನಿಗೆ ಕೋಟೆ ಕಟ್ಟಿದವ ತನ್ನ ಮುಂದೆ ಬಂದು ನಿಲ್ಲುತ್ತಾನೆ ಎಂದು ಗೊತ್ತಿದೆ. ಅದಕ್ಕಾಗಿ ಕೋಟೆಯ ನಿರ್ಮಾಣ ಕಾರ್ಯ ಎಷ್ಟೇ ಪ್ರಬಲವಾಗಿ ನಡೆದರೂ ನೋಡಿಯೇ ಇಲ್ಲದಂತೆ ಸುಮ್ಮನಿರುತ್ತಾನೆ. ನಿರ್ಣಾಯಕ ಹಂತ ಬರುವವರೆಗೆ ಕಾಯುವ ಆಟ ರಾಜಕಾರಣಿಗಳಿಗಿಂತ ಮತದಾರನಿಗೆ ಚೆನ್ನಾಗಿ ಗೊತ್ತಿದೆ. ಭಾರತದಲ್ಲಿ ಅಂತಹ ಹಲವು ನಿರ್ಣಯಗಳನ್ನು ತೋರಿಸಿದ್ದನ್ನು ನಾವು ನೋಡಿದ್ದೇವೆ. ನೋಡುತ್ತಿದ್ದೇವೆ.

ವಿಧಾನಸಭಾ ಚುನಾವಣೆಗಳು ಸಂಕೇತ-ಸೂಚನೆ ನೀಡುತ್ತವೆ. ಕರ್ನಾಟಕದ ಚುನಾವಣೆಯೂ 2019ಕ್ಕೆ ಸಂಬಂಧಿಸಿದಂತೆ ಸೂಚನೆ ನೀಡಿದೆ. ಕೇಂದ್ರದಲ್ಲಿರುವ ಸರ್ಕಾರದ ಬಗ್ಗೆ ಅಸಮಾಧಾನ ಇದ್ದರೂ ಅದು ವಿರೋಧಿ ಮತವಾಗಿ ಪರಿವರ್ತನೆ ಆಗಿಲ್ಲ. ಹಾಗೆಯೇ ಆಗದೇ ಇರುವುದಕ್ಕೆ ತನಗಾದ-ಆಗುತ್ತಿರುವ ತೊಂದರೆಗಿಂತ ಮುಸ್ಲಿಮರು ಮತ್ತು ದಲಿತರ ವಿರೋಧಿ ನಿಲುವೇ ಕಾರಣ. ಅಸ್ಪೃಶ್ಯರನ್ನು ಸಮಾನವಾಗಿ ನೋಡಬಯಸದ ಮನಸ್ಥಿತಿ ಹಾಗೂ ಮುಸ್ಲಿಮರ ಬಗ್ಗೆ ಇರುವ ಅನೂಹ್ಯ ಭೀತಿ ಇವೆರಡನ್ನೂ ಹುಟ್ಟಿಸುವಲ್ಲಿ ಮತ್ತು ಅದು ತಳಹಂತದವರೆಗೂ ಹರಡುವಂತೆ ಮಾಡುವಲ್ಲಿ ಕೇಂದ್ರದ ಆಡಳಿತಾರೂಢ ಪಕ್ಷ ಯಶಸ್ವಿಯಾಗಿದೆ. ಅದು ಕೇಂದ್ರದಲ್ಲಿ ರಾಜಕೀಯ ಪಕ್ಷದ ‘ಸಾಧನೆ’ ಎನ್ನುವುದಕ್ಕಿಂತ ಹೆಚ್ಚಾಗಿ ಅದನ್ನು ರೂಪಿಸುತ್ತಿರುವ ‘ಚಿಂತನಾ ಕ್ರಮ’ದ ‘ಗೆಲುವು’ ಎನ್ನುವುದರಲ್ಲಿ ಎರಡು ಮಾತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶವು ಬಹುಜನರ ಪರವಾಗಿ ರಾಜಕಾರಣ ಮಾಡುವುದರ ಅಪಾಯದ ಮುನ್ಸೂಚನೆ ನೀಡಿದೆ. ಹಾಗೆ ಅವರನ್ನು ಬಿಟ್ಟುಕೊಡದೇ ಪ್ರಬಲರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಬಗ್ಗೆ ಕಂಡುಕೊಳ್ಳಬೇಕಾದ ದಾರಿಯ ಬಗ್ಗೆ ಯೋಚಿಸಲು ವಿರೊಧಪಕ್ಷಗಳಿಗೆ ಇದು ಸಕಾಲ.

ವಾಸ್ತವವಾಗಿ ವಿಧಾನಸಭೆಯ ಚುನಾವಣೆಗೂ ಲೋಕಸಭಾ ಚುನಾವಣೆಗೂ ನೇರ ಸಂಬಂಧ ಇಲ್ಲ. ವಿಧಾನಸಭಾ ಚುನಾವಣೆಗಳು ಮತ್ತು ಅದರ ಫಲಿತಾಂಶಗಳು ಕೇಂದ್ರದಲ್ಲಿರುವ ಸರ್ಕಾರದ-ಪಕ್ಷದ ಆತ್ಮವಿಶ್ವಾಸ ಮತ್ತು ಓಟದ ವೇಗ ಹೆಚ್ಚಿಸುವ- ಕಡಿಮೆ ಮಾಡಲು ಕಾರಣವಾಗುತ್ತವೆ. ಹಾಗಂತ ವಿಧಾನಸಭಾ ಚುನಾವಣೆಗಳ ಫಲಿತಾಂಶವೇ ಲೋಕಸಭೆಯಲ್ಲಿ ಪ್ರತಿಧ್ವನಿಸುತ್ತದೆ ಎಂದು ಭಾವಿಸಬೇಕಿಲ್ಲ. ವಿಧಾನಸಭಾ ಚುನಾವಣೆಗಳಲ್ಲಿ ತೋರಿದ ನಿಲುವಿಗೆ ತೀರಾ ವ್ಯತಿರಿಕ್ತವಾದ ನಿಲುವು ತೋರಿಸಿದ ನೂರಾರು ಉದಾಹರಣೆಗಳು ನಮ್ಮ ಮುಂದಿವೆ. ಅಧಿಕಾರದಲ್ಲಿ ಇರುವವರ ಆತ್ಮವಿಶ್ವಾಸ ಹೆಚ್ಚುವಂತೆ ಮಾಡುವುದು ಕೂಡ ಮತದಾರ ತೋರಿಸುವ ‘ಜಾಣ ನಡೆ’ ಎಂದು ವ್ಯಾಖ್ಯಾನಿಸಬೇಕಾಗುತ್ತದೆ.

2014ರ ಲೋಕಸಭಾ ಚುನಾವಣೆಯ ನಂತರ ದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತದಾದದ್ದು ಬಿಟ್ಟರೆ ಉಳಿದಂತೆ ಎಲ್ಲ ಕಡೆಗಳಲ್ಲಿಯೂ ‘ಪ್ರಭುತ್ವ’ ತನ್ನ ಹಸ್ತ ಚಾಚುವಲ್ಲಿ ಯಶ ಕಂಡಂತೆ ಭಾಸವಾಗುತ್ತದೆ. ಬಿಹಾರದ ಮತದಾರ ನೀಡಿದ ಫಲಿತಾಂಶವೂ ಆಡಳಿತಾರೂಢರ ಪರವಾಗುವಂತೆ ಮಾಡಿದ್ದು ‘ಮುತ್ಸದ್ದಿ’ ರಾಜಕಾರಣಿಯೇ. ಉತ್ತರ ಪ್ರದೇಶದಲ್ಲಿ ಕೋಮುಭಾವನೆ ಕೆರಳಿಸುವ ಮೂಲಕ ವಿರೋಧಿಗಳನ್ನು ‘ಅಸಹಾಯಕ’ ಮಾಡುವಲ್ಲಿ ಕೇಂದ್ರ ಯಶಸ್ವಿಯಾದಂತೆ ಭಾಸವಾಗುತ್ತಿದೆ. ಪಂಜಾಬ್, ಗೋವಾ, ಅರುಣಾಚಲ ಪ್ರದೇಶ, ಸಿಕ್ಕಿಂಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ವಿರುದ್ಧ ಮತ ಚಲಾವಣೆಯಾದರೂ ‘ತಂತ್ರ’ದಿಂದ ಅಧಿಕಾರ ಅನುಭವಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕದ ಚುನಾವಣಾ ಫಲಿತಾಂಶವು ಕೂಡ ಮೇಲ್ನೋಟಕ್ಕೆ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ಪರವಾದ ನಿಲುವು ಎಂಬಂತೆ ಭಾಸವಾಗುತ್ತದೆ. ಕೇಂದ್ರದ ನಾಯಕರ ಆರ್ಭಟ- ತೋರಿದ ಆಸಕ್ತಿ ಹಾಗೆ ಅನ್ನಿಸುವಂತೆ ಮಾಡಿದೆ. ಲೋಕಸಭಾ ಚುನಾವಣೆಗೂ ಮುನ್ನ ನಡೆಯಲಿರುವ ಮಧ್ಯಪ್ರದೇಶ ಮತ್ತು ರಾಜಸ್ತಾನ ಚುನಾವಣೆಗಳು ಕೂಡ ನೀಡುವ ‘ಸಂಕೇತ’ವನ್ನೂ ಗಮನಿಸಬೇಕು. ಆದರೆ, ಸಂಕೇತಗಳೇ ಸತ್ಯವಾಗಿ ಪರಿವರ್ತನೆ ಆಗುತ್ತವೆ ಎಂದು ಭಾವಿಸಬೇಕಿಲ್ಲ. ತೋರುದೀಪ ಮಾತ್ರ ಗುರಿಯಲ್ಲ.

ರಾಜ್ಯಗಳ ದಂಡಯಾತ್ರೆಯಲ್ಲಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಅಧಿಕಾರ ಸಿಗದಂತೆ ಮಾಡುವ ಪ್ರಯತ್ನಗಳು ತೀರಾ ವೇಗವಾಗಿ ನಡೆಯುತ್ತಿವೆ. ಅದು ಬಹುತೇಕ ಸಫಲವಾಗುವ ಸಾಧ್ಯತೆಗಳೇ ಹೆಚ್ಚು. ವಿಧಾನಸಭೆ ಚುನಾವಣೆಗಳ ಫಲಿತಾಂಶಗಳ ಆಧಾರದ ಮೇಲೆ ‘ಭಾರತ’ ನಿರ್ಧರಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮುಂದೆ ನಿರ್ಣಾಯಕ ಗಳಿಗೆಯಲ್ಲಿ ‘ಮಾರಿಹಬ್ಬ’ ಮಾಡುವುದಕ್ಕಾಗಿಯೇ ಗುಟ್ಟು ಬಿಟ್ಟುಕೊಡದೆ ಕಾಯುತ್ತಿರುತ್ತಾನೆ ಎಂಬುದು ಸುಳ್ಳೇನಲ್ಲ. ಸಣ್ಣಪುಟ್ಟ ಸಂಗತಿಗಳಿಗೆ ಪ್ರತಿಕ್ರಿಯೆ ನೀಡಿ ಕೈ ಸುಟ್ಟುಕೊಳ್ಳಲು ಮತದಾರರು ಬಯಸುವುದಿಲ್ಲ. ನಿರ್ಣಾಯಕ ಘಟ್ಟಕ್ಕಾಗಿ ಕಾಯುತ್ತಾರೆ. 2019 ಅಂತಹ ‘ಕಾಯುವಿಕೆ’ಗೆ ಅಂತ್ಯ ಹಾಡಲಿದೆ. ಅದಕ್ಕಿಂತ ಮೊದಲಿನವುಗಳೆಲ್ಲ ಪ್ರಕ್ರಿಯೆ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...