Homeಮುಖಪುಟ50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ, ಬಹುಮತ ಸಾಬೀತುಪಡಿಸುತ್ತೇನೆ: ಬಂಡಾಯ ನಾಯಕ ಏಕನಾಥ್ ಶಿಂಧೆ

50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ, ಬಹುಮತ ಸಾಬೀತುಪಡಿಸುತ್ತೇನೆ: ಬಂಡಾಯ ನಾಯಕ ಏಕನಾಥ್ ಶಿಂಧೆ

- Advertisement -
- Advertisement -

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್‌ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ ಬೆನ್ನಲ್ಲೇ, ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ತಮ್ಮದೇ ಪಕ್ಷದ 50 ಶಾಸಕರು ಮತ್ತು ಸ್ವತಂತ್ರರ ಬೆಂಬಲ ನನಗಿದೆ. ನಾನು ಯಾವುದೇ ವಿಶ್ವಾಸಮತ ಯಾಚನೆಯಲ್ಲಿಯೂ ಗೆಲ್ಲುತ್ತೇನೆ ಎಂದು ಘೋಷಿಸಿದ್ದಾರೆ.

ಬುಧವಾರ ಗುವಾಹಟಿಯ ಕಾಮಾಕ್ಯಾ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಏಕನಾಥ್ ಶಿಂಧೆ, “ನಮ್ಮೊಂದಿಗೆ 50 ಶಾಸಕರಿದ್ದಾರೆ, ಮೂರನೇ ಎರಡರಷ್ಟು ಶಾಸಕರಿದ್ದಾರೆ. ನಾವು ಬಹುಮತ ಸಾಬೀತು ಬಗ್ಗೆ ಚಿಂತಿಸುವುದಿಲ್ಲ. ನಾವು ಅದರಲ್ಲಿ ಉತ್ತೀರ್ಣರಾಗುತ್ತೇವೆ ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ನಾಳೆ (ಜೂನ್ 30) ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವಂತೆ ಸೂಚಿಸಿದ್ದರು. ಆದರೆ, ಆದೇಶವನ್ನು ಪ್ರಶ್ನಿಸಿ ಉದ್ಧವ್‌ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಇದನ್ನೂ ಓದಿ: ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಖ್ಯೆ ಮತ್ತು ಬಹುಮತವು ಅತ್ಯಂತ ಮುಖ್ಯವಾದ ಕಾರಣ “ನಮ್ಮನ್ನು ಯಾರೂ ತಡೆಯಲು ಸಾಧ್ಯವಿಲ್ಲ”. ಯಾರೂ ದೇಶದ ಸಂವಿಧಾನ ಮತ್ತು ಆಡಳಿತವನ್ನು ಮೀರಿ ಹೋಗಬೇಕಾಗಿಲ್ಲ, ಇದು ಮಹಾರಾಷ್ಟ್ರದ ಪ್ರಗತಿ ಮತ್ತು ಹಿಂದುತ್ವದ ಪ್ರಗತಿಗಾಗಿ, ಬಹುಮತವು ನಮ್ಮೊಂದಿಗಿದೆ” ಎಂದು ಬಂಡಾಯ ನಾಯಕ ಶಿಂಧೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಅಸ್ತಿತ್ವದಲ್ಲಿರುವ ಸರ್ಕಾರಕ್ಕೆ ಪರ್ಯಾಯ ಸರ್ಕಾರವನ್ನು ರಚಿಸಲು ವಿರೋಧ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತಾರೆಯೇ ಎಂದು ಕೇಳಿದಾಗ “ನಾಳೆ ಬಹುಮತ ಸಾಬೀತಿನ ಪರೀಕ್ಷೆಯ ನಂತರ, ನಮ್ಮ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಎಂವಿಎ ಸರ್ಕಾರಕ್ಕೆ ಸೂಚಿಸಿರುವ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಹಿರಿಯ ವಕೀಲ ಎ.ಎಂ. ಸಿಂಘ್ವಿ ಅವರ ಮನವಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆ.ಬಿ ಪಾರ್ದಿವಾಲಾ ಅವರ ರಜಾಕಾಲದ ಪೀಠ ಪರಿಗಣಿಸಿದೆ. ಬುಧವಾರ ಸಂಜೆ 5 ಗಂಟೆಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.


ಇದನ್ನೂ ಓದಿ: ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ: ಸುಪ್ರೀಂ ಮೆಟ್ಟಿಲೇರಿದ ಸಿಎಂ ಉದ್ಧವ್, ಸಂಜೆ 5ಕ್ಕೆ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...