Homeಕರ್ನಾಟಕರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ಮುಖೇಶ್ ಅಂಬಾನಿಯವರ ಮೂವರು ಮಕ್ಕಳಾದ ಆಕಾಶ್‌, ಇಶಾ, ಅನಂತ್‌ ಅವರು ಅಂಬಾನಿ ಗುಂಪಿನ ಪ್ರಮುಖ ಜವಾಬ್ದಾರಿಗಳನ್ನು ವಹಿಸಿದ್ದಾರೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರು ತಮ್ಮ ಹಿರಿಯ ಮಗನಿಗೆ ದೂರಸಂಪರ್ಕ (ಟೆಲಿಕಾಂ) ಘಟಕದ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುವ ರಿಲಯನ್ಸ್‌ ನಾಯಕತ್ವ ಬದಲಾಯಿಸಿದ್ದಾರೆ.

ಕಳೆದ ವರ್ಷ ಮುಖೇಶ್‌ ಅಂಬಾನಿ, “ತನ್ನ ಮಕ್ಕಳು ವ್ಯವಹಾರದಲ್ಲಿ ಮಹತ್ವದ ಪಾತ್ರಗಳನ್ನು ವಹಿಸಲಿದ್ದಾರೆ. ರಿಲಯನ್ಸ್ ಸಂಸ್ಥೆಯು ಮಹತ್ವದ ನಾಯಕತ್ವ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಸುಮಾರು 200 ಡಾಲರ್‌ ಶತಕೋಟಿ ಮೌಲ್ಯದ ಭಾರತದ ಅತಿದೊಡ್ಡ ಸಂಸ್ಥೆಯಲ್ಲಿ ಅಂಬಾನಿಯವರ ಮೂರು ಮಕ್ಕಳು ಈಗ ಜವಾಬ್ದಾರಿ ವಹಿಸಿದ್ದಾರೆ. ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್‌ ಅಂಬಾನಿ- ಈ ಮೂವರು ಈಗ ಅಂಬಾನಿ ಗುಂಪಿನ ಕೇಂದ್ರ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಆಕಾಶ್ ಅಂಬಾನಿ

ಅಂಬಾನಿಯವರ ಹಿರಿಯ ಮಗ ಆಕಾಶ್, ಬ್ರೌನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿಯನ್ನು ಪೂರ್ಣಗೊಳಿಸಿದ್ದು, ಅಂಬಾನಿ ಗುಂಪಿನ ದೂರಸಂಪರ್ಕ ಘಟಕ ರಿಲಯನ್ಸ್ ಜಿಯೋದಲ್ಲಿ ನಾಯಕತ್ವ ವಹಿಸಿದ್ದಾರೆ.

ನಾನ್‌ಎಕ್ಸಿಕ್ಯೂಟಿವ್‌‌ ನಿರ್ದೇಶಕರಾಗಿ, ಕಂಪನಿಯ ಕಾರ್ಯತಂತ್ರ ಮತ್ತು ಬೆಳವಣಿಗೆಯ ಯೋಜನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು. ಈ ಕಂಪನಿಯು 400 ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಇದೀಗ ಅವರು ಟೆಲಿಕಾಂ ಘಟಕದ ಅಧ್ಯಕ್ಷರಾಗಲಿದ್ದಾರೆ ಎಂದು ರಿಲಯನ್ಸ್ ಮಂಗಳವಾರ ತಿಳಿಸಿದೆ.

ತನ್ನ ಸಂಸ್ಥೆಯ ಉದ್ಯೋಗಿಗಳನ್ನು ಸಕ್ರಿಯಗೊಳಿಸುವಲ್ಲಿ, ಉತ್ಪನ್ನಗಳ ಅಭಿವೃದ್ಧಿಯಲ್ಲಿ ಆಕಾಶ್ ತೊಡಗಿಸಿಕೊಂಡಿದ್ದಾರೆ. ಕ್ರಿಕೆಟ್ ವ್ಯವಹಾರದಲ್ಲಿಯೂ ಪಾತ್ರ ವಹಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ರಿಲಯನ್ಸ್ ಒಡೆತನದ ಮುಂಬೈ ಇಂಡಿಯನ್ಸ್ ತಂಡವನ್ನು ನಿರ್ವಹಿಸುವಲ್ಲಿ ಆಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳು 5.7  ಬಿಲಿಯನ್ ಡಾಲರ್‌‌ ಹೂಡಿಕೆ ಮಾಡುವಲ್ಲಿಯೂ ಆಕಾಶ್ ಪಾತ್ರ ವಹಿಸಿದ್ದಾರೆ. 2019ರಲ್ಲಿ ಆಕಾಶ್‌, ವಜ್ರದ ವ್ಯಾಪಾರಿಯ ಮಗಳಾದ ಶ್ಲೋಕಾ ಮೆಹ್ತಾ ಅವರನ್ನು ವಿವಾಹವಾಗಿದ್ದಾರೆ.

ಇಶಾ ಅಂಬಾನಿ

ಆಕಾಶ್ ಅವರ ಅವಳಿ ಸಹೋದರಿ ಇಶಾ ಅಂಬಾನಿ ಈಗಾಗಲೇ ಕಂಪನಿಯ ರಿಟೇಲ್, ಇ-ಕಾಮರ್ಸ್ ಮತ್ತು ಐಷಾರಾಮಿ ಯೋಜನೆಗಳ ಚಾಲನೆಯಲ್ಲಿ ಸಕ್ರಿಯರಾಗಿದ್ದಾರೆ. ರಿಲಯನ್ಸ್ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದೆ. ಕಂಪನಿಯ ಎ-ಜಿಯೊ ಇ-ಕಾಮರ್ಸ್ ಅಪ್ಲಿಕೇಶನ್ ವಿಸ್ತರಿಸುವಲ್ಲಿ ಇಶಾ ಮುಂದಾಳತ್ವ ವಹಿಸಿದ್ದಾರೆ. ಇಶಾ ಅವರು ಸ್ಟ್ಯಾನ್‌ಫೋರ್ಡ್‌ನಿಂದ ಬಿಸಿನೆಸ್ ಮ್ಯಾನೇಜ್‌ಮೆಟ್‌ ಪದವಿ ಪಡೆದಿದ್ದಾರೆ.

ಇದನ್ನೂ ಓದಿರಿ: ಸಿಎಂ ಸ್ಥಾನಕ್ಕೆ ಉದ್ಧವ್‌ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ಅನಂತ್ ಅಂಬಾನಿ

ಅನಂತ್ ಅವರು ಅಂಬಾನಿಯವರ ಕಿರಿಯ ಪುತ್ರರಾಗಿದ್ದು, ಅಂಬಾನಿ ಗ್ರೂಪ್‌ನ ಹೂಡಿಕೆಯ ಪ್ರಮುಖ ಕ್ಷೇತ್ರವಾದ ಹೊಸ ಇಂಧನ ವ್ಯವಹಾರದ ಮೇಲೆ ಅನಂತ್‌ ಗಮನ ಹರಿಸಿದ್ದಾರೆ.

ಹಸಿರು ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಲ್ಲಿ ರಿಲಯನ್ಸ್ ಸ್ಪರ್ಧಿಸುತ್ತಿದೆ.

ರಿಲಯನ್ಸ್ ಸಂಸ್ಥೆಯು ಸೌರ ಮತ್ತು ಹಸಿರು ಹೈಡ್ರೋಜನ್ ಸೇರಿದಂತೆ ಶುದ್ಧ ಇಂಧನ ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ. ಅನಂತ್‌‌ ಇದರಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿಂದೆ ಕಂಪನಿಯ ಕಾರ್ಯಕ್ರಮಗಳಲ್ಲಿ ಆಕಾಶ್ ಮತ್ತು ಇಶಾ ಜೊತೆಗೆ ಪ್ರೇಕ್ಷಕರನ್ನು ಉದ್ದೇಶಿಸಿ ಅನಂತ್‌ ಮಾತನಾಡಿದ್ದರು. ಅನಂತ್ 2017ರಲ್ಲಿ ಬ್ರೌನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...