Homeಕರ್ನಾಟಕರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ಮುಖೇಶ್ ಅಂಬಾನಿಯವರ ಮೂವರು ಮಕ್ಕಳಾದ ಆಕಾಶ್‌, ಇಶಾ, ಅನಂತ್‌ ಅವರು ಅಂಬಾನಿ ಗುಂಪಿನ ಪ್ರಮುಖ ಜವಾಬ್ದಾರಿಗಳನ್ನು ವಹಿಸಿದ್ದಾರೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರು ತಮ್ಮ ಹಿರಿಯ ಮಗನಿಗೆ ದೂರಸಂಪರ್ಕ (ಟೆಲಿಕಾಂ) ಘಟಕದ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುವ ರಿಲಯನ್ಸ್‌ ನಾಯಕತ್ವ ಬದಲಾಯಿಸಿದ್ದಾರೆ.

ಕಳೆದ ವರ್ಷ ಮುಖೇಶ್‌ ಅಂಬಾನಿ, “ತನ್ನ ಮಕ್ಕಳು ವ್ಯವಹಾರದಲ್ಲಿ ಮಹತ್ವದ ಪಾತ್ರಗಳನ್ನು ವಹಿಸಲಿದ್ದಾರೆ. ರಿಲಯನ್ಸ್ ಸಂಸ್ಥೆಯು ಮಹತ್ವದ ನಾಯಕತ್ವ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಸುಮಾರು 200 ಡಾಲರ್‌ ಶತಕೋಟಿ ಮೌಲ್ಯದ ಭಾರತದ ಅತಿದೊಡ್ಡ ಸಂಸ್ಥೆಯಲ್ಲಿ ಅಂಬಾನಿಯವರ ಮೂರು ಮಕ್ಕಳು ಈಗ ಜವಾಬ್ದಾರಿ ವಹಿಸಿದ್ದಾರೆ. ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್‌ ಅಂಬಾನಿ- ಈ ಮೂವರು ಈಗ ಅಂಬಾನಿ ಗುಂಪಿನ ಕೇಂದ್ರ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಆಕಾಶ್ ಅಂಬಾನಿ

ಅಂಬಾನಿಯವರ ಹಿರಿಯ ಮಗ ಆಕಾಶ್, ಬ್ರೌನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿಯನ್ನು ಪೂರ್ಣಗೊಳಿಸಿದ್ದು, ಅಂಬಾನಿ ಗುಂಪಿನ ದೂರಸಂಪರ್ಕ ಘಟಕ ರಿಲಯನ್ಸ್ ಜಿಯೋದಲ್ಲಿ ನಾಯಕತ್ವ ವಹಿಸಿದ್ದಾರೆ.

ನಾನ್‌ಎಕ್ಸಿಕ್ಯೂಟಿವ್‌‌ ನಿರ್ದೇಶಕರಾಗಿ, ಕಂಪನಿಯ ಕಾರ್ಯತಂತ್ರ ಮತ್ತು ಬೆಳವಣಿಗೆಯ ಯೋಜನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು. ಈ ಕಂಪನಿಯು 400 ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಇದೀಗ ಅವರು ಟೆಲಿಕಾಂ ಘಟಕದ ಅಧ್ಯಕ್ಷರಾಗಲಿದ್ದಾರೆ ಎಂದು ರಿಲಯನ್ಸ್ ಮಂಗಳವಾರ ತಿಳಿಸಿದೆ.

ತನ್ನ ಸಂಸ್ಥೆಯ ಉದ್ಯೋಗಿಗಳನ್ನು ಸಕ್ರಿಯಗೊಳಿಸುವಲ್ಲಿ, ಉತ್ಪನ್ನಗಳ ಅಭಿವೃದ್ಧಿಯಲ್ಲಿ ಆಕಾಶ್ ತೊಡಗಿಸಿಕೊಂಡಿದ್ದಾರೆ. ಕ್ರಿಕೆಟ್ ವ್ಯವಹಾರದಲ್ಲಿಯೂ ಪಾತ್ರ ವಹಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ರಿಲಯನ್ಸ್ ಒಡೆತನದ ಮುಂಬೈ ಇಂಡಿಯನ್ಸ್ ತಂಡವನ್ನು ನಿರ್ವಹಿಸುವಲ್ಲಿ ಆಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳು 5.7  ಬಿಲಿಯನ್ ಡಾಲರ್‌‌ ಹೂಡಿಕೆ ಮಾಡುವಲ್ಲಿಯೂ ಆಕಾಶ್ ಪಾತ್ರ ವಹಿಸಿದ್ದಾರೆ. 2019ರಲ್ಲಿ ಆಕಾಶ್‌, ವಜ್ರದ ವ್ಯಾಪಾರಿಯ ಮಗಳಾದ ಶ್ಲೋಕಾ ಮೆಹ್ತಾ ಅವರನ್ನು ವಿವಾಹವಾಗಿದ್ದಾರೆ.

ಇಶಾ ಅಂಬಾನಿ

ಆಕಾಶ್ ಅವರ ಅವಳಿ ಸಹೋದರಿ ಇಶಾ ಅಂಬಾನಿ ಈಗಾಗಲೇ ಕಂಪನಿಯ ರಿಟೇಲ್, ಇ-ಕಾಮರ್ಸ್ ಮತ್ತು ಐಷಾರಾಮಿ ಯೋಜನೆಗಳ ಚಾಲನೆಯಲ್ಲಿ ಸಕ್ರಿಯರಾಗಿದ್ದಾರೆ. ರಿಲಯನ್ಸ್ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದೆ. ಕಂಪನಿಯ ಎ-ಜಿಯೊ ಇ-ಕಾಮರ್ಸ್ ಅಪ್ಲಿಕೇಶನ್ ವಿಸ್ತರಿಸುವಲ್ಲಿ ಇಶಾ ಮುಂದಾಳತ್ವ ವಹಿಸಿದ್ದಾರೆ. ಇಶಾ ಅವರು ಸ್ಟ್ಯಾನ್‌ಫೋರ್ಡ್‌ನಿಂದ ಬಿಸಿನೆಸ್ ಮ್ಯಾನೇಜ್‌ಮೆಟ್‌ ಪದವಿ ಪಡೆದಿದ್ದಾರೆ.

ಇದನ್ನೂ ಓದಿರಿ: ಸಿಎಂ ಸ್ಥಾನಕ್ಕೆ ಉದ್ಧವ್‌ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ಅನಂತ್ ಅಂಬಾನಿ

ಅನಂತ್ ಅವರು ಅಂಬಾನಿಯವರ ಕಿರಿಯ ಪುತ್ರರಾಗಿದ್ದು, ಅಂಬಾನಿ ಗ್ರೂಪ್‌ನ ಹೂಡಿಕೆಯ ಪ್ರಮುಖ ಕ್ಷೇತ್ರವಾದ ಹೊಸ ಇಂಧನ ವ್ಯವಹಾರದ ಮೇಲೆ ಅನಂತ್‌ ಗಮನ ಹರಿಸಿದ್ದಾರೆ.

ಹಸಿರು ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಲ್ಲಿ ರಿಲಯನ್ಸ್ ಸ್ಪರ್ಧಿಸುತ್ತಿದೆ.

ರಿಲಯನ್ಸ್ ಸಂಸ್ಥೆಯು ಸೌರ ಮತ್ತು ಹಸಿರು ಹೈಡ್ರೋಜನ್ ಸೇರಿದಂತೆ ಶುದ್ಧ ಇಂಧನ ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ. ಅನಂತ್‌‌ ಇದರಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿಂದೆ ಕಂಪನಿಯ ಕಾರ್ಯಕ್ರಮಗಳಲ್ಲಿ ಆಕಾಶ್ ಮತ್ತು ಇಶಾ ಜೊತೆಗೆ ಪ್ರೇಕ್ಷಕರನ್ನು ಉದ್ದೇಶಿಸಿ ಅನಂತ್‌ ಮಾತನಾಡಿದ್ದರು. ಅನಂತ್ 2017ರಲ್ಲಿ ಬ್ರೌನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...