Homeಮುಖಪುಟಉದಯಪುರ್‌ ಘಟನೆ: ‘ತಾಲಿಬಾನೀಕರಣ’ ಚರ್ಚೆಯ ಜೊತೆಗೆ ಜುಬೈರ್‌‌ ಹೆಸರು ಥಳುಕುಹಾಕಿದ ಮಾಧ್ಯಮಗಳು!

ಉದಯಪುರ್‌ ಘಟನೆ: ‘ತಾಲಿಬಾನೀಕರಣ’ ಚರ್ಚೆಯ ಜೊತೆಗೆ ಜುಬೈರ್‌‌ ಹೆಸರು ಥಳುಕುಹಾಕಿದ ಮಾಧ್ಯಮಗಳು!

- Advertisement -
- Advertisement -

ರಾಜಸ್ಥಾನದ ಉದಯಪುರ್‌ನಲ್ಲಿ ನಡೆದ ಘಟನೆಯನ್ನು ‘ತಾಲೀಬಾನೀಕರಣ’ದ ಭಾಗವಾಗಿ ಚರ್ಚಿಸುತ್ತಿರುವ ಮಾಧ್ಯಮಗಳು, ಖ್ಯಾತ ಪತ್ರಕರ್ತ, ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಹೆಸರನ್ನು ಪ್ರಕರಣಕ್ಕೆ ಥಳುಕುಹಾಕುವ ಪ್ರಯತ್ನವನ್ನು ಮಾಡುತ್ತಿವೆ. ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವಿಶೇಷ ವರದಿ ಮಾಡಿದೆ.

“ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್‌ನ ಭೀಕರ ಹತ್ಯೆಯನ್ನು ಆಲ್ಟ್ ನ್ಯೂಸ್ ಸಹಸ್ಥಾಪಕ ಮೊಹಮ್ಮದ್ ಜುಬೇರ್ ಸಕ್ರಿಯಗೊಳಿಸಿದ್ದಾರೆ” ಎಂದು ನೀವು ನಂಬಬೇಕೆಂದು ಟೈಮ್ಸ್‌ನೌ ಪತ್ರಕರ್ತ ರಾಹುಲ್ ಶಿವಶಂಕರ್ ಹೇಳಿಬಿಟ್ಟರು.

“ಕಳೆದ ತಿಂಗಳು ಪ್ರವಾದಿ ಮುಹಮ್ಮದ್ ಕುರಿತು ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹೇಳಿದ್ದನ್ನು ಜುಬೈರ್ ಬೆಳಕಿಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅದಕ್ಕಾಗಿ ದಂಡ ತೆರಬೇಕಾಯಿತು. ಆ ದಂಡವನ್ನು ಇಂದು ಕನ್ಹಯ್ಯಾ ಲಾಲ್ ಪಾವತಿಸಿದ್ದಾರೆ” ಎನ್ನುತ್ತಾರೆ ರಾಹುಲ್‌. ಕಳೆದ ರಾತ್ರಿ ಟೈಮ್ಸ್ ನೌ ಪ್ರೈಮ್‌ಟೈಮ್ ಚರ್ಚೆಯು ಹೀಗೆ ನಡೆಯುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಬ್ಬರು ಮತಾಂಧರು ಕನ್ಹಯ್ಯಾ ಲಾಲ್‌ ಅವರ ಶಿರಚ್ಛೇದನ ಮಾಡಿದ ಭಯಾನಕ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು. ಆ ಇಬ್ಬರು ವ್ಯಕ್ತಿಗಳು (ಗೌಸ್ ಮೊಹಮ್ಮದ್ ಮತ್ತು ಮೊಹಮ್ಮದ್ ರಿಯಾಜ್ ಅಖ್ತರಿ) ಘಟನೆಯನ್ನು ಚಿತ್ರೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ನೂಪುರ್ ಶರ್ಮಾ ಅವರಿಗೆ ಬೆದರಿಕೆ ಹಾಕಿದರು.

ಸಾಮಾಜಿಕ ಮಾಧ್ಯಮದಲ್ಲಿ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದರಿಂದ, ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದರಿಂದ ಲಾಲ್ ಅವರನ್ನು ಟಾರ್ಗೆಟ್ ಮಾಡಲಾಯಿತು ಎಂದು ವರದಿಗಳು ಹೇಳುತ್ತವೆ.

ಟೈಮ್ಸ್ ನೌನಲ್ಲಿ ಪತ್ರಕರ್ತ ಶಿವಶಂಕರ್ ಇದನ್ನು “ಐಸಿಸ್ ಶೈಲಿಯ ಶಿರಚ್ಛೇದನೆ” ಎಂದು ಕರೆಯುತ್ತಲೇ ಜುಬೇರ್‌ ಹೆಸರನ್ನು ಎಳೆದುತಂದರು.

ಪ್ಯಾನೆಲಿಸ್ಟ್ ತೆಹ್ಸೀನ್ ಪೂನಾವಾಲಾ ಅವರನ್ನು ಉದ್ದೇಶಿಸಿ ಮಾತನಾಡಿದ ಶಿವಶಂಕರ್‌‌, “ಈ ಐಸಿಸ್ ಮಾದರಿಯ ಪ್ರತೀಕಾರಕ್ಕೆ ಸಕ್ರಿಯರು ಇದ್ದಾರೆ. ನೀವು ಇಂದು ರಾತ್ರಿ ಜುಬೈರ್ ಹೆಸರು ತೆಗೆದುಕೊಳ್ಳುತ್ತೀರಾ?… ಇಲ್ಲ, ನೀವು ಅವರ ಹೆಸರನ್ನು ತೆಗೆದುಕೊಳ್ಳಬೇಕು..” – ಹೀಗೆ ಮಾತನಾಡುತ್ತಾರೆ.

ನೂಪುರ್‌‌ ಶರ್ಮಾ ಪ್ರವಾದಿ ವಿರುದ್ಧ ಕಾಮೆಂಟ್ ಮಾಡಿದ ವೀಡಿಯೊ ಕ್ಲಿಪ್ ಜುಬೇರ್‌ ಹಂಚಿಕೊಂಡಿದ್ದನ್ನು ಶಿವಶಂಕರ್‌ ಪ್ರಸ್ತಾಪಿಸುತ್ತಾರೆ. ಶರ್ಮಾ ಅವರು ತಮ್ಮ ಅಭಿಪ್ರಾಯವನ್ನು ಟೈಮ್ಸ್ ನೌನಲ್ಲಿ ಹೇಳಿದರು. ಒಮ್ಮೆ ಹಿನ್ನಡೆ ಪ್ರಾರಂಭವಾದಾಗ, ಚಾನಲ್ ತಕ್ಷಣವೇ ಈ ವಿಷಯದಿಂದ ಅಂತರ ಕಾಯ್ದುಕೊಂಡಿದೆ. “ನಮ್ಮ ಚರ್ಚೆಗಳಲ್ಲಿ ಭಾಗವಹಿಸುವವರು ಸಂಯಮವನ್ನು ಕಾಪಾಡಿಕೊಳ್ಳಲು, ಸಹ ಪ್ಯಾನೆಲಿಸ್ಟ್‌ಗಳ ವಿರುದ್ಧ ಅಸಂಸದೀಯ ಭಾಷೆಯಲ್ಲಿ ಮಾತನಾಡದಂತೆ ನಾವು ಒತ್ತಾಯಿಸುತ್ತೇವೆ” ಎಂದು ಟೈಮ್ಸ್ ನೌ ತಿಳಿಸಿದ್ದನ್ನು ಉಲ್ಲೇಖಿಸಲಾಗಿದೆ.

ಕಳೆದ ರಾತ್ರಿಯ ಚರ್ಚೆಯಲ್ಲಿ ಶಿವಶಂಕರ್, ಜುಬೈರ್ ಅವರ ಈ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ. “ನೀವು ಪ್ರವಾದಿಯನ್ನು ನಿಂದಿಸಿದಾಗ, ನೀವು ದಂಡ ಕಟ್ಟಬೇಕಾಗುತ್ತದೆ. ಆ ದಂಡವನ್ನು ಇಂದು ಕನ್ಹಯ್ಯಾ ಲಾಲ್ ಪಾವತಿಸಿದ್ದಾರೆ” ಎನ್ನುತ್ತಾರೆ.

ಇಂಡಿಯಾ ಟುಡೇಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಉದಯ್‌ಪುರ ಹತ್ಯೆಯ ಕುರಿತು ಚರ್ಚೆ ನಡೆಸಿದಾಗ ಅಲ್ಲಿಯೂ ಜುಬೇರ್‌ ಹೆಸರು ಪ್ರಸ್ತಾಪವಾಗಿದೆ. “ರಾಜಸ್ಥಾನದಲ್ಲಿ ಐಸಿಸ್ ಶೈಲಿಯ ಹತ್ಯೆ” ಎಂಬ ಚರ್ಚೆ ನಡೆಯುತ್ತಿದ್ದಾಗ, “ಭಾರತವು ಕೋಮು ಹಿಂಸಾಚಾರವನ್ನು ಹೇಗೆ ನಿಲ್ಲಿಸಬಹುದು” ಎಂದು ಸರ್ದೇಸಾಯಿಯವರು ಬಿಜೆಪಿ ವಕ್ತಾರ ಆರ್‌ಪಿ ಸಿಂಗ್ ಅವರನ್ನು ಕೇಳುತ್ತಾರೆ. ಅದಕ್ಕೆ ಸಿಂಗ್, “ನೀವು ನೂಪುರ್ ಶರ್ಮಾ ಅಥವಾ ಬೇರೆ ಯಾರನ್ನಾದರೂ ಖಂಡಿಸಿದರೆ, ಜುಬೈರ್ ಅವರನ್ನೂ ಸಹ ಖಂಡಿಸಬೇಕು” ಎನ್ನುತ್ತಾರೆ.

ಅದಕ್ಕೆ ಪ್ರತಿಕ್ರಿಯೆ ನೀಡಿದ ಸರ್ದೇಸಾಯಿ, “ಉದಯಪುರ್ ಘಟನೆಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು” ಎಂದು ಸ್ಪಷ್ಟಪಡಿಸುತ್ತಾರೆ.

ತಾಲೀಬಾನೀನಿಕರಣದ ಚರ್ಚೆ

ಈ ಭೀಕರ ಘಟನೆಯನ್ನು ‘ತಾಲೀಬಾನೀಕರಣ’ ಎಂದು ಹೆಸರಿಸಿ ಚರ್ಚೆಗಳು ಮಾಧ್ಯಮಗಳಲ್ಲಿ ನಡೆದಿದೆ.

ಆಜ್ ತಕ್ ಮಾಧ್ಯಮದಲ್ಲಿ ಚಿತ್ರಾ ತ್ರಿಪಾಠಿ, “ರಾಜಸ್ಥಾನದಲ್ಲಿ ತಾಲಿಬಾನ್ ತರಹದ ಪರಿಸ್ಥಿತಿ ಏಕೆ ಸಂಭವಿಸಿದೆ?” ಅಥವಾ “ಇದು ಕ್ರೌರ್ಯದ ಕಥೆ, ತಾಲಿಬಾನಿ ಚಟುವಟಿಕೆ” ಎಂದು ತಿಳಿಸಿದ್ದಾರೆ.

ಚಿತ್ರಾ ತ್ರಿಪಾಠಿಯವರು, “ತಾಲಿಬಾನಿ” ಪದವನ್ನು ಬಳಸುವುದನ್ನು ಕಾಂಗ್ರೆಸ್ ವಕ್ತಾರ ಅಲೋಕ್ ಶರ್ಮಾ ಆಕ್ಷೇಪಿಸಿದಾಗ ಅವರು, “ನಿಮಗೆ ಅವಮಾನವಿಲ್ಲವೇ? ಮೂರು ಮಕ್ಕಳ ತಂದೆಯನ್ನು ಹಗಲಿನಲ್ಲಿ ನಿರ್ದಯವಾಗಿ ಕೊಲ್ಲಲಾಯಿತು. ಇಲ್ಲಿ ನೀವು ಆಂಕರ್‌ ಬಾಯಿಂದ ಯಾವ ರೀತಿಯ ಪದಗಳು ಬರಬೇಕು ಎಂದು ಹೇಳುತ್ತಿದ್ದೀರಿ” ಎನ್ನುತ್ತಾರೆ.

ನ್ಯೂಸ್ 18 ಇಂಡಿಯಾದಲ್ಲಿ, ಅಮಿಶ್ ದೇವಗನ್ ಅವರ ಕಾರ್ಯಕ್ರಮದಲ್ಲೂ ತಾಲೀಬಾನೀಕರಣ ಚರ್ಚೆಯ ವಿಷಯವಾಗಿತ್ತು. “ಉದಯಪುರದಲ್ಲಿ ತಾಲಿಬಾನ್ ಮಾದರಿಯ ಕೊಲೆ ನಡೆದಿದೆ” ಎನ್ನುತ್ತಾರೆ ದೇವಗನ್‌.

ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ ಮಾತನಾಡಿ, “ಕಳೆದ ಕೆಲವು ತಿಂಗಳುಗಳಲ್ಲಿ, ಈ ರೀತಿಯ ಹಲವಾರು ಘಟನೆಗಳು ನಡೆದಿವೆ. ಅಲ್ಲಿ ಹಿಂದೂಗಳ ಮೇಲೆ ಇಂತಹ ದಾಳಿಗಳನ್ನು ಮಾಡಲಾಗಿದೆ. ಅದು ರಾಮ ನವಮಿ ಮೆರವಣಿಗೆಯಾಗಲಿ ಅಥವಾ ಹನುಮಾನ್ ಉತ್ಸವ ಮೆರವಣಿಗೆಯಾಗಲಿ, ಮುಸ್ಲಿಮರು ಅವರ ಮೇಲೆ ದಾಳಿ ಮಾಡಿದ್ದಾರೆ” ಎಂದು ದೂರುತ್ತಾರೆ.

ಝೀ ನ್ಯೂಸ್‌ನಲ್ಲಿ ಆಂಕರ್‌ ರೋಹಿತ್ ರಂಜನ್ ‍ಮಾತನಾಡುತ್ತಾ, “ಈ ಘಟನೆಯು ಧಾರ್ಮಿಕ ಯುದ್ಧದ ಭಾಗವಾಗಿದೆ” ಎನ್ನುತ್ತಾರೆ.

2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಚಾರ್ಲಿ ಹೆಬ್ಡೊ ದಾಳಿ ಮತ್ತು 2020ರಲ್ಲಿ ಫ್ರೆಂಚ್ ಶಿಕ್ಷಕನ ಶಿರಚ್ಛೇದ ಪ್ರಕರಣವನ್ನು ಪ್ರಸ್ತಾಪಿಸಿದ ರಂಜನ್, “ಯಾರಾದರೂ ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದರೆ ಅವರನ್ನು ಕೊಲ್ಲಲಾಗುತ್ತದೆ. ಅಂತಹ ಹತ್ಯೆಯನ್ನು ಸಮರ್ಥಿಸಲಾಗುತ್ತದೆ ಎಂದು ಇಡೀ ಜಗತ್ತು ಮಾನಸಿಕವಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಲಾಗಿದೆ” ಎನ್ನುತ್ತಾರೆ. ವಿಚಿತ್ರವೆಂದರೆ, ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕಾರ್ಯಕ್ರಮದ ವಿಡಿಯೊವನ್ನು ಯೂಟ್ಯೂಬ್‌ನಲ್ಲಿ ತೆರವು ಮಾಡಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಎಬಿಪಿ ನ್ಯೂಸ್‌ನಲ್ಲಿ ರೂಬಿಕಾ ಲಿಯಾಕತ್, “ರಾ‘ಜಸ್ಥಾನವು ಮತಾಂಧತೆಯ ಪ್ರಯೋಗಾಲಯ ಆಗಿ ಮಾರ್ಪಟ್ಟಿದೆಯೇ?” ಎಂದು ಕೇಳುತ್ತಾರೆ. ಕಾರ್ಯಕ್ರಮದ ವಾಯ್ಸ್‌ವೋವರ್‌ನಲ್ಲಿ, “ಭಾರತದಲ್ಲಿ ತಾಲಿಬಾನ್ ತರಹದ ಮನಸ್ಥಿತಿಯ ಕೆಲವು ಜನರು ಇದ್ದಾರೆ ಎಂಬ ಪ್ರಶ್ನೆಯನ್ನು ಈ ವೀಡಿಯೊ ಎತ್ತುವುದಿಲ್ಲವೇ?” ಎಂದು ಕೇಳಲಾಗುತ್ತದೆ.

NDTVಯಲ್ಲಿ ನಿಧಿ ರಜ್ದಾನ್ ಅವರು ಈ ಕುರಿತು ಚರ್ಚೆಯನ್ನು ನಡೆಸಿದರು. ಕಾಂಗ್ರೆಸ್ ವಕ್ತಾರರಾಗಿರುವ ಪ್ಯಾನೆಲಿಸ್ಟ್ ಗುರುದೀಪ್ ಸಿಂಗ್ ಸಪ್ಪಲ್ ಅವರು ಮಾತನಾಡುತ್ತಾ, “ಈ ಕೊಲೆಯು ಅನಾಗರಿಕವಾದದ್ದು. ತ್ವರಿತವಾಗಿ ತನಿಖೆ ನಡೆಸಲಾಗುವುದು” ಎಂದು ಭರವಸೆ ನೀಡಿದರು.

ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಅವರು ಮಾತನಾಡಿ, “ಇದು ಐಸಿಸ್ ಶೈಲಿಯ ಮರಣದಂಡನೆ. ನಾವು ಎಚ್ಚರದಿಂದಿರಬೇಕು” ಅವರು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲೋಫರ್ ಜುಬೇರ್ ನ ಪರ ಮಾತಾಡೋ ಲೋಫರ್ ಗಳನ್ನ ಸರ್ಕಾರವೇ ಗುಂಡುಕ್ಕಿ ಕೊಲ್ಲುವ ಸಮಯ ಹತ್ತಿರದಲ್ಲಿ ಇದೆ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...