Homeಮುಖಪುಟಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಸಿಎಂ ನಿತೀಶ್ ಕುಮಾರ್, ಆರ್‌ಜೆಡಿಯೊಂದಿಗೆ ಹೆಚ್ಚು ಬೆರೆಯುತ್ತಿರುವುದು ಬಿಜೆಪಿಯನ್ನು ಆತಂಕಕ್ಕೆ ನೂಕಿದೆ.

- Advertisement -
- Advertisement -

ಬಿಹಾರದಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂನ ನಾಲ್ವರು ಶಾಸಕರು ವಿರೋಧ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ತೇಜಸ್ವಿ ಯಾದವ್ ಅವರ ಆರ್‌ಜೆಡಿ ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

243 ಸದಸ್ಯರ ವಿಧಾನಸಭೆಯಲ್ಲಿ ಆರ್‌ಜೆಡಿ ಈಗ 80 ಶಾಸಕರನ್ನು ಹೊಂದಿದೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 45 ಶಾಸಕರನ್ನು ಹೊಂದಿದೆ. ಅವರ ಮಿತ್ರ ಪಕ್ಷ ಬಿಜೆಪಿಗಿಂತ ಮೂರು ಹೆಚ್ಚು ಶಾಸಕರನ್ನು ಆರ್‌ಜೆಡಿ ಹೊಂದಿದೆ.

ಒಂದೆಡೆ ಆರ್‌ಜೆಡಿ ಪಕ್ಷ ಬಿಜೆಪಿಗೆ ಚಿಂತೆಯನ್ನು ನೀಡುತ್ತಿ‌ದರೇ, ಅದರ ಜೊತೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಮಿತ್ರ ಪಕ್ಷಕ್ಕಿಂತ ಹೆಚ್ಚಾಗಿ RJD ಯೊಂದಿಗೆ ಬೆರೆಯುತ್ತಿರುವುದು ಕೂಡ ಬಿಜೆಪಿಗೆ ಮತ್ತಷ್ಟು ಆತಂಕ ಉಂಟು ಮಾಡುತ್ತಿದೆ.

2020 ರ ಬಿಹಾರ ಚುನಾವಣೆಯಲ್ಲಿ, RJD ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ವಿರೋಧ ಪಕ್ಷವು ಬಹುಮತದ ಕೊರತೆಯನ್ನು ಅನುಭವಿಸಿತು. ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಸೇರಿ ಅಧಿಕಾರ ಪಡೆದರು. ಆದರೆ ಅವರ ಪಕ್ಷವು ಮೂರನೇ ಸ್ಥಾನವನ್ನು ಗಳಿಸಿದ್ದರಿಂದ ಮೈತ್ರಿಯಲ್ಲಿ ಸ್ಥಾನಮಾನವನ್ನು ಕಡಿಮೆಗೊಳಿಸಿಕೊಂಡಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ: ಹೊಸ ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನಕ್ಕೆ ಒಳಜಗಳ, ಏಕನಾಥ್ ಶಿಂಧೆ ಸ್ಪಷ್ಟನೆ

ಕಳೆದ ಎರಡು ವರ್ಷಗಳಲ್ಲಿ, ನಿತೀಶ್ ಕುಮಾರ್ ಅವರ ಬಿಜೆಪಿಯೊಂದಿಗಿನ ಸಂಬಂಧವು ಜಟಿಲವಾಗಿದೆ. ಇದು ಆಗಾಗ್ಗೆ ಹೊರ ಬಂದಿದೆ ಕೂಡ. ಇನ್ನು, ಜಾತಿ ಗಣತಿಯಂತಹ ವಿಷಯಗಳಲ್ಲಿ ಮುಖ್ಯಮಂತ್ರಿ ಮತ್ತು ತೇಜಸ್ವಿ ಯಾದವ್ ಇಬ್ಬರು ಒಂದೇ ರೀತಿಯಲ್ಲಿದ್ದಾರೆ. ಈ ಎಲ್ಲಾ ಲಕ್ಷಣಗಳು ಮತ್ತೆ ಇಬ್ಬರು ಒಂದಾಗಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿದೆ.

ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ತಮ್ಮ ಪಕ್ಷಕ್ಕೆ ಎಐಎಂಐಎಂನ ನಾಲ್ವರು ಶಾಸಕರ ಸೇರ್ಪಡೆಯನ್ನು ರಾಜ್ಯದಲ್ಲಿ “ಜಾತ್ಯತೀತ ಶಕ್ತಿಗಳ ಬಲವರ್ಧನೆ” ಎಂದು ಕರೆದಿದ್ದಾರೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ 2020 ರ ಬಿಹಾರ ಚುನಾವಣೆಯಲ್ಲಿ ಐದು ಸ್ಥಾನಗಳನ್ನು ಗೆದ್ದಿದೆ ಆದರೆ ಐವರು ಶಾಸಕರ ಪೈಕಿ ಒಬ್ಬರನ್ನು ಹೊರತುಪಡಿಸಿ ಎಲ್ಲರೂ ಆರ್‌ಜೆಡಿ ಸೇರಿದ್ದಾರೆ.

ಎಲ್ಲಾ ನಾಲ್ವರು ಶಾಸಕರು ಆರೋಗ್ಯ, ಶಿಕ್ಷಣ ಮತ್ತು ಇತರ ರೀತಿಯ ಸಾರ್ವಜನಿಕ ಕಲ್ಯಾಣದ ಬಗ್ಗೆ ಕಾಳಜಿ ವಹಿಸದ ಸರ್ಕಾರದ ನಿರಾಸಕ್ತಿಯಿಂದ ಬಳಲುತ್ತಿರುವ “ರಾಜ್ಯದ ಅತ್ಯಂತ ಬಡ, ಪ್ರವಾಹ ಪೀಡಿತ ಪ್ರದೇಶದಿಂದ ಬಂದವರು” ಎಂದು ತೇಜಸ್ವಿ ಯಾದವ್ ಒತ್ತಿ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಆರ್‌ಜೆಡಿ 75 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಉಪಚುನಾವಣೆಯಲ್ಲಿ ಮತ್ತೊಂದು ಸ್ಥಾನ ಗೆದ್ದಿದೆ. ಈಗ ನಾಲ್ವರು ಶಾಸಕರು ಸೇರಿ ಒಟ್ಟು 80 ಶಾಸಕರನ್ನು ಹೊಂದಿದೆ.

“ಎಲ್ಲಾ ಜಾತ್ಯತೀತ ಶಕ್ತಿಗಳು ಒಗ್ಗೂಡಿ ಬಲಿಷ್ಠವಾಗಬೇಕೆಂದು ನಾವು ಬಯಸುತ್ತೇವೆ. ಕೋಮುವಾದದ ವಿರುದ್ಧದ ಹೋರಾಟದಲ್ಲಿ ಆರ್‌ಜೆಡಿ ಪಾತ್ರವನ್ನು ಅತಿಯಾಗಿ ಹೇಳಲಾಗುವುದಿಲ್ಲ. ಬಿಹಾರದಲ್ಲಿ ಬಿಜೆಪಿಯು ಸ್ವಂತವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯವನ್ನು ಎಂದಿಗೂ ತೋರಿಸಲಿಲ್ಲ. ಎನ್‌ಡಿಎಯು ಬಿಹಾರದಲ್ಲಿ ಅನೈತಿಕ ವಿಧಾನಗಳಿಂದ ಅಧಿಕಾರವನ್ನು ಪಡೆದಿರಬಹುದು. ಆದರೆ, ಸಂಖ್ಯಾಬಲದಲ್ಲಿ ಮೂರನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಯನ್ನು ಸಹಿಸಿಕೊಳ್ಳುತ್ತಿದೆ” ಎಂದು ಆರ್‌ಜೆಡಿ ನಾಯಕ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...