Homeಮುಖಪುಟಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಸಿಎಂ ನಿತೀಶ್ ಕುಮಾರ್, ಆರ್‌ಜೆಡಿಯೊಂದಿಗೆ ಹೆಚ್ಚು ಬೆರೆಯುತ್ತಿರುವುದು ಬಿಜೆಪಿಯನ್ನು ಆತಂಕಕ್ಕೆ ನೂಕಿದೆ.

- Advertisement -
- Advertisement -

ಬಿಹಾರದಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂನ ನಾಲ್ವರು ಶಾಸಕರು ವಿರೋಧ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ತೇಜಸ್ವಿ ಯಾದವ್ ಅವರ ಆರ್‌ಜೆಡಿ ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

243 ಸದಸ್ಯರ ವಿಧಾನಸಭೆಯಲ್ಲಿ ಆರ್‌ಜೆಡಿ ಈಗ 80 ಶಾಸಕರನ್ನು ಹೊಂದಿದೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 45 ಶಾಸಕರನ್ನು ಹೊಂದಿದೆ. ಅವರ ಮಿತ್ರ ಪಕ್ಷ ಬಿಜೆಪಿಗಿಂತ ಮೂರು ಹೆಚ್ಚು ಶಾಸಕರನ್ನು ಆರ್‌ಜೆಡಿ ಹೊಂದಿದೆ.

ಒಂದೆಡೆ ಆರ್‌ಜೆಡಿ ಪಕ್ಷ ಬಿಜೆಪಿಗೆ ಚಿಂತೆಯನ್ನು ನೀಡುತ್ತಿ‌ದರೇ, ಅದರ ಜೊತೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಮಿತ್ರ ಪಕ್ಷಕ್ಕಿಂತ ಹೆಚ್ಚಾಗಿ RJD ಯೊಂದಿಗೆ ಬೆರೆಯುತ್ತಿರುವುದು ಕೂಡ ಬಿಜೆಪಿಗೆ ಮತ್ತಷ್ಟು ಆತಂಕ ಉಂಟು ಮಾಡುತ್ತಿದೆ.

2020 ರ ಬಿಹಾರ ಚುನಾವಣೆಯಲ್ಲಿ, RJD ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ವಿರೋಧ ಪಕ್ಷವು ಬಹುಮತದ ಕೊರತೆಯನ್ನು ಅನುಭವಿಸಿತು. ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಸೇರಿ ಅಧಿಕಾರ ಪಡೆದರು. ಆದರೆ ಅವರ ಪಕ್ಷವು ಮೂರನೇ ಸ್ಥಾನವನ್ನು ಗಳಿಸಿದ್ದರಿಂದ ಮೈತ್ರಿಯಲ್ಲಿ ಸ್ಥಾನಮಾನವನ್ನು ಕಡಿಮೆಗೊಳಿಸಿಕೊಂಡಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ: ಹೊಸ ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನಕ್ಕೆ ಒಳಜಗಳ, ಏಕನಾಥ್ ಶಿಂಧೆ ಸ್ಪಷ್ಟನೆ

ಕಳೆದ ಎರಡು ವರ್ಷಗಳಲ್ಲಿ, ನಿತೀಶ್ ಕುಮಾರ್ ಅವರ ಬಿಜೆಪಿಯೊಂದಿಗಿನ ಸಂಬಂಧವು ಜಟಿಲವಾಗಿದೆ. ಇದು ಆಗಾಗ್ಗೆ ಹೊರ ಬಂದಿದೆ ಕೂಡ. ಇನ್ನು, ಜಾತಿ ಗಣತಿಯಂತಹ ವಿಷಯಗಳಲ್ಲಿ ಮುಖ್ಯಮಂತ್ರಿ ಮತ್ತು ತೇಜಸ್ವಿ ಯಾದವ್ ಇಬ್ಬರು ಒಂದೇ ರೀತಿಯಲ್ಲಿದ್ದಾರೆ. ಈ ಎಲ್ಲಾ ಲಕ್ಷಣಗಳು ಮತ್ತೆ ಇಬ್ಬರು ಒಂದಾಗಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿದೆ.

ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ತಮ್ಮ ಪಕ್ಷಕ್ಕೆ ಎಐಎಂಐಎಂನ ನಾಲ್ವರು ಶಾಸಕರ ಸೇರ್ಪಡೆಯನ್ನು ರಾಜ್ಯದಲ್ಲಿ “ಜಾತ್ಯತೀತ ಶಕ್ತಿಗಳ ಬಲವರ್ಧನೆ” ಎಂದು ಕರೆದಿದ್ದಾರೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ 2020 ರ ಬಿಹಾರ ಚುನಾವಣೆಯಲ್ಲಿ ಐದು ಸ್ಥಾನಗಳನ್ನು ಗೆದ್ದಿದೆ ಆದರೆ ಐವರು ಶಾಸಕರ ಪೈಕಿ ಒಬ್ಬರನ್ನು ಹೊರತುಪಡಿಸಿ ಎಲ್ಲರೂ ಆರ್‌ಜೆಡಿ ಸೇರಿದ್ದಾರೆ.

ಎಲ್ಲಾ ನಾಲ್ವರು ಶಾಸಕರು ಆರೋಗ್ಯ, ಶಿಕ್ಷಣ ಮತ್ತು ಇತರ ರೀತಿಯ ಸಾರ್ವಜನಿಕ ಕಲ್ಯಾಣದ ಬಗ್ಗೆ ಕಾಳಜಿ ವಹಿಸದ ಸರ್ಕಾರದ ನಿರಾಸಕ್ತಿಯಿಂದ ಬಳಲುತ್ತಿರುವ “ರಾಜ್ಯದ ಅತ್ಯಂತ ಬಡ, ಪ್ರವಾಹ ಪೀಡಿತ ಪ್ರದೇಶದಿಂದ ಬಂದವರು” ಎಂದು ತೇಜಸ್ವಿ ಯಾದವ್ ಒತ್ತಿ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಆರ್‌ಜೆಡಿ 75 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಉಪಚುನಾವಣೆಯಲ್ಲಿ ಮತ್ತೊಂದು ಸ್ಥಾನ ಗೆದ್ದಿದೆ. ಈಗ ನಾಲ್ವರು ಶಾಸಕರು ಸೇರಿ ಒಟ್ಟು 80 ಶಾಸಕರನ್ನು ಹೊಂದಿದೆ.

“ಎಲ್ಲಾ ಜಾತ್ಯತೀತ ಶಕ್ತಿಗಳು ಒಗ್ಗೂಡಿ ಬಲಿಷ್ಠವಾಗಬೇಕೆಂದು ನಾವು ಬಯಸುತ್ತೇವೆ. ಕೋಮುವಾದದ ವಿರುದ್ಧದ ಹೋರಾಟದಲ್ಲಿ ಆರ್‌ಜೆಡಿ ಪಾತ್ರವನ್ನು ಅತಿಯಾಗಿ ಹೇಳಲಾಗುವುದಿಲ್ಲ. ಬಿಹಾರದಲ್ಲಿ ಬಿಜೆಪಿಯು ಸ್ವಂತವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯವನ್ನು ಎಂದಿಗೂ ತೋರಿಸಲಿಲ್ಲ. ಎನ್‌ಡಿಎಯು ಬಿಹಾರದಲ್ಲಿ ಅನೈತಿಕ ವಿಧಾನಗಳಿಂದ ಅಧಿಕಾರವನ್ನು ಪಡೆದಿರಬಹುದು. ಆದರೆ, ಸಂಖ್ಯಾಬಲದಲ್ಲಿ ಮೂರನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಯನ್ನು ಸಹಿಸಿಕೊಳ್ಳುತ್ತಿದೆ” ಎಂದು ಆರ್‌ಜೆಡಿ ನಾಯಕ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...