Homeಕರ್ನಾಟಕಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

’ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ’

- Advertisement -
- Advertisement -

ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕ ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ” ಎಂದಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

“ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ ಬಿಜೆಪಿ ಅವರು ಹೊತ್ತುಕೊಂಡು ಹೋಗುತ್ತಾರೆ” ಎಂದು ಟೀಕೆ ಮಾಡಿದ್ದಾರೆ.

“ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಖಂಡಿತಾ ಇದೆ. ಉದಾಹರಣೆಗೆ ಹುಣಸೂರಿನಲ್ಲಿ ಕರ್ನಾಟಕ ಬಿಜೆಪಿ ಅಭ್ಯರ್ಥಿ ಯಾರು..? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ..? ಇಡೀ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ” ಎಂದಿದ್ದಾರೆ.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ” ಎಂದು ಕಾಮಗ್ರೆಸ್‌ಗೆ ಬೇರೆ ಪಕ್ಷಗಳಿಮದ ಬರಲು ನಾಯಕರು ತಯಾರಾಗಿದ್ದಾರೆ ಎಂಬ ಸುಳಿವು ನೀಡಿದ್ದಾರೆ.

ಇನ್ನು, ಊದಯಪುರ ಹತ್ಯೆಯನ್ನು ಖಂಡಿಸಿರುವ ಅವರು, “ಉದಯಪುರದಲ್ಲಿ ಕನ್ಹಯ್ಯ ಲಾಲ್ ಕೊಲೆ  ಅತ್ಯಂತ ಖಂಡನೀಯ ಕೃತ್ಯ. ಕೊಲೆಯಾದ ದಿನವೇ ಇದನ್ನು ಹೇಳಿದ್ದೇನೆ. ಈ ರೀತಿ ತಲೆ ಕತ್ತರಿಸುವ ದುಷ್ಕರ್ಮಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ. ರಾಜಸ್ತಾನ ಸರ್ಕಾರ ಖಂಡಿತ ಆರೋಪಿಗಳಿಗೆ ತಕ್ಷ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳುವ ಭರವಸೆ ಇದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...