Homeಮುಖಪುಟಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

- Advertisement -
- Advertisement -

ಜೂನ್ 29 ಬುಧವಾರದಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಒಂದು ವಾರ ಕಾಲ ನಡೆದ ರಾಜಕೀಯ ಹೈಡ್ರಾಮ ಕ್ಲೈಮಾಕ್ಸ್‌ ಹಂತಕ್ಕೆ ತಲುಪಿದೆ.

ಕ್ಯಾಬಿನೆಟ್ ಮಂತ್ರಿ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು 40 ಇತರ ಶಾಸಕರು ಮೊದಲು ಸೂರತ್‌ನಲ್ಲಿ, ನಂತರ ಗುವಾಹಟಿಯಲ್ಲಿ ಮೊಕ್ಕಾಂ ಹೂಡಿದಾಗ ಬಿಕ್ಕಟ್ಟು ಪ್ರಾರಂಭವಾಯಿತು. ಶಿವಸೇನೆಯು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯಿಂದ ಹೊರಬಂದು ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸುವಂತೆ ಬಂಡಾಯ ಶಾಸಕರು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬಹುಮತ ಸಾಬೀತುಪಡಿಸಲು ಉದ್ಧವ್ ಠಾಕ್ರೆ ಸರ್ಕಾರಕ್ಕೆ ಆದೇಶಿಸಿದ ನಂತರ, 16 ಬಂಡಾಯ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಶಿವಸೇನೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಆದಾಗ್ಯೂ, ಸುಪ್ರೀಂಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿಯಿತು. ಬಹುಮತ ಸಾಬೀತಿಗೆ ಸೂಚಿಸಿದ್ದು, ಠಾಕ್ರೆ ಅವರ ರಾಜೀನಾಮೆಗೆ ಕಾರಣವಾಯಿತು.

ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಉದ್ಧವ್ ಠಾಕ್ರೆ ಅವರ ಅಧಿಕಾರ ಪಥನಕ್ಕೆ ಕಾರಣವಾದ ನಾಲ್ಕು ಅಂಶಗಳನ್ನು ‘ದಿ ಕ್ವಿಂಟ್‌’ ಜಾಲತಾಣ ಪಟ್ಟಿ ಮಾಡಿದೆ.

  1. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿ

ಶಿವಸೇನೆ 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಎರಡು ಪಕ್ಷಗಳು 161 ಸ್ಥಾನಗಳನ್ನು ಗೆದ್ದವು. 288 ಸ್ಥಾನಗಳ ವಿಧಾನಸಭೆಯಲ್ಲಿ ಅನುಕೂಲಕರ ಬಹುಮತವಿತ್ತು. ಆದರೆ ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಸ್ಥಾನವನ್ನು ಹಿಂತಿರುಗಿಸುವ ಭರವಸೆಯಿಂದ ಬಿಜೆಪಿ ಹಿಂದೆ ಸರಿದಿದ್ದರಿಂದ ಶಿವಸೇನೆಯು ಮೈತ್ರಿಯಿಂದ ಹೊರನಡೆಯಿತು.

ಇದರ ನಂತರ ಒಂದು ತಿಂಗಳ ಸುದೀರ್ಘ ರಾಜಕೀಯ ಹೈಡ್ರಾಮ ನಡೆಯಿತು. ಅಂತಿಮವಾಗಿ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಜೊತೆಗೆ ಸೇರಿ ಶಿವಸೇನೆ ಸರ್ಕಾರವನ್ನು ರಚಿಸಿತು.

ಈ ‘ಅಸಂಭವ’ ಮೈತ್ರಿ ಕೆಲವು ತಿಂಗಳುಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದರು. ಎಂವಿಎ ಸರ್ಕಾರದ ಎರಡೂವರೆ ವರ್ಷಗಳ ಸುದೀರ್ಘ ಅವಧಿಯ ಉದ್ದಕ್ಕೂ, ಮೈತ್ರಿಯೊಳಗೆ ಆಗಾಗ್ಗೆ ಬಿರುಕುಗಳು ಕಾಣಿಸಿಕೊಂಡಿದ್ದವು.

2. ಉದ್ಧವ್ ಠಾಕ್ರೆ – ರಾಜಕೀಯದಲ್ಲಿ ‘ಒಳ್ಳೆಯ ವ್ಯಕ್ತಿ’

ಉದ್ಧವ್ ಠಾಕ್ರೆ ನಿಜವಾಗಿಯೂ ರಾಜಕೀಯದಲ್ಲಿ ಒಳ್ಳೆಯ ವ್ಯಕ್ತಿ. ಶಾಂತ ಸ್ವಭಾವದವರು. ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ನಿಭಾಯಿಸಿದರೂ, ಅದರ ಕ್ರೆಡಿಟ್‌ ಪಡೆಯಲು ಮಿತಿಮೀರಿ ಯತ್ನಿಸುವುದಿಲ್ಲ. ಜೊತೆಗೆ ತಮ್ಮ ಮೈತ್ರಿ ಪಾಲುದಾರರಿಗೆ ವಿಧೇಯರಾಗಿದ್ದರು.

ಏಕನಾಥ್ ಶಿಂಧೆಯವರು ಉದ್ಧವ್ ಠಾಕ್ರೆ ಅವರ ಮೂಗಿನ ನೇರದಲ್ಲಿದ್ದ ಸುಮಾರು 40 ಶಾಸಕರನ್ನು ಕರೆದುಕೊಂಡು ಹೋಗಿದ್ದು ಸಣ್ಣ ಸಾಧನೆಯಲ್ಲ. ಈ ಕುರಿತು ಶಿವಸೇನೆ ಮುಖ್ಯಸ್ಥರು ಸ್ವಲ್ಪ ಯೋಚಿಸುವುದು ಅಗತ್ಯವಿತ್ತು.

3. ಇ.ಡಿ. ಭಯದಲ್ಲಿ ಬಾಬು ಬಯ್ಯಾ

ಬಂಡಾಯಗಾರ ಏಕನಾಥ್ ಶಿಂಧೆ ಸೇರಿದಂತೆ ಹಲವಾರು ಅತೃಪ್ತ ಶಾಸಕರು ತನಿಖಾ ಸಂಸ್ಥೆಗಳ ಭಯದಲ್ಲಿದ್ದಾರೆ ಎಂಬುದು ರಹಸ್ಯವಾದ ವಿಚಾರವೇನೂ ಅಲ್ಲ. ಇವರು ಕೇಂದ್ರೀಯ ಏಜೆನ್ಸಿಗಳಿಂದ ತಪ್ಪಿಸಿಕೊಳ್ಳಬೇಕಿತ್ತು. ಹೀಗಾಗಿ ಹೆಚ್ಚಿನ ಬಂಡಾಯ ಶಾಸಕರು ಎಂವಿಎ ಮೈತ್ರಿಯನ್ನು ತೊರೆದು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಶಿಂಧೆ ಅವರ ಬೇಡಿಕೆಯನ್ನು ಬೆಂಬಲಿಸಿದರು.

ಇದನ್ನೂ ಓದಿರಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

4. ಹಿಂದುತ್ವ ಪರಂಪರೆಯ ಅಗ್ಗಜಗ್ಗಾಟ

ಉದ್ಧವ್ ಠಾಕ್ರೆಯವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ಮೇಲೆ ಆಶ್ಚರ್ಯಕರ ರೀತಿಯಲ್ಲಿ ಹಲವು ಸಂದರ್ಭಗಳಲ್ಲಿ ಜಾತ್ಯತೀತ ನಿಲುವು ಪ್ರದರ್ಶಿಸಿದರು.

ಪ್ರವಾದಿಯವರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ, ಹನುಮಾನ್ ಚಾಲೀಸಾ ಪಠಣ ವಿವಾದ ಸಂದರ್ಭದಲ್ಲಿ ಬಿಜೆಪಿಯನ್ನು ವಿರೋಧಿಸಿದರು. “ಅಧಿಕಾರಕ್ಕಾಗಿ ಶಿವಸೇನೆ ಮತ್ತು ಬಾಳಾಸಾಹೇಬ್ ಅವರ ಹಿಂದುತ್ವ ರಾಜಕಾರಣದ ಗುರುತನ್ನು ಉದ್ಧವ್‌ ತ್ಯಜಿಸಿದ್ದಾರೆ” ಎಂದು ಬಿಂಬಿಸಲು ಅವರ ಜಾತ್ಯತೀತ ಪ್ರತಿಕ್ರಿಯೆಗಳು ಬಳಕೆಯಾದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...