Homeಮುಖಪುಟಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ...

ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಲು ಹೊರಟಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ. ಹಿಂದುತ್ವ ಮತ್ತು ಮರಾಠಾ ರಾಜಕೀಯ ಸಂಕೇತವಾಗಿ ಬಾಳಾ ಸಾಹೇಬ್‌ ಜೊತೆಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯಗಾರರು ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈಗ ಪಕ್ಷದ ಮೇಲೆ ಹಿಡಿತ ಸಾಧಿಸುವ ಹೋರಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯಗಾರರೇ ನಿಜವಾದ ಶಿವಸೇನಾ ನಾಯಕರು ಎಂದು ಶಿಂಧೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಘೋಷಿಸಿದೆ. ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಒಕ್ಕೂಟವನ್ನು ರಚಿಸುವ ಮೂಲಕ ಉದ್ಧವ್‌ ಠಾಕ್ರೆ ಅವರು ಬಾಳ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ದುರ್ಬಲಗೊಳಿಸಿದ್ದಾರೆ. “ಇದು ಅಸ್ವಾಭಾವಿಕ ಮೈತ್ರಿ” ಎಂಬುದು ಬಂಡಾಯಗಾರರ ವಾದವಾಗಿದೆ.

ದಾಖಲೆ ಪ್ರಕಾರ ಹೇಳುವುದಾದರೆ ಶಿಂಧೆ ಅವರಿಗೆ 39 (55ರಲ್ಲಿ) ಶಿವಸೇನಾ ಶಾಸಕರ ಬೆಂಬಲವಿದೆ. ಉದ್ಧವ್ ಠಾಕ್ರೆ ಅವರ ಜೊತೆ 15 ಮಂದಿ ಶಾಸಕರಿದ್ದಾರೆ.

‘ದ್ರೋಹ ಬಗೆದಿದ್ದಾರೆ’ ಎಂಬ ಬೇಸರದೊಂದಿಗೆ ರಾಜೀನಾಮೆ ನೀಡಿದ ಉದ್ಧವ್‌, ಬಂಡಾಯ ನಾಯಕ ಶಿಂಧೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಶಿವಸೇನೆಯು ಆಟೋ ರಿಕ್ಷಾ ಚಾಲಕರು, ಕೈಗಾಡಿ ಎಳೆಯುವವರನ್ನು ಸಂಸದರು ಮತ್ತು ಶಾಸಕರನ್ನಾಗಿ ಮಾಡಿದೆ” ಎಂದಿದ್ದಾರೆ ಉದ್ಧವ್‌. ಶಿಂಧೆಯವರು ಈ ಹಿಂದೆ ಥಾಣೆಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದದ್ದು ಇಲ್ಲಿ ಗಮನಾರ್ಹ.

ಠಾಕ್ರೆಯವರ ರಾಜೀನಾಮೆಯು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತು. ಅನಿರೀಕ್ಷಿತವಾಗಿ ಶಿಂಧೆ ಮುಖ್ಯಮಂತ್ರಿ ಪದವಿಗೇರಿದರು. ಬಿಜೆಪಿ ಆಡಳಿತವಿರುವ ಅಸ್ಸಾಂನ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ನೋಡಿಕೊಂಡ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

ರಿಕ್ಷಾ ಚಾಲಕರಾಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ರಿಕ್ಷಾ ಚಾಲಕರಾಗಿದ್ದ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವವರೆಗೆ ಬೆಳೆದರು. ಕಟ್ಟಾ ಶಿವಸೇನೆಯವರಾಗಿದ್ದ ಏಕನಾಥ್ ಸಂಭಾಜಿ ಶಿಂಧೆ, ರಾಜಕೀಯವಾಗಿ ಪ್ರಭಾವಿಯಾಗಿರುವ ಮರಾಠಾ ಸಮುದಾಯಕ್ಕೆ ಸೇರಿದವರು. ಸತಾರಾ ಜಿಲ್ಲೆಯವರಾದ ವೈ.ಬಿ.ಚವ್ಹಾಣ್, ಬಾಬಾಸಾಹೇಬ್ ಭೋಸಲೆ ಮತ್ತು ಪೃಥ್ವಿರಾಜ್ ಚವಾಣ್ ನಂತರದಲ್ಲಿ ಉನ್ನತ ಹುದ್ದೆಗೇರಿದ ಕೀರ್ತಿಗೆ ಶಿಂಧೆ ಭಾಜನರಾಗಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಬಿಜೆಪಿ, ಎಂವಿಎ ಸರ್ಕಾರವನ್ನು ಉರುಳಿಸಲು ಶಿಂಧೆ ಅವರನ್ನು ತನ್ನ ಗುರಾಣಿಯಾಗಿ ಬಳಸಿಕೊಂಡಿತು.

2004ರಿಂದ ಥಾಣೆಯ ಕಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಅವಧಿಯ ಶಾಸಕರಾಗಿದ್ದ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ನಂತರ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಯೋಜನೆಗಳ ಅನುಷ್ಠಾನಕಾರರಾಗಿ ತಮ್ಮ ಛಾಪು ಮೂಡಿಸಿದರು. ಕೋವಿಡ್ ಕಾರಣದಿಂದಾಗಿ ಉದ್ಧವ್‌ ಠಾಕ್ರೆ ಹೆಚ್ಚಾಗಿ ತಮ್ಮ ನಿವಾಸದಿಂದಲೇ ಕಾರ್ಯನಿರ್ವಹಿಸುತ್ತಿದ್ದಾಗ ಶಿಂಧೆ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು. ಸಾಂಕ್ರಾಮಿಕ ಬಿಕ್ಕಟ್ಟು, ನೈಸರ್ಗಿಕ ಅವಘಡ ಮೊದಲಾದ ಸಂದರ್ಭಗಳಲ್ಲಿ ಶಿಂಧೆ ಮುಂದೆ ನುಗ್ಗುತ್ತಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಹಣಕಾಸಿನ ಮುಗ್ಗಟ್ಟು ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡಬೇಕಾಗಿ ಬಂದ ಶಿಂಧೆ, ಶಿವಸೇನೆಯ ಭದ್ರಕೋಟೆಯಾಗಿದ್ದ ಥಾಣೆಗೆ ತೆರಳಿ ಮೀನು ಮಾರಾಟದಲ್ಲಿ ತೊಡಗಿದ್ದ ಕಂಪನಿಗೆ ಸೇರಿಕೊಂಡರು. ಆದರೆ, ಸಂಬಳ ಸಾಲದೆ ಕೆಲಸ ಬಿಟ್ಟು ರಿಕ್ಷಾ ಚಾಲಕರಾದರು. 1970ರ ದಶಕದಲ್ಲಿ ಶಿಂಧೆ, ಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮರಾಠಿ ರಾಜಕಾರಣದ ಮನವಿಗೆ ಆಕರ್ಷಿತರಾದರು. ಕೇಸರಿ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಶಿವಸೇನೆಯ ಫೈರ್‌ಬ್ರಾಂಡ್ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಶಿಂಧೆ ಬರುತ್ತಾರೆ. ಶಿವಸೇನೆಯ ಬಲವರ್ಧನೆಗೆ ಕೆಲಸ ಮಾಡಿದ ಶಿಂಧೆ, ದಿಘೆ ಅವರ ಆಪ್ತರಾಗುತ್ತಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಹೋರಾಟ ಸೇರಿದಂತೆ ವಿವಿಧ ಆಂದೋಲನಗಳಲ್ಲಿ ಶಿಂಧೆ ಭಾಗವಹಿಸಿದ್ದರು. ಶಿಂಧೆಯವರ ಉತ್ಸಾಹ, ಪಕ್ಷಕ್ಕಾಗಿ ಸಮರ್ಪಣಾ ಭಾವ, ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವ ಗುಣ ಅನೇಕರನ್ನು ಆಕರ್ಷಿಸಿತು. ಶಿಂಧೆಯವರ ಕೆಲಸದಿಂದ ಪ್ರಭಾವಿತರಾದ ದಿಘೆ, 1997ರಲ್ಲಿ ಪಕ್ಷದ ಟಿಕೆಟ್ ದೊರಕಿಸುವ ಮೂಲಕ ಚುನಾವಣಾ ರಾಜಕಾರಣಕ್ಕೆ ಎಳೆ ತರುತ್ತಾರೆ. ಹೀಗೆ ರಾಜಕೀಯ ಬದುಕು ಆರಂಭಿಸಿದ ಶಿಂಧೆ, ಮಹಾರಾಷ್ಟ್ರದ ಸಿಎಂ ಕುರ್ಚಿ ಹಿಡಿಯುವವರೆಗೆ ಬೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...