Homeಕರ್ನಾಟಕಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಿ”- ಹೀಗೆ ಪ್ರಚೋದನಾತ್ಮಕವಾಗಿ ವ್ಯಕ್ತಿಯೊಬ್ಬರು ಪಬ್ಲಿಕ್‌ ಟಿ.ವಿ. ಜೊತೆ ಮಾತನಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇಬ್ಬರು ಧಾರ್ಮಿಕ ಮೂಲಭೂತವಾದಿಗಳು ರಾಜಸ್ಥಾನದಲ್ಲಿ ಹಿಂದೂ ಟೈಲರ್‌ ಒಬ್ಬರನ್ನು ಭೀಕರವಾಗಿ ಕೊಂದ ಘಟನೆಯ ಕುರಿತು, ಪಬ್ಲಿಕ್‌ ಟಿ.ವಿ. ನಡೆಸುತ್ತಿದ್ದ ಜನಾಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು ಹೀಗೆ ವಿಷಕಾರಿಯಾಗಿ ಮಾತನಾಡಿದ್ದಾರೆ. ಈ ಪ್ರಚೋದನೆಯನ್ನು ಕಟುವಾದ ಪದಗಳಿಂದ ಖಂಡಿಸಬೇಕಿದ್ದ ಪಬ್ಲಿಕ್‌ ಟಿ.ವಿ. ನಿರೂಪಕ ಅರುಣ್‌ ಬಡಿಗೇರ್‌ ನಗುನಗುತ್ತಾ ಪ್ರತಿಕ್ರಿಯೆ ನೀಡುತ್ತಾ, “ಹೀಗೆಲ್ಲ ಮಾತನಾಡಬಾರದು” ಎಂದು ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾವಣಗೆರೆಯಿಂದ ಪಬ್ಲಿಕ್ ಟಿ.ವಿ.ಗೆ ಕರೆ ಮಾಡಿದ್ದ ವೀರಣ್ಣ ಹಾಗೂ ನಿರೂಪಕ ಅರುಣ್‌ ಬಡಿಗೇರ್‌ ನಡುವಿನ ಸಂಭಾಷಣೆ ಹೀಗಿತ್ತು:

ವೀರಣ್ಣ: ಮುಸಲ್ಮಾನರಿಗೆ ಯಾವುದೇ ರೀತಿಯ ಬೆಂಬಲ ಕೊಡಬಾರದು. ಪಬ್ಲಿಕ್‌ ಟಿ.ವಿ.ಗೆ ಮುಸಲ್ಮಾರನ್ನು ಕರೆಸಿ ಇದು ಮಾಡುತ್ತೀರಲ್ಲ, ಅದನ್ನು ಬಿಡಬೇಕು.

ಅರುಣ್ ಬಡಿಗೇರ್‌: ಅವರನ್ನು ಕರೆಸಲೇಬಾರದು ಅಂತೀರಾ?

ಇದನ್ನೂ ಓದಿರಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ವೀರಣ್ಣ: ಕರೆಸಲೇಬಾರದು ಅವರನ್ನು. ಅವರೊಂದು ಇವರೊಂದು ಹೇಳುತ್ತಾರೆ. ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು. ಅವರಿಗೆ ಸ್ಥಾನ ಮಾನ ಕೊಡಬಾರದು.

ಬಡಿಗೇರ್:  ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು.

ವೀರಣ್ಣ: ಅವರನ್ನು ಕರೆಸಲೇಬಾರದು. ಅವರಿಗೆ ಭಾರತ ದೇಶದಲ್ಲಿ ಯಾವುದೇ ಸ್ಥಾನಮಾನ ಕೊಡಬಾರದು. ಅನ್ನ ನೀರು ಹಾಕಿರುವವರು ನಾವು. ನಮ್ಮಮೇಲೆಯೇ ಬಾಲ ಬಿಚ್ಚುತ್ತಿದ್ದಾರೆ. ಫಸ್ಟ್‌ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಗುಂಡಿಕ್ಕಿ ಹೊಡೆದರೆ ಇವರೆಲ್ಲ ಸುಮ್ಮನಾಗುತ್ತಾರೆ.

(ಈ ಮಾತಿಗೆ ನಗುತ್ತಾ ಬಡಿಗೇರ್‌ ಪ್ರತಿಕ್ರಿಯೆ ನೀಡುತ್ತಾರೆ)

ಬಡಿಗೇರ್‌: ಸಾರ್‌, ನಾಯಕರ ವಿಚಾರದಲ್ಲಿ ಹಾಗೆಲ್ಲ ಮಾತನಾಡಬಾರದು. ಅವರ ಮೇಲೆ ಕೋಪ ಇದೆ ಎಂದು ಹೀಗೆಲ್ಲ ಹೇಳಬಾರದು. ಹಂತಕರಿಗೂ ನಿಮಗೂ ವ್ಯತ್ಯಾಸ ಏನಿದೆ?

ವೀರಣ್ಣ: ನಿನ್ನೆಯಿಂದ ಇವರ್‍ಯಾಕೆ ಮಾತನಾಡಿಲ್ಲ?

ಬಡಿಗೇರ್‌: ಭಿನ್ನಾಭಿಪ್ರಾಯ ಇರಲಿ. ಆದರೆ ನಮಗೂ ಅವರಿಗೂ ವ್ಯತ್ಯಾಸ ಇರುತ್ತದೆಯೇ? ತಮ್ಮ ಪಕ್ಷದಲ್ಲಿರುವ ವೋಟುಗಳಿಗೆ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಗುಂಡು ಹೊಡೆದು ಸಾಯಿಸಿ ಎಂದರೆ? ಇದು ಒಳ್ಳೆಯದಲ್ಲ.

ವೀರಣ್ಣ: ಒಂದು ಕಲ್ಲಂಗಡಿಯನ್ನು ಹೊಡೆದಿದ್ದಕ್ಕೆ ದಂಡ ಕಟ್ಟಿಸಲಿಲ್ಲವೇ?

ಬಡಿಗೇರ್‌: ಹೂಂ ಹೂಂ, ಹಾ… ಹಾ.. ಓಕೆ.

ವೀರಣ್ಣ: ಅವರ ಬೆಂಬಲದಿಂದಾಗಿಯೇ ನಿಗುರುತ್ತಿದ್ದಾರೆ.

ಬಡಿಗೇರ್‌: ಅವರನ್ನು ಬೆಂಬಲಿಸುವುದಕ್ಕಾಗಿಯೇ ಹೀಗೆ ಮಾಡುತ್ತಿದ್ದಾರೆ ಅಂತಾನಾ?

ವೀರಣ್ಣ: ಕರೆಕ್ಟ್‌ ಸರ್‌‌.

ಬಡಿಗೇರ್‌: ಓಕೆ ಓಕೆ

ವೀರಣ್ಣ: ಅವರನ್ನು ಫಸ್ಟ್‌ ನಿರ್ನಾಮ ಮಾಡಿದರೆ ಇವರೆಲ್ಲ ಪ್ಲಾಪ್‌ ಆಗುತ್ತಾರೆ.

ಬಡಿಗೇರ್‌: ಧನ್ಯವಾದಗಳು ವೀರಣ್ಣನವರೇ ನಮ್ಮ ಜೊತೆ ಮಾತನಾಡಿದ್ದಕ್ಕೆ…

(ಮುಂದಿನ ಕರೆಗೆ ಹೋಗುತ್ತಾರೆ)

ವರದಿಗಳಲ್ಲಿ ಪೂರ್ವಗ್ರಹ

ಕೋಮುದ್ವೇಷ ಪ್ರಕರಣಗಳಲ್ಲಿ ಮಾಧ್ಯಮಗಳು ಪಕ್ಷಪಾತಿಯಾಗಿ, ಪೂರ್ವಗ್ರಹ ಪೀಡಿತವಾಗಿ ವರದಿ ಮಾಡುವುದು ಇದು ಮೊದಲೇನಲ್ಲ. ಸುಳ್ಳುಗಳನ್ನು ವರದಿ ಮಾಡುವುದು ನಿಂತು ಹೋಗುವುದೂ ಇಲ್ಲ. ಯಾರೋ ಒಬ್ಬಾತ ಮಾಡುವ ತಪ್ಪನ್ನು ಇಡೀ ಸಮುದಾಯದ ತಲೆಗೆ ಕಟ್ಟುವ ಕೆಲಸವನ್ನು ಯಾವುದೇ ಮುಜುಗರವಿಲ್ಲದೆ ಮಾಧ್ಯಮಗಳು ಮಾಡುತ್ತಲೇ ಬಂದಿವೆ. ಅದು ರಾಜಸ್ಥಾನದ ಘಟನೆಯಲ್ಲೂ ಸಾಬೀತಾಗಿದೆ.

ಈ ಘಟನೆಯನ್ನು ಮುಸ್ಲಿಂ ಸಮುದಾಯ ಬಲವಾಗಿ ಖಂಡಿಸಿದೆ, ಕೊಲೆಗೈದವರನ್ನು ಗಲ್ಲಿಗೆ ಹಾಕುವಂತೆ ಒತ್ತಾಯಿಸಿದೆ. ಇಸ್ಲಾಂ ಯಾವುದೇ ಕಾರಣಕ್ಕೂ ಇಂತಹ ಕೃತ್ಯಕ್ಕೆ ಆಸ್ಪದ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಘಟನೆಯನ್ನು ವಿರೋಧಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಆದಿಯಾಗಿ ಅನೇಕ ರಾಜಕಾರಣಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಎಡಪರ ಚಿಂತಕರು, ಬಲಪಂಥೀಯರು, ಪ್ರಗತಿಪರರು- ಎಲ್ಲರೂ ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಆದರೂ ಮಾಧ್ಯಮಗಳಲ್ಲಿ ಮುಸ್ಲಿಂ ಸಮುದಾಯದ ಮೇಲೆ, ಬಿಜೆಪಿ ಹಾಗೂ ಸಂಘಪರಿವಾರೇತರ ನಾಯಕರ ಮೇಲೆ ವಿನಾಕಾರಣ ವಿಷಕಾರಲಾಗುತ್ತಿದೆ.

ಎಲ್ಲ ಜಾತಿ, ಜನಾಂಗದ ಜನರು ನೀಡುವ ತೆರಿಗೆಯಲ್ಲಿ ಸರ್ಕಾರಗಳು ನಡೆಯುತ್ತಿವೆ. ಆದರೆ ಕನಿಷ್ಠ ಸಾಂವಿಧಾನಿಕ ಕಾಳಜಿ ಇಲ್ಲದ ಮಾಧ್ಯಮಗಳು ಏಕಿಷ್ಟು ದ್ವೇಷವನ್ನು ಕಾರುತ್ತಿವೆ? ಘಟನೆಯನ್ನು ಎಲ್ಲ ವರ್ಗದ ಜನರು ಖಂಡಿಸಿದ್ದರೂ ಅದನ್ನು ಇಂಥವರು ಖಂಡಿಸಿಯೇ ಇಲ್ಲ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿರುವುದು ಏತಕ್ಕೆ? ಮಾಧ್ಯಮಗಳು ಈ ಸಾವಿನಲ್ಲಿ ರಾಜಕೀಯ ಹಿತಾಸಕ್ತಿ ಮೆರೆಯುತ್ತಿವೆಯೇ? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ ವ್ಯಕ್ತಿಯ ಮಾತನ್ನು ಹೆಡ್‌ಲೈನ್‌ ಮಾಡಿ ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಪಬ್ಲಿಕ್ ಟಿ.ವಿ. ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ಫೇಸ್ಬುಕ್ ಪೇಜ್‌ಗಳಲ್ಲಿ ತಲೆಕೆಟ್ಟವರಂತೆ ಕಾಮೆಂಟ್ ಮಾಡುವವರ ಅಭಿಪ್ರಾಯಗಳನ್ನೇ ಹೆಡ್ಲೈನ್ ಮಾಡುವ ಹಿಂದಿನ ಉದ್ದೇಶ ಏನಿತ್ತು? ಅಂತಾ harmful ಅಲ್ಲದ ಸಣ್ಣಪುಟ್ಟ ಪೋಸ್ಟ್‌ಗಳಿಗೂ ನೋಟೀಸ್ ಕೊಟ್ಟು ಬ್ಲಾಕ್ ಮಾಡುವ Facebook ಸಂಸ್ಥೆ community standard ನ್ನು ಉಲ್ಲಂಘಿಸಿದ ಅಡಿಯಲ್ಲಿ ನೋಟಿಸ್ ಯಾಕೆ ಜಾರಿ ಮಾಡಿಲ್ಲ? ಹೋಗಲಿ ಕಾಂಗ್ರೆಸ್ ಪಕ್ಷದ ಲೀಗಲ್ ಸೆಲ್ ಮತ್ತು IT Cell ಗಳು ನಿಜವಾಗಿಯೂ ಜೀವಂತವಾಗಿದ್ದಾವಾ? ಯಾವುದೇ ಪಕ್ಷದ ಮುಖಂಡರಾದರೂ ಈ ರೀತಿಯ ಹೆಡ್ಲೈನ್ ಕೊಟ್ಟು ಸಾರ್ವಜನಿಕವಾಗಿ ಎಂತಹ ಅಭಿಪ್ರಾಯ ಮೂಡಿಸುತ್ತಿದ್ದರೆ? ಇದರಿಂದ ಮುಂದಾಗಬಹುದಾದ ಅಪಾಯಗಳೇನು ಎಂಬ ಕನಿಷ್ಟ ಅರಿವಾದರೂ ಇದೆಯೇ? ಈ ಮೂಲಕ ಪಬ್ಲಿಕ್ ಟಿವಿ ಸಮಾಜಕ್ಕೆ ಯಾವ ಸಂದೇಶ ಕೊಡ್ತಿದೆ?” ಎಂದು ಸಾಮಾಜಿಕ ಕಾರ್ಯಕರ್ತ ಪ್ರಗತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಾಧ್ಯಮದವರು ಇಂದು ಕಿರುಚುತ್ತಾ ಕೂಗುತ್ತಾ ಮತಾಂಧ ಶಕ್ತಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿರುವುದಕ್ಕೆ ಸ್ಪಷ್ಟ ಉದಾರಹಣೆ ಇದು. ಸಮಾಜದ ಶಾಂತಿ ಕೆಡಿಸಲೆಂದೇ ಕೆಲ ಮಾಧ್ಯಮಗಳು ಇಂದು ಕೆಲಸ ನಿರ್ವಹಿಸುತ್ತಿರುವಂತಿದೆ. ಜನರು ತಪ್ಪು ಮಾತನಾಡಿದಾಗ ತಿದ್ದಬೇಕಾದ ಮಾಧ್ಯಮದವರು ಇಂತಹ ತಲೆ ಬರಹ ಕೊಟ್ಟಿರುವುದು ಅವರ ಹಿಂಸಾ ವಿರೋಧಿ ಕೌರ್ಯ ಮನಸ್ಥಿತಿಯನ್ನು ತೋರಿಸಿದೆ. ನಿಸ್ಸಂಶಯವಾಗಿ ಇದು ಮಾಧ್ಯಮ ಭಯೋತ್ಪಾದಕತೆ” ಎಂದು ಲೇಖಕಿ ಚೈತ್ರಿಕಾ ಹರ್ಗಿ ಅಭಿಪ್ರಾಯಪಟ್ಟಿದ್ದಾರೆ.

“ಹಿಂದೂ ಮುಸ್ಲಿಂ ಸಂಘರ್ಷದ ಸೂಕ್ಷ್ಮತೆ ಅರಿವಿದ್ದ ಮಾಧ್ಯಮ ಇಂತಹ ವಿಚಾರದಲ್ಲಿ ಜನಾಭಿಪ್ರಾಯ ಕೇಳುವ ಕೆಲಸ ಮಾಡಲ್ಲ. ತಲೆಕೆಟ್ಟ ಒಬ್ಬ ಹೀಗೆ ವಿರೋಧ ಪಕ್ಷದ ನಾಯಕರನ್ನು ಕೊಲ್ಲಬೇಕು ಎಂದು ಹೇಳಿದಾಗ ಆ ಕರೆ ಮಾಡಿದ ವ್ಯಕ್ತಿಗೆ ನೋಡಪ್ಪ ಹೀಗೆ ಹೇಳೋದು ಕಾನೂನಿನ ಉಲ್ಲಂಘನೆ, ಅದು ಮತ್ತಷ್ಟು ಸಂಘರ್ಷಕ್ಕೆ ಪ್ರಚೋದನೆ ಕೊಟ್ಟಂತೆ ಎಂದು ಮನವರಿಗೆ ಮಾಡಬೇಕಿತ್ತು. ಆದರೆ ಆತನ‌ ಹೇಳಿಕೆಯನ್ನೇ ಹೆಡ್ಡಿಂಗ್ ಹಾಕಿ ಪ್ರಸಾರ ಮಾಡುವ ಮೂಲಕ ಚಾನೆಲ್ ಆತನ ಹೇಳಿಕೆಗೆ ಬೆಂಬಲ ಸೂಚಿಸಿದೆ. ಈಗ ಈ ಚಾನೆಲ್ ವಿರುದ್ಧ ಪೊಲೀಸ್ ಇಲಾಖೆಯೇ ಕೇಸು ದಾಖಲಿಸಬೇಕು. ಕಾಂಗ್ರೆಸ್ ಕೂಡಾ ದೂರು ಕೊಡಬೇಕು. ಈ ನಾಯಕರ ಕೊಲೆ ಆದರೆ ಅದರ ಹೊಣೆ ರಂಗನಾಥ ಮತ್ತು ಬಡಿಗೇರ ಹೊರುತ್ತಾರೆಯೇ? ಹಿಂದೆ ಕಲಬುರ್ಗಿಯವರ ವಿಚಾರದಲ್ಲಿ ಮಾಧ್ಯಮಗಳ ವರದಿ ಕೊಲೆಗೆ ಪ್ರೇರಣೆ ನೀಡಿದ್ದವು ಎಂಬ ಆರೋಪ ಕೇಳಿಬಂದಿತ್ತು” ಎಂದು ಹಿರಿಯ ಪತ್ರಕರ್ತೆ ಹೇಮಾ ವೆಂಕಟ್‌‌ ಎಚ್ಚರಿಸಿದ್ದಾರೆ.

“ಕೆಲ ತಿಂಗಳ ಹಿಂದೆ ಅರುಣ್ ಬಡಿಗೇರ ಮತ್ತು ರಂಗನಾಥರ ವಿರುದ್ಧ ಜಾಮೀನುರಹಿತ ಸೆಕ್ಷನ್ ಅಡಿ FIR ದಾಖಲಾಗಿತ್ತು. ಅದರ ಕತೆ ಏನಾಯ್ತು? ಮುಸ್ಲಿಂ ವ್ಯಕ್ತಿಗಳು ಹಿಂದೂಗಳನ್ನು ಕೊಂದಾಗ ಕೆರಳುವ ಹಿಂದೂ ಸಮಾಜ, ಹಿಂದೂಗಳು ಮುಸ್ಲಿಮರ ಕೊಲೆ ಮಾಡಿದಾಗ ಅವರಿಗೆ ಷಹಬ್ಬಾಸ್ ಹೇಳುವುದು, ಸನ್ಮಾನ ಮಾಡುವುದನ್ನು ಯಾಕೆ ವಿರೋಧಿಸಲ್ಲ? ನರಗುಂದರ ಮುಸ್ಲಿಂ ಯುವಕನನ್ನು ಬಜರಂಗಿಗಳು ಕೊಂದರಲ್ಲ, ಧರ್ಮಸ್ಥಳದ ದಲಿತ ದಿನೇಶನನ್ನು ಬಜರಂಗಿಯೊಬ್ಬ ಕೊಂದನಲ್ಲ, ಬಜರಂಗಿ ಶಂಭೂಲಾಲ್ ಕೇಸರಿಶಾಲು, ನಾಮ‌ ಹಾಕೊಂಡು ಮುಸ್ಲಿಂ ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಅದರ ವಿಡಿಯೋ ಮಾಡಿ ಸಂಭ್ರಮಿಸಿದನಲ್ಲ ಆಗ ಟಿವಿಯವರು ಜನಾಭಿಪ್ರಾಯ ಕೇಳಿದರೇ? ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕೊಲೆಯಾದರೆ ಯಾರು ಜವಾಬ್ದಾರರು?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳ್ಳಂಗಡಿ ಹೊಡೆದಾಗ ಬಾಯಿ ಬಡಿದುಕೊಂಡ ಬೋಳಿಮಕ್ಕಳು ,ಕನ್ಹಯ್ಯ ಕೊಲೆ ಆದಾಗ ಬಾಯಿ ಬಿಡದೇ ಇರೋ ಹಂದಿ ಮಕ್ಕಳನ್ನು ಇನ್ನೇನು ಮಾಡಬೇಕು ಬೇಸಡಿಕೆಗಳೇ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...