Homeಮುಖಪುಟಸೋಮವಾರ ಬಹುಮತ ಯಾಚಿಸಲಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ಉದ್ಧವ್, ಆದಿತ್ಯ ಠಾಕ್ರೆ ಉಚ್ಛಾಟನೆ?

ಸೋಮವಾರ ಬಹುಮತ ಯಾಚಿಸಲಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ಉದ್ಧವ್, ಆದಿತ್ಯ ಠಾಕ್ರೆ ಉಚ್ಛಾಟನೆ?

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ 40 ಶಿವಸೇನಾ ಪಕ್ಷದ ಶಾಸಕರ ಬೆಂಬಲದೊಂದಿಗೆ ಬಂಡಾಯವೆದ್ದು, ಬಿಜೆಪಿ ಬೆಂಬಲದೊಂದಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸೋಮವಾರ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮಾಜಿ ಸಿಎಂ ಉದ್ಧವ್ ಠಾಕ್ರೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ, ಸಭೆಗೆ ಹಾಜರಾಗದ ಆರೋಪದ ಮೇಲೆ ಸಿಎಂ ಶಿಂಧೆ ಸೇರಿದಂತೆ 15 ಜನ ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದೆ. ಅದರ ಸಿಂಧುತ್ವವನ್ನು ಪ್ರಶ್ನಿಸಿ ಸಿಎಂ ಶಿಂಧೆ ಸಹ ಅರ್ಜಿ ಸಲ್ಲಿಸಿದ್ದಾರೆ.

55 ಶಿವಸೇನೆ ಶಾಸಕರ ಪೈಕಿ 39 ಜನ ತನ್ನ ಜೊತೆಗಿದ್ದಾರೆ ಎಂದು ವಾದಿಸುತ್ತಿರುವ ಸಿಎಂ ಶಿಂಧೆ ತನ್ನದೇ ಅಧಿಕೃತ ಶಿವಸೇನೆ ಎಂದಿದ್ದಾರೆ. ಅವರು ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು (ಮೂರನೇ ಎರಡು ಬಹುಮತ) ಹೊಂದಿದ್ದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಬಹುದು. ಹಾಗಾಗಿ ಮಾಜಿ ಸಿಎಂ ಉದ್ಧವ್ ಠಾಕ್ರೆಯ ನಿರ್ದೇಶನಗಳನ್ನು ಪಾಲಿಸುವ ಅಗತ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಮೂರನೇ ಎರಡು ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಸೋಮವಾರದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸಿಎಂ ಶಿಂಧೆ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಸೇರಿದಂತೆ ಅವರ ಜೊತೆಗಿರುವ 15 ಶಾಸಕರಿಗೆ ತನ್ನ ಪರ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಲಿದ್ದು, ವಿಪ್ ಉಲ್ಲಂಘಿಸಿದರೆ ಅವರನ್ನು ಉಚ್ಛಾಟಿಸುವ ಸಾಧ್ಯತೆಯಿದೆ. ಅಂತ ಸಂದರ್ಭದಲ್ಲಿ ಅವರ ತಂದೆ ಬಾಳಾ ಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಶಿವಸೇನೆಯನ್ನು ಅವರು ಕಳೆದುಕೊಳ್ಳಲಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್ ಮಾಜಿ ಸಿಎಂ ಉದ್ಧವ್ ಠಾಕ್ರೆಯವರ ಮನವಿ ಪುರಸ್ಕರಿಸಿ 15 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದರೆ ಮಾತ್ರ ಶಿವಸೇನೆ ಉದ್ಧವ್ ಠಾಕ್ರೆ ಕೈಯಲ್ಲಿ ಉಳಿಯಲಿದೆ. ಆದರೆ ಆ ಸಾಧ್ಯತೆ ಕಡಿಮೆಯಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ. ಸದ್ಯ ಏಕನಾಥ್ ಶಿಂಧೆ ತನಗೆ 175ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ; ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಇತ್ತೀಚಿಗೆ ಬಿಹಾರದಲ್ಲಿ ಲೋಕಜನಶಕ್ತಿ ಪಕ್ಷದ ಐವರು ಸಂಸದರಲ್ಲಿ ನಾಲ್ವರು ಸಾಮೂಹಿಕವಾಗಿ ಬಿಜೆಪಿ ಸೇರಿದರು. ಅದನ್ನು ಚಿರಾಗ್ ಪಾಸ್ವಾನ್ ಪ್ರಶ್ನಿಸಿದ್ದರು. ಆದರೆ ಪಕ್ಷಾಂತಗೊಂಡವರು ಮೂರನೇ ಎರಡು ಬಹುಮತ ಹೊಂದಿದ್ದ ಕಾರಣ ಇಡೀ ಪಕ್ಷವೇ ಅವರದ್ದಾಗಿ ಅವರು ಬಿಜೆಪಿಯೊಡನೆ ವಿಲೀನಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...